Headlines

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ  ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ…

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ ಪೂಜೆಯಲ್ಲಿ ವಿವಿಧ ಪುಷ್ಪ, ಫಲ, ಸುಗಂಧ ದ್ರವ್ಯಗಳಿಂದ ಶ್ರೀ ಪದ್ಮಾವತಿ ದೇವಿಯನ್ನು ಆರಾಧಿಸಿ, ಪದ್ಮಾವತಿ ದೇವಿ ಸ್ತುತಿಗಳೊಂದಿಗೆ ಶಾಸ್ತ್ರೋಕ್ತ ವಿಧಾನದಲ್ಲಿ ಉಯ್ಯಾಲೆ ಸೇವೆಯಲ್ಲಿ ಊರ-ಪರವೂರ ಭಕ್ತರು ಸಮರ್ಪಿಸಿಕೊಂಡರು. ಸ್ವರ್ಣ ಪಲ್ಲಕ್ಕಿಯಲ್ಲಿ ಉತ್ಸವ ಶ್ರೀ ಪದ್ಮಾವತಿ ದೇವಿ…

Read More

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಖರೀದಿಸಿದ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಡಲು ಮಹಾನಗರ ಪಾಲಿಕೆಯ ಆಶ್ರಯ ಮನೆ ವಿಭಾಗದ ಸಮುದಾಯ ಸಂಘಟನಾಧಿಕಾರಿ ಲಂಚ ಪಡೆಯುತ್ತಿರುವಾಗ ಲೋಕಾಯುಕ್ತರಿ ದಾಳಿ ನಡೆಸಿ ಬಂಧಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಶಿಧರ ಎ ಪಿ (೫೭) ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ವಾಸಿ ಮೊಹಮ್ಮದ್ ಆಸೀಫ್ ಉಲ್ಲಾ ಎನ್ನುವವರು ಬೊಮ್ಮನಕಟ್ಟೆಯಲ್ಲಿ ಅಮ್ಜದ್ ಅಲಿ ಎನ್ನುವವರಿಂದ ಮನೆಯನ್ನು ಖರೀದಿಸಿದ್ದರು. ಈ ಮನೆಯನ್ನು…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೈಡ್ – ಆವರಣದಲ್ಲಿ ಪತ್ತೆಯಾಯ್ತು ಮೊಬೈಲ್,ಬೀಡಿ ಬೆಂಕಿಪೊಟ್ಟಣ|raid

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ವಿಶೇಷ ಅತಿಥ್ಯ ಮುಂದುವರೆದಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಶಿಕ್ಷೆ ವಿಧಿಸಿ ಸಮಾಜದಲ್ಲಿ ಸುಧಾರಿತ ವ್ಯಕ್ತಿಗಳಾಗಿ ಹೊರಗೆ ಬರಲಿ ಎಂಬ ಕಲ್ಪನೆ ಕಲ್ಪನೆಯಾಗಿ ಉಳಿದಿದೆ. ಸುಧಾರಿತ ವ್ಯಕ್ತಿಗಳಾಗುವ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲು, ಬೀಡಿಗಳು, ಗಾಂಜಾಗಳು ಸಪ್ಲೆ ಆಗುತ್ತಿವೆ ಎಂದರೆ ಅಚ್ಚರಿ ಪಡುವಂತಾಗಿದೆ. ಜೈಲು ಸಿಬ್ಬಂದಿಗಳೇ ಅಪರಾಧಿಗಳ ಜೊತೆ ಕೈ ಜೋಡಿಸುತ್ತಿದ್ದಾರಾ ಎಂಬ ಅನುಮಾನ ಹೆಚ್ಚಾಗಿದೆ. ಈ ಅನುಮಾನಕ್ಕೆ ಈ ಎಫ್ಐಆರ್ ಪುಷ್ಠಿ ನೀಡುತ್ತಿದೆ. ಅ. 21 ರಂದು ಕೇಂದ್ರ ಕಾರಾಗೃಹದಲ್ಲಿ ತುಂಗ…

Read More

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹೊಸಮನೆ 6 ನೇ ತಿರುವಿನ ನಿವಾಸಿ ಮನೋಜ್ (22) ಮೃತ ದುರ್ಧೈವಿಯಾಗಿದ್ದಾನೆ. ಶಿವಮೊಗ್ಗದ JNNC ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಈತ ಕಾಂಗ್ರೆಸ್ ಮುಖಂಡ ಫ್ಲವರ್ ಕುಮಾರ್ ಅವರ ಪುತ್ರನಾಗಿದ್ದಾನೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ,ನಿನ್ನೆ ಸಂಜೆಯೇ ಯುವಕನ ಮೃತದೇಹವನ್ನು ಮೆಗ್ಗಾನ್ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಅ.25 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ  ಮಾದಕ ವಸ್ತುಗಾಂಜಾವನ್ನು  ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕುಂಸಿ ಪೊಲೀಸರು ಖಡಕ್ ದಾಳಿ ನಡೆಸಿ ಓರ್ವನನ್ನ ಬಂಧಿಸಿದ್ದಾರೆ. ಆರೋಪಿಯಿಂದ ಅಂದಾಜು ಮೌಲ್ಯ 15,000/- ರೂಗಳ 640  ಗ್ರಾಂ ತೂಕದ ಒಣ ಗಾಂಜಾ ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0213/2024 ಕಲಂ  20(b), 8(c) NDPS…

