Headlines

ರಿಪ್ಪನ್‌ಪೇಟೆ ಸಮೀಪ ಎರಡು ಕಾರುಗಳ ನಡುವೆ ಭೀಕರ ಅಪಘಾತ : ಸ್ಥಿತಿ ಗಂಭೀರ – ಮೆಗ್ಗಾನ್ ಗೆ ದಾಖಲು|accident

ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಸಮೀಪದಲ್ಲಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಸ್ಯಾಂಟ್ರೋ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ಪಟ್ಟಣದ ಗವಟೂರು ಗ್ರಾಮದ ಬೋಟಿ ವ್ಯಾಪಾರಿ ತವಾಮಣಿ (45) ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಸೆವಾಮಣಿ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಯಾಂಟ್ರೋ ಕಾರಿನಲ್ಲಿದ್ದ ಶಿವಮೊಗ್ಗ…

Read More

ಖಾಯಂ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ಕಟ್ಟಡ ಏರಿ ಕುಳಿತ ಹೊಸನಗರ ತಾಲೂಕಿನ ನಗರ ಗ್ರಾಪಂ ಅಧ್ಯಕ್ಷ…!!!|nagara

ಗ್ರಾಮೀಣ ಭಾಗದ ಆಸ್ಪತ್ರೆಗೆ ಖಾಯಂ ವೈದ್ಯರನನು ನೇಮಿಸುವಂತೆ ಒತ್ತಾಯಿಸಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಕಟ್ಟಡವನ್ನು ಏರಿ ಗ್ರಾಮಪಂಚಾಯಿತಿ ಅಧ್ಯಕ್ಷರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ (ಬಿದನೂರು) ನಗರದ ಸರ್ಕಾರಿ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಿ ಆಸ್ಪತ್ರೆಯ ಕಟ್ಟಡ ಏರಿ ಗ್ರಾಪಂ ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರತಿಭಟಿಸಿದ್ದಾರೆ. ಸುಮಾರು 30 ರಿಂದ 40 ಸಾವಿರ ಜನಸಂಖ್ಯೆ ಇರುವ ನಗರ ಹೋಬಳಿಯಲ್ಲಿ ಯಾವುದೇ ಖಾಯಂ ವೈದ್ಯರಿಲ್ಲದೇ ಸ್ಥಳೀಯರು  ಪರದಾಡುವಂತಾಗಿದೆ.  ಈ ಹಿನ್ನೆಲೆಯಲ್ಲಿ ಕಟ್ಟಡವೇರಿ…

Read More

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಎಂಸಿಎ ಓದುತ್ತಿದ್ದ ಯುವತಿ|sucide

ಶಿವಮೊಗ್ಗ : ಮದುವೆ ವಿಚಾರಕ್ಕೆ ಶಿವಮೊಗ್ಗದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಮದುವೆಯಾಗುವ ಹುಡುಗನ ಕಡೆಯವರು ಹುಡುಗಿಯ ಮನೆಗೆ ಬಂದು ಶೀಘ್ರ ಮದುವೆ ಮಾಡಿಕೊಡಿ ಎಂದು ಒತ್ತಾಯಿಸಿದ್ದಲ್ಲದೆ, ಹುಡುಗಿಗೆ ಮದುವೆಗೆ ಮನಸ್ಸಿಲ್ಲ ಎಂದರೆ ಹೋಗಿ ಸಾಯಿ ಎಂದು ಬೈದಿದ್ದರಿಂದ ಶಿವಮೊಗ್ಗದ ಬೊಮ್ಮನಕಟ್ಟೆಯ ಯುವತಿ ಸುಮಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಆರೋಪಿಸಲಾಗಿದೆ.  ಸುಮಾ ಆತ್ಮಹತ್ಯೆ ಮಾಡಿಕೊಂಡವರು. ಈಕೆ ನಗರದ ಕಾಲೇಜೊಂದರಲ್ಲಿ ಎಂಸಿಎ ಎರಡನೆಯ ವರ್ಷ ಓದುತ್ತಿದ್ದರು. 2019ರಲ್ಲಿ ನ್ಯಾಮತಿ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಓದು ಮುಗಿದ ಮೇಲೆ ವಿವಾಹವಾಗುವ…

Read More

ಹೆರಿಗೆ ವಾರ್ಡ್ ನಲ್ಲಿ 6 ತಿಂಗಳ ಮಗುವನ್ನು ಬಿಟ್ಟು ಮಹಿಳೆ ನಾಪತ್ತೆ…!!!!

