ದಲಿತ ಮಹಿಳೆಯ ಶವಸಂಸ್ಕಾರಕ್ಕೆ ಅಡ್ಡಿ: ಪೊಲೀಸರ ಮಧ್ಯಸ್ಥಿಕೆಯಿಂದ ಸಮಸ್ಯೆ ಇತ್ಯರ್ಥ:

ಹೊಸನಗರ: ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಮೀಸಲಿಟ್ಟಿದ್ದ ರುದ್ರಭೂಮಿಯನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿ ಶವಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಘಟನೆ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಎಂಬಲ್ಲಿ ನಡೆದಿದೆ. ಆದಿವಾಸಿ ಬುಡಕಟ್ಟು ಜನಾಂಗಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಖಾಸಗಿ ವ್ಯಕ್ತಿಗಳು ಆಕ್ರಮಿಸಿದ್ದರಿಂದ ಬುಡಕಟ್ಟು ಜನಾಂಗದ ಮೃತಪಟ್ಟ ಮಹಿಳೆಯೊಬ್ಬರ ಶವ ಸಂಸ್ಕಾರಕ್ಕೆ ಮುಂಜಾನೆಯಿಂದ ಮಧ್ಯಾಹ್ನದವರೆಗೂ ಕಾಯಿಸಿದ ಘಟನೆ ಮುಂಬಾರು ಗ್ರಾಮದ ಹಿರಿಯೋಗಿಯಲ್ಲಿ ನಡೆದಿದೆ. ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಗ್ರಾಮದ ಸರ್ವೆ ನಂ16 ರಲ್ಲಿ 2 ಎಕರೆ ಪ್ರದೇಶವನ್ನು ಆದಿವಾಸಿ…

Read More

ಸಿಗಂದೂರು ಸಮೀಪ ರಸ್ತೆ ಅಪಘಾತ : ಓರ್ವನ ಸ್ಥಿತಿ ಗಂಭೀರ

ಸಿಗಂದೂರು ದೇವಸ್ಥಾನದ ಸಮೀಪದ ಕಳಸವಳ್ಳಿ ಗ್ರಾಮದಲ್ಲಿ ಟೆಂಪೋ ಟ್ರಾವಲರ್ ಗಾಡಿಯ ಚಾಲಕನು ವಾಹನ ಚಲಿಸುತ್ತಿದ್ದಾಗ ಫೀಡ್ಸ್ ಬಂದಿರುವ  ಹಿನ್ನಲೆ ನಿಯಂತ್ರಣ ತಪ್ಪಿ ವಾಹನ ಧರೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 11ಈ ವಾಹನದಲ್ಲಿ 10 ಜನ ಪ್ರಯಾಣಿಕರಿದ್ದರು,ನಾಲ್ವರಿಗೆ ಪೆಟ್ಟಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಸಿಗಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥ0ಮ ಚಿಕಿತ್ಸೆ ನೀಡಿ,ಸಾಗರದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಬೆಂಗಳೂರು ಸಮೀಪದ ಬಿಡದಿ ಮೂಲದ ಯಾತ್ರಾರ್ಥಿಗಳು ಈ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Read More

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ ರಿಪ್ಪನ್‌ಪೇಟೆ: ಪಟ್ಟಣದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಪ್ರಯುಕ್ತ ಅಷ್ಟಲಕ್ಷ್ಮಿ ಹವನವನ್ನು ಆಯೋಜಿಸಲಾಯಿತು. ಜಿ.ಎಸ್.ಬಿ ಸಮಾಜದ ಅನೇಕ ಬಂಧುಗಳು ಭಾಗವಹಿಸಿ ಭಕ್ತಿಪೂರ್ಣವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. ನವರಾತ್ರಿಯ ಸಂದರ್ಭದಲ್ಲಿ ‘ಅಖಂಡ ದೀಪಪ್ರಜ್ವಲನೆ’ ಅಂದರೆ ಒಂಭತ್ತು ದಿನಗಳ ಕಾಲ ನಿರಂತರವಾಗಿ ದೀಪವನ್ನು ಬೆಳಗಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನ ಪಾರಾಯಣ, ಲಲಿತಾಪೂಜೆ, ಸರಸ್ವತಿಪೂಜೆ,…

Read More

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಅಬ್ಬರಕ್ಕೆ ನಶಿಸಿದ ಸುಂದರ ಶಾಲೆ

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಮಾಫ಼ಿಯಾಕ್ಕೆ ನಶಿಸಿದ ಸುಂದರ ಶಾಲೆ –  🔴🔵ವರದಿ – ರಫ಼ಿ ರಿಪ್ಪನ್‌ಪೇಟೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಹೊಸ ಸರ್ಕಾರಿ ಶಾಲೆಯನ್ನೂ ತೆರೆದಿಲ್ಲ. ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ಶಾಲೆಗಳೂ ತಲೆ ಎತ್ತುತಿವೆ. ಹಣ ಹೊಂದಿಸಲು ಆಗದವರೂ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವಂತಹ ವಾತಾವರಣ ನಿರ್ಮಾಣಗೊಳ್ಳಬೇಕು. ಅದಕ್ಕಾಗಿ ಸಂಸತ್ತು, ವಿಧಾನಸಭೆ ಬೇಕಾದಷ್ಟು ಕಾಯ್ದೆಗಳನ್ನು ಮಾಡಿವೆ ನಿಜ. ಆದರೆ, ಅನುಷ್ಠಾನದ ವಿಷಯದಲ್ಲಿ ಇಚ್ಛಾಶಕ್ತಿಯ ಕೊರತೆಯಿಂದ…

