ರಿಪ್ಪನ್ಪೇಟೆ : ಸರ್ಕಾರಿ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಕರಣ – ಗ್ರಾಪಂ ಅಧ್ಯಕ್ಷರು ,ಉಪಾಧ್ಯಕ್ಷರ ಸದಸ್ಯತ್ವ ವಜಾಕ್ಕೆ ಆಮ್ ಆದ್ಮಿ ಮನವಿ|AAP
ರಿಪ್ಪನ್ಪೇಟೆ : ಇಲ್ಲಿನ ಬಿಸಿಎಂ ವಿದ್ಯಾರ್ಥಿನಿ ನಿಲಯದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಸದಸ್ಯತ್ವ ಅಭಿಯಾನ ನಡೆಸಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸದಸ್ಯತ್ವವನ್ನು ಕೂಡಲೇ ವಜಾ ಮಾಡುವಂತೆ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ನಾಡಕಛೇರಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಎಎಪಿ ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು 27-01-2023 ರ ಶುಕ್ರವಾರ ಸಂಜೆ ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ …