ಪ್ರಪಂಚದ ಸಕಲ ಜೀವಿಗಳ ಮೇಲೆ ಸೃಷ್ಟಿಕರ್ತನು ದಯೆ ತೋರಲಿ : ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್-ಬುಖಾರಿ (ಕೂರತ್ ತಂಙಳ್).

ರಿಪ್ಪನ್ ಪೇಟೆ : ಪ್ರಪಂಚದ ಸಕಲ ಜೀವಿಗಳ ಮೇಲೆ ಸೃಷ್ಟಿಕರ್ತನ ದಯೆ ಇರಲಿ, ಪ್ರಪಂಚಕ್ಕೆ ಅಂಟಿಕೊಂಡಿರುವ ಕೊರೊನಾ ಮಹಾಮಾರಿ ಮುಕ್ತವಾಗಲಿ ಎಂದು ಮುಸ್ಲಿಂ ಧರ್ಮಗುರು ಬಹು|| ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್-ಬುಖಾರಿ (ಕೂರತ್ ತಂಙಳ್) ಹೇಳಿದರು. ಇಲ್ಲಿನ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ನೂತನ ಉಳೂಖಾನ ಶಿಲಾನ್ಯಾಸ,ಮಹಿಳಾ ಷರಿಯತ್ ಕಾಲೇಜು ಮತ್ತು ಪ್ರತ್ಯೇಕ ಮಹಿಳಾ ನಮಾಜ್ ಕೊಠಡಿ ಉದ್ಘಾಟನೆಯನ್ನು ನೆರವೇರಿಸಿದ ಅವರು 2019 ರಿಂದ ಇಡೀ ಜಗತ್ತನ್ನೆ ತಲ್ಲಣಗೊಳಿಸಿದಂತಹ ಕೊರೊನಾ ಮಹಾಸೋಂಕು ಲಕ್ಷಾಂತರ…

Read More

Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read More

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ಲೈನ್ ದುರಸ್ತಿ ಮಾಡುತಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಮೀಪದ ಬಿಳಿಕಿ ಗ್ರಾಮದಲ್ಲಿ ನಡೆದಿದೆ. ಗಾಜೀನಗೋಡು ಗ್ರಾಮದ ಕೇಶವ್(28) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಬಿಳಿಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ಥಿ ಮಾಡುತಿದ್ದ ಕಾರ್ಮಿಕ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು.!?

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು ‘ತೆರೆದ ಮನೆ’ ಕಾರ್ಯಕ್ರಮದಡಿಯಲ್ಲಿ ಠಾಣೆಗೆ ಭೇಟಿ ನೀಡಿದ ಶಾಲಾ ಮಕ್ಕಳೊಂದಿಗೆ ಪೊಲೀಸರ ಸಂವಾದ ರಿಪ್ಪನ್‌ಪೇಟೆ : ಕೈಗೆ ಬೇಡಿ ಏಕೆ ಹಾಕ್ತಾರೆ, ಮಕ್ಕಳನ್ನು ಜೈಲಿನಲ್ಲಿ ಇಟ್ಟುಕೊಳ್ಳುವುದಿಲ್ಲವೇ, ಪಿಸ್ತೂಲ್‌ ಯಾವಾಗ ಬಳಸುತ್ತೀರಾ, ಕಳ್ಳರು ಹಿಡಿದು ಏನ್‌ ಮಾಡುತ್ತೀರಾ.’–ಇದು ಪೊಲೀಸ್‌ ಇಲಾಖೆಯ ‘ತೆರೆದ ಮನೆ’ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಪಟ್ಟಣದ ಠಾಣೆಗೆ ಭೇಟಿ ನೀಡಿದಾಗ ಕುತೂಹಲದ…

Read More

ಮಲೆನಾಡಿನಲ್ಲೊಂದು ಸೋರುತ್ತಿರುವ ಸರ್ಕಾರಿ ಪ್ರೌಡ ಶಾಲೆ – ಮಳೆ ಬಂದರೆ ತರಗತಿಗಳಲ್ಲಿ ಅರಳುತ್ತವೆ ಬಣ್ಣ ಬಣ್ಣದ ಛತ್ರಿಗಳು