ಶಿವಮೊಗ್ಗದ  ಮೆಗ್ಗಾನ್ ಹೆರಿಗೆ ವಾರ್ಡ್ ಗೆ ಬಂದಿದ್ದ ಅಪರಿಚಿತ ಮಹಿಳೆ ವಾರ್ಡ್ ನಲ್ಲಿದ್ದ ಮಹಿಳೆಯೊಬ್ವರ ಕೈಯಲ್ಲಿ ಮಗುವನ್ನ ನೀಡಿ ದಿಡೀರನೆ ಕಣ್ಮರೆಯಾಗಿರುವ ಘಟನೆ ನಡೆದಿದೆ. ಮೆಗ್ಗಾನ್ ಹೆರಿಗೆ ವಾರ್ಡ್ ನಲ್ಲಿ ಹೊರಗಿನಿಂದ ಬಂದ ಮಹಿಳೆಯೊಬ್ಬಳು ಶೌಚಾಲಯಕ್ಕೆ ಹೋಗಿ ಬರುವೆ ಎಂದು ಹೇಳಿ ವಾರ್ಡ್ ನಲ್ಲಿದ್ದ ಮಹಿಳೆಯೊಬ್ಬಳಿಗೆ ಮಗುವನ್ನ ನೀಡಿ ಹೋಗಿದ್ದಾಳೆ. ಮಗುವನ್ನ ಎತ್ತುಕೊಂಡವರು ಕಳೆದ ಮೂರು ಗಂಟೆಯಿಂದ ಕಾದರೂ ಮಗುವನ್ನ ನೀಡಿದ ಮಹಿಳೆ ವಾಪಾಸ್ ಬರಲೇ ಇಲ್ಲ. ಆ ತಾಯಿ ಯಾಕೆ ಹೀಗೆ ಮಾಡಿದ್ದಾಳೋ, ಬಡತನವೋ ಗೊತ್ತಿಲ್ಲ….

Read More

ರಿಪ್ಪನ್‌ಪೇಟೆ : ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ – ಐವರು ಗಾಯಾಳು ಮೆಗ್ಗಾನ್ ಗೆ|accident

ರಿಪ್ಪನ್ ಪೇಟೆ : ಇಲ್ಲಿನ ಹೊಸನಗರ ರಸ್ತೆಯ ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಬಿಳಿಕಿ ಗ್ರಾಮಕ್ಕೆ ತೆರಳುತಿದ್ದ ಬೈಕ್ ಹಾಗೂ ಜೇನಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡುವೆ ತಾವರೆಕೆರೆ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ ಅಪಘಾತದಲ್ಲಿ ಪಟ್ಟಣದ ಸಮೀಪದ ಬಿಳಿಕಿ ಗ್ರಾಮದ ರಾಕೇಶ್ ಎಂಬ ವ್ಯಕ್ತಿಯ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಕಾಲು ಮುರಿದು ಸ್ಥಿತಿ ಗಂಭೀರವಾಗಿದೆ. ಅದೇ…

Read More

ಎರಡು ದಿನಗಳಿಂದ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಕೆರೆಯಲ್ಲಿ ಶವವಾಗಿ ಪತ್ತೆ|death

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಇಂದು ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮನೆಯ ಬಳಿ ಆಟವಾಡುತಿದ್ದ ಮಗು ಕಾಣೆಯಾಗಿತ್ತು,ಎಲ್ಲಾ ಕಡೆ ವಿಚಾರಿಸಿ ಕೊನೆಗೆ ಪೊಲೀಸ್ ಠಾಣೆಯಲ್ಲಿ ಅವರ ತಂದೆ ದೂರು ಸಲ್ಲಿಸಿದ್ದರು. ಇಂದು ಮಗುವಿನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ತೇಲಿ ಬಂದಿದೆ. ರಾಗಿಗುಡ್ಡದ 7 ನೇ ತಿರುವಿನಲ್ಲಿ ಮಹ್ಮದ್ ಸೂಫಿಯನ್ ಖುರೇಷಿ ಎಂಬುವರು ತಮ್ಮ ಮೊದಲನೇ ಮಗು ಮೊಹ್ಮದ್ ಮನ್ನನ್…

Read More

ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ ಶಿವಮೊಗ್ಗ : ಈ ನಾಡು ಕಂಡ ಧೀಮಂತ ನಾಯಕ ಎಸ್ ಬಂಗಾರಪ್ಪ. ರಾಜ್ಯದ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಸೂಕ್ತ ಗೌರವ ನೀಡಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸರ್ಕಾರ ಅವರ ಹೆಸರಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ ಬಂಗಾರಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಅಮೀರ್…

Read More

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard

ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…

Read More
Exit mobile version