Read More

ಅರಳಸುರುಳಿ ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಭರತ್ ಆಸ್ಪತ್ರೆಯಲ್ಲಿ ಸಾವು|aralasurali

ಅರಳಸುರುಳಿಯಲ್ಲಿ ಮೂವರು ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಮತ್ತೊಬ್ಬ ಕೂಡ ಸಾವು ತೀರ್ಥಹಳ್ಳಿ : ಭಾನುವಾರ ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಮೂರು ಮಂದಿ ಸಜೀವ ದಹನವಾಗಿದ್ದ ಘಟನೆ ತಾಲೂಕಿನ ಅರಳಸುರುಳಿಯಲ್ಲಿ ನೆಡೆದಿತ್ತು.  ಮನೆಯ ಒಳಗಿನ ಕೋಣೆಯೊಳಗೆ ರಾಘವೇಂದ್ರ ಕೆಕೋಡ್ (65),  ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಪುತ್ರ ಭರತ್ (28) ಕೂಡ ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ….

Read More

SSLC ಅಂಕಪಟ್ಟಿಯಲ್ಲಿ ಶಾಲೆಯ ಹೆಸರು ಗೊಂದಲ – ರಾಮಕೃಷ್ಣ ವಿದ್ಯಾಲಯದಲ್ಲಿ ಪೋಷಕರ ದಿಢೀರ್ ಪ್ರತಿಭಟನೆ

SSLC ಅಂಕಪಟ್ಟಿಯಲ್ಲಿ ಶಾಲೆಯ ಹೆಸರು ಗೊಂದಲ – ರಾಮಕೃಷ್ಣ ವಿದ್ಯಾಲಯದಲ್ಲಿ ಪೋಷಕರ ದಿಢೀರ್ ಪ್ರತಿಭಟನೆ ರಿಪ್ಪನ್‌ಪೇಟೆ : ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಲ್ಲಿ ಶಾಲೆಯ ಹೆಸರೇ ಬದಲಾಗಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಗಂಭೀರ ಅನಾಹುತ ಉಂಟು ಮಾಡಲಿದೆ ಎಂಬ ಅಸಮಾಧಾನದಿಂದಾಗಿ, ರಿಪ್ಪನ್‌ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿರುದ್ಧ ಪೋಷಕರು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಳೆದ 2024-25ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ಪರೀಕ್ಷಾ ಫಲಿತಾಂಶದ ಬಳಿಕ ನೀಡಲಾಗುತ್ತಿರುವ ವರ್ಗಾವಣೆ ಪತ್ರದಲ್ಲಿ ಶಾರದಾ ರಾಮಕೃಷ್ಣ ವಿದ್ಯಾಲಯದ ಬದಲು ‘ಸರ್ಕಾರಿ ಪದವಿ ಪೂರ್ವ ಕಾಲೇಜು, ರಿಪ್ಪನ್‌ಪೇಟೆ’…

Read More

ಸಾಗರ : ಶಾಸಕರು ಸಾಗರ ನಗರವನ್ನು ಎಣ್ಣೆ ಸಾಗರ ಮಾಡಲು ಹೊರಟಿದ್ದಾರೆ : ಗೋಪಾಲಕೃಷ್ಣ ಬೇಳೂರು

ಸಾಗರ : ನಗರಸಭೆಯಲ್ಲಿ ಒಂದು ವಾರದಿಂದ ನೀರು ಬಿಡಲು ಯಾಂತ್ರಿಕ ತೊಂದರೆ ಎಂಬ ಕಾರಣ ಕೊಟ್ಟಿದ್ದಾರೆ. ಹಿನ್ನೀರಿನಿಂದ ನೀರು ತರುವ ಕೆಲಸವನ್ನ ನನ್ನ ಅವಧಿಯಲ್ಲಿ ಮಾಡಿದ್ದೆ, ಅಲ್ಲಿನಿಂದ ನೀರನ್ನೇಕೆ ಸಾಗರದ ಜನತೆಗೆ ನೀಡಿಲ್ಲ. ಸಾಗರದಲ್ಲಿ ಬೀದಿ ನಾಯಿಗಳ ಹಾವಳಿ, ಬಿಡಾಡಿ ದನಗಳ ಹಾವಳಿ, ಹಂದಿಗಳ ಹಾವಳಿ ತಡೆಯಲು ನಗರಸಭೆ ಆಡಳಿತ ವಿಫಲವಾಗಿದೆ. ಶಾಸಕ ಹರತಾಳು ಹಾಲಪ್ಪ ಸಾಗರ ನಗರವನ್ನು ‘ಎಣ್ಣೆ’ ಸಾಗರ ಮಾಡಲು ಹೊರಟಿದ್ದಾರೆ ಎಂದರು. ಕಾರ್ಗಲ್ ಜೋಗ ಭಾಗಕ್ಕೆ ಇರುವ ಒಂದು ಪೋಲೀಸ್ ಠಾಣೆಯನ್ನು ತುಮರಿ ಭಾಗಕ್ಕೆ…

Read More

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರ ಮೇಲೆ ಹಲ್ಲೆ – ಆಸ್ಪತ್ರೆಗೆ ದೌಡಾಯಿಸಿದ ಹಿಂದೂ ಕಾರ್ಯಕರ್ತರು|assault

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ  ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.  ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್‌ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸಂದೇಶ್‌ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….

Read More