130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ – ಬಿ ಎಸ್ ಯಡಿಯೂರಪ್ಪ
ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಪ್ರಗತಿ ಗಣನೀಯವಾಗಿ ಹೆಚ್ಚಿದೆ. ಪ್ರತಿಯೊಂದು ಕುಟುಂಬಕ್ಕೂ ಸರಕಾರದ ಒಂದಲ್ಲ ಒಂದು ಯೋಜನೆಯ ಸವಲತ್ತು ದೊರಕಿದೆ. ಸರಕಾರದ ಯಾವುದೇ ಸವಲತ್ತು ದೊರೆಯದ ಕುಟಂಬ ಇದ್ದಲ್ಲಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಸವಾಲು ಹಾಕಿದರು. ಅವರು ಪಟ್ಟಣದ ನೆಹರೂ ಮೈದಾನದಲ್ಲಿ ಭಾನುವಾರ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಚುನಾವಣೆಗೆ ಕೇವಲ 8 ದಿನಗಳು ಬಾಕಿ ಉಳಿದಿವೆ. ಈಗ ಎಲ್ಲವೂ ಕಾರ್ಯಕರ್ತರ ಮೇಲೆ…