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಳೆ ಬಂದರೇ ಸಾಕು ವಿದ್ಯಾರ್ಥಿಗಳು ತರಗತಿ ಕೊಠಡಿಯಲ್ಲಿ ಬಣ್ಣ ಬಣ್ಣದ ಛತ್ರಿ ಹಿಡಿದು ಕುಳಿತುಕೊಳ್ಳುವುದರೊಂದಿಗೆ ಪಾಠ ಪ್ರವಚನ ಕೇಳುವ ದುಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಕೋಟ್ಯಾಂತರ ಹಣ ವ್ಯಯ ಮಾಡುತ್ತಿದ್ದು ಶಾಲಾ ಕಾಲೇಜ್‌ಗಳ ಕಟ್ಟಡ ನಿರ್ಮಾಣಕ್ಕೂ ಹೆಚ್ಚು ಅನುದಾನ ನೀಡುತ್ತಿದ್ದರೂ ಕೂಡಾ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ಮಾತ್ರ ಕಣ್ಣಿಗೆ ಕಂಡಿಲ್ಲವೇನೂ ಎಂಬ ಅನುಮಾನ ಕಾಡುವಂತಾಗಿದೆ. 2006 ರಲ್ಲಿ…

Read More

ಬಟ್ಟೆಮಲ್ಲಪ್ಪದಲ್ಲಿ ನೂತನವಾಗಿ ಅನಾವರಣಗೊಂಡಿದ್ದ ಎಸ್ ಬಂಗಾರಪ್ಪರವರ ನಾಮಫಲಕವನ್ನು ರಾತ್ರೋರಾತ್ರಿ ಕಿತ್ತು ಹಾಕಿದ ಕಿಡಿಗೇಡಿಗಳು – ಆಮ್ ಆದ್ಮಿ ಪಕ್ಷದಿಂದ ಆಕ್ರೋಶ|Bangarappa

ನಾಡುಕಂಡ  ದಿಟ್ಟ ನೇರ  ನಡೆ  ನುಡಿ ವ್ಯಕ್ತಿತ್ವದ  ಧೀಮಂತ್  ರಾಜಕಾರಣಿ ರಾಜ್ಯದ  ಮಾಜಿ  ಮುಖ್ಯ ಮಂತ್ರಿ ಎಸ್. ಬಂಗಾರಪ್ಪ  ರವರ ಹೆಸರನ್ನು ಬಟ್ಟೆ ಮಲ್ಲಪ್ಪ ಸರ್ಕಲ್ ಗೆ ಆಮ್ ಆದ್ಮಿ ಪಕ್ಷ ಹಾಗೂ ಕೆಲ ಸಂಘಟನೆಗಳ  ವತಿಯಿಂದ ಕಳೆದ 6 ದಿನಗಳ ಹಿಂದೆ ನಾಮಕರಣ  ಮಾಡಲಾಗಿತ್ತು. ಹಾಗೆಯೇ  ನಾಮ ಫಲಕವನ್ನು ಅಳವಡಿಸಲಾಗಿತ್ತು. ಇದನ್ನು ಸಹಿಸದ ಕೆಲ ದುಷ್ಕರ್ಮಿಗಳು ನಾಮ ಫಲಕವನ್ನು ಕಿತ್ತೊಗೆದಿದ್ದಾರೆ ಎಂದು ಹೊಸನಗರ ತಾಲೂಕು ಆಮ್ ಆದ್ಮಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ Shivamogga police arrested rowdy-sheeter Adil, a prime accused in the Yaseen Qureshi murder and kidnapping cases. He has been shifted to Parappana Agrahara Jail under tight security. ಶಿವಮೊಗ್ಗ: ನಗರದಲ್ಲಿ ಸರಣಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಾಗೂ ಯಾಸೀನ್ ಖುರೇಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೌಡಿಶೀಟರ್ ಆದಿಲ್ ಹಾಗೂ ಆತನ ಸಹಚರನನ್ನು ಡಿವೈಎಸ್ಪಿ ಸಂಜೀವ್…

Read More

ಕುಟುಂಬದವರೊಂದಿಗೆ ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ|ಸೆಲ್ಪಿಗೆ ಮುಗಿಬಿದ್ದ ಯುವಕ_ಯುವತಿಯರು|BSY

ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಗರದಲ್ಲಿರುವ ಶಿವಪ್ಪ ನಾಯಕ ಮಾಲ್‌ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ…

Read More

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಆದೇಶ ನೀಡಿದೆ. 8,…

Read More
Exit mobile version