ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ |bajarangdal
ಮಾರಾಟದ ಉದ್ದೇಶಕ್ಕಾಗಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಇಂದು ನಡೆದಿದೆ. ಹೊಸನಗರ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಅಶೋಕ್ ಲೈಲೆಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಎತ್ತಿನ ಹೋರಿ ಹಾಗೂ ಒಂದು ಎಮ್ಮೆ ಕರುವನ್ನು ಭಜರಂಗದಳದ ಕಾರ್ಯಕರ್ತರು ರಸ್ತೆಗೆ ಅಡ್ಡಗಟ್ಟಿ ವಶಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಬೆಳಿಗ್ಗೆ ಕೆಎ 17 ಎಎ 0196 ವಾಹನದಲ್ಲಿ ಸುಮಾರು ಆರು ಎತ್ತಿನಹೋರಿ ಹಾಗೂ ಒಂದು ಎಮ್ಮೆ…