Read More

ಸ್ಲೀಪರ್ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಹೇಗೆ? ಸಾರಿಗೆ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ

Transport department officials reveal the exact cause of the sleeper bus fire in Shivamogga. Short circuit in the ECM board led to brake failure, officials confirm after inspection. ಶಿವಮೊಗ್ಗ ಜಿಲ್ಲೆಯ ಹೊಸನಗರ–ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ನಿಖರ ಕಾರಣವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ಸಾರಿಗೆ ಇಲಾಖೆಯ…

Read More

ರಿಪ್ಪನ್‌ಪೇಟೆ : ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಾಜಿ ಸಚಿವರಿಂದ ಅಭಿನಂದನೆ|pro kabbadi

ರಿಪ್ಪನ್‌ಪೇಟೆ : ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ನಲ್ಲಿ ಯುಪಿ ಯೋಧ ತಂಡಕ್ಕೆ ಆಯ್ಕೆಯಾದ ಯುವ ಪ್ರತಿಭೆ ಗಗನ್ ಗೌಡ ರವರಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿದ್ದಾರೆ. ಇಂದು ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದಲ್ಲಿರುವ ಗಗನ್ ಗೌಡ ರವರ ಮನೆಗೆ ತೆರಳಿದ ಮಾಜಿ ಸಚಿವರು ಯುವ ಪ್ರತಿಭೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಮುಖಂಡರಾದ ದೇವೆಂದ್ರಪ್ಪ ಗೌಡ ,ಆನಂದ್ ಮೆಣಸೆ, ನೇಮಾಕ್ಷಿ ಗೌಡ್ರು, ಜಯದೇವ, ರಾಜೇಂದ್ರ ಘಂಟೆ, ಗಣಪತಿ,…

Read More

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ Kuvempu University convocation highlights academic excellence as girl students dominate gold medals, with Abhishek H.M. securing top rank with 10 medals. ಶಿವಮೊಗ್ಗ, ಮೇ 6: ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವು ಈ ಬಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಂದ ವಿಶೇಷ ಗಮನ ಸೆಳೆದಿದ್ದು, ಅದರಲ್ಲೂ ವಿದ್ಯಾರ್ಥಿನಿಯರು ಚಿನ್ನದ ಪದಕಗಳ ಬಹುಪಾಲು ತಮ್ಮದಾಗಿಸಿಕೊಂಡು ಮೆರುಗು ತೋರಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ…

Read More

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ|crime-news

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪ್ರದೇಶದಲ್ಲಿ  ನಿನ್ನೆ ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ. ಘಟನೆಯ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್​ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಘಟನೆಯ ಹಿನ್ನಲೆ : ಭದ್ರಾವತಿಯ ಹೊಸಮನೆಯ ಹನುಮಂತನಗರದಲ್ಲಿ ಗಾರೆ ಕೆಲಸ ಮಾಡುವ ಯುವಕ ನಂದಾ ಎಂಬಾತ ತನ್ನ ಮೊಬೈಲ್​ವೊಂದನ್ನ ಅಡವಿಟ್ಟಿದನಂತೆ. ಅದನ್ನು ಬಿಡಿಸಿಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ ,ಅಡವಿಟ್ಟುಕೊಂಡಿದ್ದವರು ಮೊಬೈಲ್ ಕೊಡಲು ನಿರಾಕರಿಸಿದ್ದಾರೆ. ಈ ಸಂಬಂಧ…

Read More

ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು

A KSRTC bus driver, Nagappa (54), from Tyagarti village in Sagara taluk, Shivamogga district, died after attempting suicide, allegedly due to harassment and denial of duty by the depot manager. ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು ಸಾಗರ: ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ನಾಗಪ್ಪ (54) ಅವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ…

Read More

Sagara: ಚಲಿಸುತಿದ್ದ KSRTC ಬಸ್ ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ

ಸಾಗರ: ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದಕ್ಕೆ ಬೆಂಕಿ ತಗುಲಿ ಬಸ್‌ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗ ರಸ್ತೆಯಲ್ಲಿ ನಡೆದಿದೆ. ಏಕಾಏಕಿ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಬಹುತೇಕ ಸುಟ್ಟು ಹೋಗಿದೆ.ಬಸ್‌ನಲ್ಲಿ  12 ಮಂದಿ ಪ್ರಯಾಣಿಸುತ್ತಿದ್ದು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಘಟನೆಯ ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬಸ್‌ ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ.  ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ ಸಾಗರ ತಾಲ್ಲೂಕಿನ ಜೋಗ ರಸ್ತೆ…

Read More