ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗರೀಕರ ಕಂದಾಯ ಪಾವತಿ ಸಮಸ್ಯೆಗೆ ಮುಕ್ತಿ

ಪಟ್ಟಣ ಪಂಚಾಯತಿ ತೀರ್ಥಹಳ್ಳಿಯವರಿಂದ  ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆಗಳ ಬಗ್ಗೆ ನಿನ್ನೆ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ನೀರಿನ ಬಿಲ್ಲಿನ ಸಮಸ್ಯೆಗಳು ಹಾಗೂ ಕಂದಾಯ ಕಟ್ಟಿಸಿಕೊಳ್ಳುವ ಬಗ್ಗೆ ವರದಿ ಬಿತ್ತರಿಸಲಾಗಿತ್ತು. ಈ ವರದಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು ಇಂದಿನಿಂದ ಕಂದಾಯವನ್ನು ಕಟ್ಟಿಸಿಕೊಳ್ಳುವುದರ ಜೊತೆ 5% ರಿಯಾಯಿತಿ ಸಹ ಘೋಷಿಸಿದ್ದಾರೆ.ಈ ಬಗ್ಗೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವಾಹನಗಳಲ್ಲಿ ಅನೌನ್ಸ್ ಮಾಡಲಾಗುತ್ತಿದೆ.  ಇದರಿಂದಾಗಿ ಸಾರ್ವಜನಿಕರು ಪೋಸ್ಟ್ ಮ್ಯಾನ್ ನ್ಯೂಸ್ ಮಾಧ್ಯಮ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ…

Read More

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ ಬಿಡುಗಡೆ : ಕುವೆಂಪು ವಿವಿಯ ಬಿ ಜೆ ಗಿರೀಶ್, ಬಿಇ ಕುಮಾರಸ್ವಾಮಿಯವರಿಗೆ ಸ್ಥಾನ

ಶಿವಮೊಗ್ಗ : ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರ ತಂದಿರುವ ವಿಶ್ವದ ಟಾಪ್ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವ ವಿದ್ಯಾಲಯದ ಡಾ. ಬಿ. ಜೆ ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿಯವರು ಸ್ಥಾನ ಪಡೆದಿದ್ದಾರೆ. ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡ ಸಿದ್ಧಪಡಿಸಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಡೇಟಾಬೇಸ್‌ ಅಕ್ಟೋಬರ್ 19ರಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ….

Read More

ಸಾಗರ : ಅಕ್ರಮವಾಗಿ ಶೇಖರಿಸಿಟ್ಟಿದ್ದ ಗಾಂಜಾ ಪತ್ತೆ

ಸಾಗರ : ತಾಲ್ಲೂಕ್ಕಿನ ವ್ಯಾಪ್ತಿಯ ಕಬ್ಬನದಕೊಪ್ಪ ಗ್ರಾಮದಲ್ಲಿ ವಾಸದ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.  ಕಬ್ಬನದಕೊಪ್ಪ ಗ್ರಾಮದ ಪುಟ್ಟಪ್ಪ ಇವರಿಗೆ ಸೇರಿದ ವಾಸದ ಮನೆಯ ಮೊದಲನೆ ಕೊಠಡಿಯಲ್ಲಿ ಅಕ್ರಮವಾಗಿ ಸುಮಾರು 330 ಗ್ರಾಂ ಹಸಿ ಗಾಂಜಾವನ್ನು ಪತ್ತೆಹಚ್ಚಿ ಸದರಿ ಕೃತ್ಯವು ಎನ್.ಡಿ .ಪಿ. ಎಸ್ ಕಾಯ್ದೆ 1985 ರ ಕಲಂ 8(ಸಿ) ರೀತ್ಯಾ ಉಲ್ಲಂಘನೆ ಹಾಗೂ ಇದೇ ಕಾಯ್ದೆಯ ಕಲಂ 20(b) 20 (ii) (A),25 ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುವ ಕಾರಣ ಮೊಕದ್ದಮೆಯನ್ನು ದಾಖಲಿಸಲಾಯಿತು. …

Read More

ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ

ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ ಭದ್ರಾವತಿ: ನಾಯಿ — ನಿಷ್ಠೆ, ಪ್ರೀತಿ ಮತ್ತು ಬದ್ಧತೆಯ ಪ್ರತೀಕ. ಮಾಲೀಕನಿಗಾಗಿ ಜೀವವನ್ನೇ ಪಣಕ್ಕಿಡುವ ಈ ಪ್ರಾಣಿ, ಕೆಲವೊಮ್ಮೆ ಅವನಿಂದ ದೂರವಾಗುವುದನ್ನೇ ಸಹಿಸಲಾರದು. ಭದ್ರಾವತಿಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಅದಕ್ಕೆ ಜೀವಂತ ಉದಾಹರಣೆ. ನಗರದ ಹುತ್ತಾಕಾಲನಿಯ ಜಿಂಕ್‌ಲೈನ್ ಪ್ರದೇಶದ ನಿವಾಸಿ ಲಾರೆನ್ಸ್ (61) ಪೈಂಟರ್ ಕೆಲಸ ಮಾಡುತ್ತಿದ್ದು, ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರು ನಿಧನರಾದರು. ಆಸ್ಪತ್ರೆಯಿಂದ ಅವರ ಮೃತದೇಹವನ್ನು ಮನೆಗೆ ತರಲಾಗುತ್ತಿದ್ದಂತೆಯೇ, ಮನೆಯ…

