Headlines

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ|crime news

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ ಹೆತ್ತು ಹೊತ್ತ ತಾಯಿಯನ್ನು ಮಗನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಭೀಬತ್ಸಕರ ಘಟನೆ ಮಲೆನಾಡಿನಲ್ಲಿ ನಡೆದಿದೆ. ಇದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದ ಘೋರ ಹತ್ಯೆಯೊಂದರ ಕಥೆ. ಇಲ್ಲಿನ ಮಾವಿನಕೆರೆ ನಿವಾಸಿ ಸುಲೋಚನಮ್ಮ (60) ಎಂಬವರನ್ನು ಅವರ ಪುತ್ರನೇ ಕೊಂದು ಹಾಕಿದ್ದಾನೆ.  ತಾಯಿಯನ್ನೆ ಕೊಂದ ಕ್ರೂರಿ ಮಗ ಸಂತೋಷ (49) ಆತ ಭಾನುವಾರ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಸೋಮವಾರ…

Read More

ಖಾಸಗಿ ವೀಡಿಯೋ ಚಿತ್ರಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ – ಪ್ರಕರಣ ದಾಖಲು|cybercrime

ಶಿವಮೊಗ್ಗ : ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ಮತ್ತು ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಸಿ ತನ್ನ ಬಳಿ ಬರುವಂತೆ ಬ್ಲ್ಯಾಕ್ ಮೇಲ್ ಮಾಡಿ, ಮಹಿಳೆಯ ಸಂಬಂಧಿಕರಿಗೆ ಆ ಖಾಸಗಿ ಫೋಟೊ, ವಿಡಿಯೋಗಳನ್ನು ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ವ್ಯಕ್ತಿಯು ಮಹಿಳೆಯೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಬೆಂಗಳೂರಿನಲ್ಲಿದ್ದಾಗ ಮಹಿಳೆಯ ಖಾಸಗಿ ಫೋಟೊ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಹಿಳೆಯು ಶಿವಮೊಗ್ಗದಲ್ಲಿ ವಾಸವಿದ್ದು ಆಕೆಗೆ ಕರೆ ಮಾಡಿ ತನ್ನೊಂದಿಗೆ ಬಂದಿರುವಂತೆ ಒತ್ತಡ ಹೇರುತ್ತಿದ್ದ. ಇಲ್ಲದ್ದಿದ್ದರೆ ಸಂಬಂಧಿಕರಿಗೆ ಖಾಸಗಿ…

Read More

ಶಿವಮೊಗ್ಗದ ಗೌಸಿಯಾ ಹೋಟೆಲ್ ನಲ್ಲಿ ಮಾರಾಮಾರಿ :

ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ   ಗೌಸಿಯಾ ಹೋಟೆಲ್ ನಲ್ಲಿ ಗ್ಯಾಂಗ್ ವಾರ್ ಮಾರಾಮಾರಿ ನಡೆದಿದೆ. ರಿಯಲ್ ಎಸ್ಟೇಟ್ ನ ಹಣದ ವಿಚಾರದಲ್ಲಿ ಯುವಕರ ನಡುವೆಯೇ ಭರ್ಜರಿ ಕಾಳಗವೇ ನಡೆದಿದೆ ಶಿವಮೊಗ್ಗದ ಬಹುತೇಕ ಮಂದಿಗೆ ಈ ಗೌಸಿಯಾ ಹೋಟೆಲ್ ನೆನಪಿರಬಹುದು, ಹೋಗಲಿ ಮಾಲೀಕ  ಮನ್ಸೂರ್ ನೆನಪಿರಬಹುದು. ಹೋಗಲಿ ಅಸಲಿ ಫ್ಲಾಶ್ ಬ್ಯಾಕ್ ಹೇಳಬಿಡುತ್ತೇನೆ. ಬುಡಬುಡಕಿ ಸಾಧಿಕ್ ನ ಮರ್ಡರ್ ಪ್ರಕರಣದಲ್ಲಿ ಅರೊಪಿಯಾಗಿ ಜೈಲಿನಲ್ಲಿರುವ ಮನ್ಸೂರೇ ಈ ಹೋಟೆಲ್ ನ ಮಾಲೀಕ. ಬುಡಬುಡಕಿ ಸಾಧಿಕ್ ನ ಕೊಲೆಯೂ ಇದೇ ರಿಯಲ್ ಎಸ್ಟೇಟ್…

Read More

ಯುವಕನಿಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ : ಸ್ಥಳದಲ್ಲೇ ಯುವಕ ಸಾವು

ಶಿವಮೊಗ್ಗ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕ ಬಲಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರೊಂದು ಗಾಡಿಕೊಪ್ಪದ ಹತ್ತಿರ ಯುವಕನಿಗೆ ಡಿಕ್ಕಿ ಹೊಡೆದ ಪರಿಣಾಮಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ಸಂತೋಷ ಜಾಧವ್ (25) ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಸಂತೋಷ ದಿನ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಗಾಡಿಕೊಪ್ಪದ ತನ್ನ ಸೋದರಮಾವನ ಮನೆಯಲ್ಲಿ ವಾಸವಾಗಿದ್ದನು. ಸ್ಥಳೀಯರ ಮಾಹಿತಿಯ ಪ್ರಕಾರ ಐ20 ಕಾರೊಂದು…

Read More

Hosanagara | ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ, ನಗದು ಸಹಿತ 8 ಮಂದಿ ವಶಕ್ಕೆ !!

ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ ಸಹಿತ ನಗದು ವಶಕ್ಕೆ ! ಹೊಸನಗರ: ಖಚಿತ ಮಾಹಿತಿ ಮೇರೆಗೆ ಸೋಮವಾರ ಸಂಜೆ ವೇಳೆಗೆ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ನೀರೇರಿ ಗ್ರಾಮದ ಅಕೇಶಿಯಾ ಪ್ಲಾಂಟೇಷನ್‌ನಲ್ಲಿ ಅಕ್ರಮವಾಗಿ ಕೋಳಿ ಹುಂಜಗಳನ್ನು ಪಣಕ್ಕಿಟ್ಟು ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಪೊಲೀಸರು 11,170 ರೂ. ಹಣವನ್ನು ವಶಕ್ಕೆ ಪಡೆದು, 08 ಮಂದಿ ಆರೋಪಿಗಳು ಸಹಿತ ನಾಲ್ಕು ಕೋಳಿ ಹುಂಜ, ಎರಡು ಕತ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆ ಸಂಬಂಧ ಹೊಸನಗರ…

Read More

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : 17 ವರ್ಷದ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಪಟ್ಟಣಕ್ಕೆ ಆಗಮಿಸಿದ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಅಕ್ಟೋಬರ್ 18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ…

Read More

ಆರಗ ಆಸ್ತಿ ಮೂರು ಪಟ್ಟು ಹೆಚ್ಚು – ಕಿಮ್ಮನೆ ಆಸ್ತಿಯಷ್ಟೇ ಸಾಲ|ಜಿಲ್ಲೆಯ ಪ್ರಮುಖ ಅಭ್ಯರ್ಥಿಗಳ ಆಸ್ತಿ ಎಷ್ಟಿದೆ.???? ಈ ಸುದ್ದಿ ನೋಡಿ

ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರ (Karnataka assembly election 2023)ಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಮುಖ ಅಭ್ಯರ್ಥಿಗಳ ಆಸ್ತಿ ವಿವರ ಕೆಳಗಿನಂತಿದೆ. ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆರಗ ಅವರ ಆಸ್ತಿ ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಏರಿಕೆಯಾಗಿದೆ. ₹6.28 ಕೋಟಿ ಆಸ್ತಿ ಘೋಷಿಸಿದ್ದಾರೆ. 20 ಎಕರೆ ಜಮೀನು ಇದೆ, ಮೂರು ಕಾರು, ಪತ್ನಿ ಬಳಿ 250 ಗ್ರಾಂ ಚಿನ್ನವಿದೆ. ಕಿಮ್ಮನೆ ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು…

Read More

ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಥಳಿಸಿ ಕ್ರೌರ್ಯ ಮೆರೆದ ಹೊಸನಗರ ಪಿಎಸ್ ಐ : ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು ??????

ಪೊಲೀಸರು‌ ಮಹಜರ್ ಗೆ ಹೋದಾಗ ವ್ಯಕ್ತಿಯೋರ್ವ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಲಾಠಿ ರುಚಿ ತೋರಿಸಿದ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪ ಹತ್ತಿರ ಬಾಣಿಗ ಗ್ರಾಮದಲ್ಲಿ ಘಟನೆಯೊಂದಕ್ಕೆ ಪೊಲೀಸರು ಮಹಜರ್ ಗೆ ಹೋದಾಗ ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಮನಸೋಇಚ್ಚೇ  ಥಳಿಸಲಾಗಿದೆ ಎನ್ನಲಾಗಿದೆ. ಹೊಸನಗರ ಪಿಎಸ್ ಐ ರಾಜೇಂದ್ರ ಎ  ನಾಯ್ಕ್ ಹಾಗೂ ಜೀಪ್ ಚಾಲಕ ಅವಿನಾಶ್ ಈ ಕೃತ್ಯವೆಸಗಿದ್ದಾರೆ  ಎಂದು ಹೇಳಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ  ಈ…

Read More

ಹೊಸನಗರ ತಾಲೂಕಿನಾದ್ಯಂತ ನಾಳೆ(14-07-2022) ಶಾಲೆಗಳಿಗೆ ರಜೆ ಘೋಷಣೆ :

ಹೊಸನಗರ ತಾಲೂಕಿನ ಎಲ್ಲಾ ಶಾಲೆಗಳಿಗೆ ನಾಳೆ (14-07-2022)ರಂದು ರಜೆ ಘೋಷಿಸಲಾಗಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೇಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ.ಮತ್ತೊಮ್ಮೆ ಪರಿಸ್ಥಿತಿ ಪರಿಶೀಲಿಸಿ ತಹಶೀಲ್ದಾರ್,ಹೊಸನಗರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಸಹಮತದೊಂದಿಗೆ ಇಡೀ ಹೊಸನಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಿನಾಂಕ _14-07-2022 ರಂದು ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ. ಈ ಮೊದಲು ನಗರ ಹೋಬಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಆದರೆ ಇನ್ನುಳಿದ ಹೋಬಳಿಗಳ ಪೋಷಕರ ಒತ್ತಡ ಹಾಗೂ ಮಳೆಯ…

Read More

ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು  ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ. ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ: ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು…

Read More