ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದಕ್ಕೆ ಯುವಕನ ಆತ್ಮಹತ್ಯೆ!?ಅಷ್ಟಕ್ಕೂ ನಡೆದಿದ್ದೇನು?? ದೂರಿನಲ್ಲಿ ಏನಿದೆ!?Crime-news
ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದ ಯುವಕನನ್ನ 112 ಪೊಲೀಸರು ಠಾಣೆಗೆ ಕರೆತಂದು ಆತನ ಪೊಷಕರ ಜೊತೆ ಕಳುಹಿಸಿದ್ದ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಘಟನೆ ನಡೆದು ನಾಲ್ಕು ದಿನಗಳ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮೃತನ ಪತ್ನಿ ಪೊಲೀಸರ ಟಾರ್ಚರ್ ಗೆ ಸಾವನ್ಬಪ್ಪಿರುವುದಾಗಿ ಆರೋಪಿಸಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ಹೊಳೆಹೊನ್ನೂರಿನಲ್ಲಿ ಕುಡಿದು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬುವರನ್ನ 112 ಗೆ ಬಂದ ಕರೆಯ…