Read More

ಚೋರಡಿ ಬಳಿ ಸರಣಿ ಅಪಘಾತ – ಟ್ರಾಫಿಕ್ ಜಾಮ್|accident

ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತವಾಗಿದ್ದು,ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್‌ ಆದ ಘಟನೆ ನಡೆದಿದೆ. ಖಾಸಗಿ ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ವಾಹನಗಳಿಗೆ ಹಾನಿ ಉಂಟಾಗಿದೆ. ಆದರೆ ಯಾವುದೆ ವಾಹನದಲ್ಲಿರುವವರಿಗು ಸಮಸ್ಯೆಯಾಗಿಲ್ಲ. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ…

Read More

ಸಾಗರದಲ್ಲಿ ಪಾದಚಾರಿಗೆ ಕಾರಿನಲ್ಲಿ ಗುದ್ದಿ ಚಾಲಕ ಪರಾರಿ:

ಸಾಗರ: ಇಲ್ಲಿನ ಸಿಂಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಆದಿಶಕ್ತಿ ನಗರದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 7.30 ರ ಸುಮಾರಿಗೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆದಿಶಕ್ತಿ ನಗರದ ಬಾಬು(47) ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಾಗರ ಪೇಟೆ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಶರೀರವನ್ನು ಸಾಗರ…

Read More

ಕೋಣಂದೂರು – ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ – ಪ್ರಕರಣ ದಾಖಲು

ಕೋಣಂದೂರಿನ ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ ಶಿವಮೊಗ್ಗ: ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿಯ ಮಾಲೀಕರೊಬ್ಬರಿಗೆ ₹5 ಲಕ್ಷ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ವ್ಯಕ್ತಿಯು ಕಳೆದ ಒಂದು ವರ್ಷದಿಂದ ಈ ಇಬ್ಬರು ಆರೋಪಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದವರು. ಜುಲೈ 8 ರಂದು ಆರೋಪಿಗಳು ಕಾಳುಮೆಣಸು…

Read More

ಸೊರಬ:ವಿದ್ಯುತ್ ತಗುಲಿ ಮಹಿಳೆ ಸಾವು ಪ್ರಕರಣ,ಕುಟುಂಬಕ್ಕೆ ಸಾಂತ್ವಾನ

ಸೊರಬ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಮೀಪದ ಕತ್ವಾಯಿ ಗ್ರಾಮದಲ್ಲಿ ನಡೆದಿತ್ತು.ಇಂದು ಅವರ ಮನೆಗೆ ಬಿಜೆಪಿ ಮುಖಂಡ ಕಡಸೂರು ಶಿವಕುಮಾರ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ ಅವರು ಕುಟುಂಬದವರಲ್ಲಿ ಮುಂದಿನ ದಿನಗಳಲ್ಲಿ ಜೊತೆಯಲ್ಲಿರುತ್ತೇವೆ ಎಂದು ಧೈರ್ಯ ತುಂಬಿದರು.  ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಸಲೀಂ, ಮುಖಂಡರಾದ ದಿನೇಶ್ ಹೆಚ್ ನಾಯ್ಕ, ಕನದಾಸ ಕಲ್ಲಂಬಿ, ಪಕ್ಕೀರಪ್ಪ ದ್ಯಾಮಪ್ಪ ಆನಂದಣ್ಣ ಮತ್ತಿತರರು ಇದ್ದರು. ಮಂಗಳವಾರ ನಡೆದಿತ್ತು…

Read More

ಬಸ್ ಹಾಗೂ ಬೊಲೆರೊ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿ – ಎರಡು ತುಂಡಾದ ಬೊಲೆರೊ ಪಿಕಪ್,ಮೂವರಿಗೆ ಗಾಯ|accident

ಖಾಸಗಿ ಬಸ್ ಹಾಗೂ ಬೊಲೆರೊ ಪಿಕಪ್ ನಡುವೆ ಮುಖಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಪ್ಪರಗುಂಡಿ ಸೇತುವೆ ಬಳಿ ನಡೆದಿದೆ. ಶರ್ಮಣ್ಯಾವತಿ ನರ್ಸರಿ ಹತ್ತಿರ ಶಿವಮೊಗ್ಗದಿಂದ ಕುಂದಾಪುರಕ್ಕೆ ಕಡೆಗೆ ಹೋಗುತಿದ್ದ ದುರ್ಗಾಂಬ ಬಸ್ಸು ಹಾಗೂ ಹೊಸನಗರದಿಂದ ರಿಪ್ಪನ್ ಪೇಟೆಗೆ ಹೊರಟ ಬೊಲೆರೋ ಪಿಕಪ್ ಗಾಡಿ ನಡುವೆ ಮುಖಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೊಲೆರೊ ಪಿಕಪ್ ವಾಹನ ಎರಡು ತುಂಡಾಗಿದೆ. ಬೊಲೆರೊ ಪಿಕಪ್ ನಲ್ಲಿದ್ದ ಮೂವರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು ಹೊಸನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತಿದ್ದು…

Read More

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್‌ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ…

Read More