ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳಾದ ನಿತೀಶ್ ಟಿ ,ನಿತಿನ್ ಟಿ ,ಆಯುಷ್ ಎಸ್ ಆರ್ ಮತ್ತು ಅರ್ಜುನ್ 4*100 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ  ಕ್ರೀಡಾಕೂಟದಲ್ಲಿ…

Read More

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ನಲ್ಲಿ ವಿಶ್ವ ವಜ್ರ ಪ್ರದರ್ಶನ|diamond show

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ ಶೋರೂಂನಲ್ಲಿ ವಿಶ್ವ ವಜ್ರ ಪ್ರದರ್ಶನವನ್ನು ಎಚ್ ಬಿ ಟಿ ಅರೆಕಾನಟ್‌ನ ಮಾಲಕಿ ದಿವ್ಯಾ ಪ್ರೇಮ್ ಉದ್ಘಾಟಿಸಿದರು.  ಮಾ. 8 ರಿಂದ 18 ರವರೆಗೆ ನಡೆಯುವ ಈ ಪ್ರದರ್ಶನದಲ್ಲಿ ಇಟಲಿ, ಫ್ರಾನ್ಸ್, ಅಮೆರಿಕ, ಬೆಲ್ಜಿಯಮ್, ಸಿಂಗಪೂರ್, ಟರ್ಕಿ ಮತ್ತು ಮಧ್ಯಪ್ರಾಚ್ಯ ದೇಶಗಳ ವಿವಿಧ ದೇಶಗಳ ವಜ್ರಾಭರಣಗಳನ್ನು ಅತಿಥಿಗಳು ಅನಾವರಣ ಗೊಳಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದರು.  ಈ ಆಭರಣಗಳು 10   ಸಾವಿರ ಕ್ಯಾರೆಟ್ ಐಜಿಐ ಪ್ರಮಾಣೀಕೃತ ೪ಸಿ ಪರಿಪೂರ್ಣ ನೈಸರ್ಗಿಕ ವಜ್ರಾಭರಣಗಳಾಗಿವೆ. ಎಪಿಎಂಸಿ…

Read More

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್ ಹಳೆಯ ಬೊಮ್ಮನಕಟ್ಟೆಯಲ್ಲಿ ಶನಿವಾರ ನಡೆದ ರೌಡಿ ಶೀಟರ್ ರಾಜೇಶ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಶನಿವಾರ ಹಾಡಹಗಲೇ ಸುಮಾರು ಆರು ಜನರನ್ನು ಒಳಗೊಂಡ ತಂಡ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ರಾಜೇಶ್ ಶೆಟ್ಟಿಯನ್ನು ಬರ್ಬರ ಹತ್ಯೆಗೈದಿದ್ದರು. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ  ಚಿಟ್ಟೆ ನಾಗ, ಗಣೇಶ, ಕಿರಣ್‌ ಗೌಡ, ವೆಂಕಟೇಶ್‌ ರನ್ನು…

Read More

ಹುಂಚಾದಲ್ಲಿ ನಡೆದ ಬಾಲ್ಯ ವಿವಾಹ : ಅರ್ಚಕ,ಫೋಟೋಗ್ರಾಫರ್ ಸೇರಿದಂತೆ ಎಲ್ಲಾರ ಮೇಲೂ ದಾಖಲಾಯಿತು ಕೇಸ್

ಇತ್ತೀಚೆಗೆ ರಿಪ್ಪನ್‌ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ನಡೆದ ಬಾಲ್ಯವಿವಾಹದ ವಿರುದ್ಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದೆ.  ಮದುವೆ ಗಂಡು ವಯಸ್ಕನಾಗಿದ್ದು ಮದುವೆ ಹೆಣ್ಣು ಅಪ್ರಾಪ್ತ ವಯಸ್ಸಿನವಳಾಗಿದ್ದಳು.ಈಗ ವಧುವರ, ಮದುವೆ ಮಾಡಿಸಿದ್ದ ಅರ್ಚಕ, ಆಹ್ವಾನ ಪತ್ರಿಕೆ ಮುದ್ರಿಸಿದ ವ್ಯಕ್ತಿ, ಫೋಟೋಗ್ರಾಫರ್, ವಧು ವರರ ಪೋಷಕರ ವಿರುದ್ಧ ದೂರು ದಾಖಲಾಗಿದೆ. ಆನಗದ್ದೆ ಗ್ರಾಮದ ಯಲ್ಲದೋಣೆಯ ರಮೇಶ್ ಎಂಬುವವನು ಬಳ್ಳಾರಿ ತಾಲೂಕಿನ ಕೂಡ್ಲಿಗಿ ಗ್ರಾಮದ‌ ಅಪ್ರಾಪ್ತೆ ಬಾಲಕಿಯನ್ನ ಮಾ.28 ರಂದು ಮದುವೆಯಾಗಿರುತ್ತಾನೆ.  ಈ ಬಗ್ಗೆ ಬಂದ ದೂರು…

Read More

ಗೋಡಂಬಿ ಹೆಸರಿನಲ್ಲಿ ಕಳಪೆ ಅಡಿಕೆ ಆಮದು: ಸೂಕ್ತ ಕ್ರಮಕ್ಕೆ ಶಾಸಕ ಆರಗ ಜ್ಞಾನೇಂದ್ರ ಒತ್ತಾಯ

ರಿಪ್ಪನ್ ಪೇಟೆ:ದೇಶದಲ್ಲಿನ ಅಡಿಕೆ ವ್ಯಾಪಾರಿಗಳ ವಂಚಕರ ಜಾಲವು ಗೋಡಂಬಿ ಹೆಸರಿನಲ್ಲಿ ಕಳಪೆ ಗುಣಮಟ್ಟದ ಅಡಿಕೆಯನ್ನು ಇಂಡೋನೇಶಿಯಾದಿಂದ ಆಮದು ಮಾಡಿಕೊಳ್ಳುವ ಮೂಲಕ ದೇಶದ ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಕೊಳ್ಳುವಂತೆ ಮಾಡುತ್ತಿದ್ದಾರೆ. ಈ ತರಹದ ಕಳಪೆ ಅಡಿಕೆ ಆಮದು ಮಾಡಿಕೊಳ್ಳುವವರ ವಿರುದ್ಧ ಕೇಂದ್ರ ಸರ್ಕಾರವು ಈ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕ ಮತ್ತು ಗೃಹ ಮಂಡಳಿ ಅಧ್ಯಕ್ಷರಾದ ಶ್ರೀ ಆರಗ ಜ್ಞಾನೇಂದ್ರ ಇಂದಿಲ್ಲಿ ಒತ್ತಾಯಿಸಿದರು. ಪಟ್ಟಣದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ  ಮಾತನಾಡಿದ ಅವರು  ಅಡಿಕೆ ವಂಚಕರ ಜಾಲವು…

Read More

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವೇ ನಿಜವಾದ ಶಿಕ್ಷಣ : ಮುರುಘರಾಜೇಂದ್ರ ಮಹಾಸ್ವಾಮೀಜಿ

Jagadguru Dr. Mallikarjuna Murugharajendra Swamiji emphasized the importance of value-based education for children during the SSLC farewell and parents’ padapuja program held at Sri Gurubasaveshwara Kannada and English Medium School in Ripponpet. ರಿಪ್ಪನ್‌ಪೇಟೆ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆತರೆ ಅದೇ ನಿಜವಾದ ಶಿಕ್ಷಣವಾಗುತ್ತದೆ. ತಂದೆ-ತಾಯಿ, ಗುರು ಹಾಗೂ ಹಿರಿಯರ ಮೇಲೆ ತೋರುವ ಭಕ್ತಿ-ಶ್ರದ್ಧೆಯೇ ನಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ ಶಿವಮೊಗ್ಗ:  ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು  ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ ಘಟನೆ ಮಂಗಲವರ ಮುಂಜಾನೆ ನಡೆದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶ ಎದುರಾದ ಕಾರಣ , ಚೌಡೇಶ್ವರಿ ದೇವಸ್ಥಾನವನ್ನು ನಿರ್ಮಾಣ ಮಾಡಿ ದೇವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಡಲಾಯಿತು. ಏಕಾಏಕಿ ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎಸ್‌ಎನ್ ಚನ್ನಬಸಪ್ಪ ಅವರು…

Read More

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ!|ayanuru

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ! ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ. ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು…

Read More

ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ – ಸುಪ್ರೀಂಕೋರ್ಟ್

ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು  ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು  ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ…

Read More

ಅಂಗನವಾಡಿಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿ ಮೊಟ್ಟೆ ತಿಂದು , ಧಾನ್ಯಗಳನ್ನು ಹಾಳುಗೆಡವಿದ ದುಷ್ಕರ್ಮಿಗಳು

ಅಂಗನವಾಡಿಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿ ಮೊಟ್ಟೆ , ಧಾನ್ಯ ಹಾಳುಗೆಡವಿದ ದುಷ್ಕರ್ಮಿಗಳು ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಅಂಗನವಾಡಿ ಕೇಂದ್ರ ಮತ್ತು ಮಹಿಳಾ ಒಕ್ಕೂಟದ ಕೊಠಡಿಗೆ ನುಗ್ಗಿದ ದುಷ್ಕರ್ಮಿಗಳ ಕೃತ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮದ್ಯಪಾನದಲ್ಲೇ ತೇಲಿದ ದುಷ್ಕರ್ಮಿಗಳು ಮೊದಲು ಕೊಠಡಿಗಳ ಬೀಗಗಳನ್ನು ಮುರಿದು ಒಳನುಗ್ಗಿದ್ದಾರೆ. ನಂತರ ಟೇಬಲ್ ಸುತ್ತಲು ಕುರ್ಚಿಗಳನ್ನು ಅಣಿಗೊಳಿಸಿ ಕುಳಿತು ಮದ್ಯ ಸೇವಿಸಿದ್ದು, ಸ್ಥಳದಲ್ಲಿ ಮದ್ಯದ ಬಾಟಲಿಗಳ ಕವರ್‌ಗಳು ಹಾಗೂ ಟವೆಲ್‌ಗಳು ಚೆಲ್ಲಾಪಿಲ್ಲಿಯಾಗಿರುವುದು ಪತ್ತೆಯಾಗಿದೆ. ಅಲ್ಲದೆ, ಸರ್ಕಾರದಿಂದ ಅಂಗನವಾಡಿಗೆ ನೀಡಲಾಗಿದ್ದ ಆಹಾರ ಧಾನ್ಯಗಳನ್ನು…

Read More
Exit mobile version