ಆಯುಷ್ ವಿಶ್ವವಿದ್ಯಾಲಯ ಕೂಡಲೇ ಪ್ರಾರಂಭಿಸುವಂತೆ ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ವತಿಯಿಂದ ಒತ್ತಾಯ :
ಶಿವಮೊಗ್ಗ ನಗರದಲ್ಲಿ ಕಳೆದ 2021-22ರ ಬಜೆಟ್ನಲ್ಲಿ ಮುಖ್ಯಮಂತ್ರಿಗಳಾದ ಬೊಮ್ಮಾಯಿಯವರು ಮಂಜೂರು ಮಾಡಿ, 20 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದ್ದ ಆಯುಷ್ ವಿಶ್ವ ವಿದ್ಯಾಲಯದ ಯೋಜನೆಯ ಭರವಸೆಯು ಖಾಸಗಿ ಆಯುರ್ವೇದ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ಚಿತಾವಣೆಯಿಂದ ಠುಸ್ಸ್ ಆಗಿದೆ ಎಂದು ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ನ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿದರೆ ಖಾಸಗಿ…