Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read More

ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು  ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ. ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ: ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು…

Read More

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ, ಜುಲೈ 17, 2025: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ಸಂಬಂಧ ಕೆಲಸ ಮಾಡಿಕೊಡುವಂತೆ ಕೇಳಿ ₹3,000 ಲಂಚದ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಮಪುರ ಗ್ರಾಮದ ನಿವಾಸಿ ವಿನೋದ್ ಬಿ. ಅವರು ಲಂಚದ ಬೇಡಿಕೆ ಬಗ್ಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಡಿ ಅಳತೆಯ…

Read More

ರಿಪ್ಪನ್‌ಪೇಟೆ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಎರಡು ಲಾರಿ,ಟ್ರಾಕ್ಟರ್ ಮತ್ತು ಜಂಬಿಟ್ಟಿಗೆ ಕೊಯ್ಯುವ ಯಂತ್ರ ವಶಕ್ಕೆ|illegal mining

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಯಂತ್ರ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಮದೂರು ಮತ್ತು ಹೊನಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗ್ಗೆ ಗಣಿಗಾರಿಕೆ ನಡೆಸುತಿದ್ದ ಪ್ರದೇಶಕ್ಕೆ ದಾಳಿ ನಡೆಸಿ ಎರಡು ಲಾರಿ ,ಒಂದು ಟ್ರಾಕ್ಟರ್ ಮತ್ತು ಜಂಬಿಟ್ಟಿಗ್ಗೆ ಕೊಯ್ಯುವ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಭೂ ಮತ್ತು ಗಣಿ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – KTM ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ನಗರದ ನವುಲೆಯ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತವಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.  ಜೆಎನ್ ಸಿಸಿ ಇಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿ,ಕಾಶಿಪುರದ ನಿವಾಸಿ ಪುನೀತ್( 20) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಕೆಟಿಎಂ ಬೈಕ್ ಹಾಗೂ ಹೀರೋ ಹೋಂಡಾ ಪ್ಯಾಶನ್ ಪ್ರೊ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಂತರದಲ್ಲಿ ಕೆಟಿಎಮ್ ಬೈಕ್ ಎದುರಿನಲ್ಲಿದ್ದ KMF ಹಾಲಿನ ವಾಹನಕ್ಕೆ ಡಿಕ್ಕಿಯಾಗಿದೆ‌.ಈ ಅಪಘಾತದ ರಭಸಕ್ಕೆ ಕೆಟಿಎಮ್ ಬೈಕ್ ಸವಾರ ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಇನ್ನೊಂದು…

Read More

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅನಾಮಧೇಯ ಶವ ಪತ್ತೆ|Thirthahalli

ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದ್ದು,ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದೆ. ತೂದೂರು ಗ್ರಾಮದ ಸರ್ಕಾರಿ ಶಾಲೆ ಹಿಂಬಾಗ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಉಕ್ಕಡದಲ್ಲಿ ಶವವನ್ನು ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದು ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ.

Read More

ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ…

Read More

HOSANAGARA | ಅಕ್ರಮ ಮರ ಕಡಿತಲೆ – ಅರಣ್ಯ ಸಂಚಾರಿ ದಳ ದಾಳಿ : ಲಕ್ಷಾಂತರ ರೂ ಮೌಲ್ಯದ ನಾಟ ವಶಕ್ಕೆ..!!

ಅಕ್ರಮವಾಗಿ ಅಕೇಶಿಯ ಮರ ಕಡಿತಲೆ ಮಾಡಿ ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿದ ದಾಳಿ ಪೊಲೀಸ್ ಅರಣ್ಯ ಸಂಚಾರಿ ದಳ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟಾವ್ ಮಾಡಿ ಇರಿಸಿದ್ದ ಲಕ್ಷಾಂತರ ರೂ ಮೌಲ್ಯದ ಅಕೇಶಿಯ ಮರಗಳನ್ನು ವಶಕ್ಕೆ ಪಡೆದು ಆರೋಪಿತರ ಮೇಲೆ ಪ್ರಕರಣ ದಾಖಲಿಸಿದೆ….

Read More

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲಾ : ಸಚಿವ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ‘ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರಪ್ಪ, ವಾಟ್ಸ್ ಆ್ಯಪ್ ನಲ್ಲಿ ಟೈಪ್ ಮಾಡಿರುವ ಡೆತ್ ನೋಟ್ ಬಂದಿದೆ. ಆದರೆ ಸಹಿ ಮಾಡಿರುವ ಯಾವುದೇ ಡೆತ್ ನೋಟ್ ಪತ್ತೆ ಆಗಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಭಷ್ಟಾಚಾರ ಆಗಿಲ್ಲ. ಆದ್ದರಿಂದ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ’ ಎಂದು ಹೇಳಿದರು.  ನಾನು ಸಂತೋಷ್ ಮುಖವನ್ನೇ ನೋಡಿಲ್ಲ….

Read More