Headlines

ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read More

ರಿಪ್ಪನ್‌ಪೇಟೆ : 396 ನೇ ಶಿವಾಜಿ ಜಯಂತಿ ಆಚರಣೆ

ರಿಪ್ಪನ್‌ಪೇಟೆ : ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಭಾರತೀಯರ ಕಣ ಕಣದಲ್ಲೂ ಶಿವಾಜಿಯ ಆದರ್ಶ ಗುಣಗಳು ಕರಗತವಾಗಬೇಕು. ಸಂಸ್ಕಾರಯುತ ಸಮಾಜದ ನಿರ್ಮಾಣದಲ್ಲಿ ಶಿವಾಜಿಯ ಹೋರಾಟದೊಂದಿಗೆ ಆತನಿಗೆ ಸ್ಫೂರ್ತಿ ನೀಡಿದ್ದ ತಾಯಿ ಜೀಜಾಬಾಯಿಯ ಕೊಡುಗೆಯೂ ಸ್ಮರಣೀಯ ಎಂದು ರಿಪ್ಪನ್‌ಪೇಟೆ ಮರಾಠ ಸಮಾಜದ ಅಧ್ಯಕ್ಷ ನಾಗೇಶ್ ಹೊಸಮನೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಾಗರ ರಸ್ತೆಯ ಶಿವಾಜಿ ಸರ್ಕಲ್  ನಡೆದ ಶಿವಾಜಿ ಜಯಂತಿ ಆಚರಣೆಯಲ್ಲಿ ಮಾತನಾಡಿ ಪರಕೀಯರ ಅಟ್ಟಹಾಸದಿಂದ ಭಾರತವನ್ನು ರಕ್ಷಿಸುವಲ್ಲಿ…

Read More

ಈಜಲು ಹೋದ ಎಂಬಿಬಿಎಸ್ ವಿದ್ಯಾರ್ಥಿ ಶವವಾಗಿ ಪತ್ತೆ|death

ಶಿವರಾತ್ರಿಯ ನಿಮಿತ್ತ ಜಾಲಿ ಮೂಡ್ ನಲ್ಲಿದ್ದ ವಿದ್ಯಾರ್ಥಿಗಳ ಗುಂಪೊಂದಕ್ಕೆ ಆಘಾತವಾಗಿದೆ ಶಿವಮೊಗ್ಗ ಜಿಲ್ಲೆಯ ಭದ್ರಾ ಚೆಕ್ ಡ್ಯಾಂ ನ ನೀರಿನಲ್ಲಿ ಈಜಲು ಹೋಗಿದ್ದ ಸಿಮ್ಸ್ ನ ವಿದ್ಯಾರ್ಥಿ ನೀರುಪಾಲಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಇಂದು ನಡೆದಿದೆ. ಭದ್ರಾ ನದಿಯ ಗೋಂದಿ ಚೆಕ್ ಡ್ಯಾಂಗೆ ಶಿವಮೊಗ್ಗದ ಸಿಮ್ಸ್ ನ ವಿದ್ಯಾರ್ಥಿ ಜಗತ್ ಮತ್ತು ಇತರೆ ಐವರು ಸ್ನೇಹಿತರು ಈಜಲು ತೆರಳಿದ್ದಾರೆ. ಜಗತ್(21) ಜೊತೆಗೆ  ಓರ್ವ ನೀರಿಗೆ ಇಳಿದಿದ್ದಾನೆ. ಜಗತ್ ನೀರಿನಲ್ಲಿ ಮುಂದೆ ಹೋಗಿದ್ದು ಆಳವಿದ್ದುದ್ದರಿಂದ ನೀರಿನಲ್ಲಿ ಮುಳುಗಿದವನು ಮೇಲೆ…

Read More

ಜಮೀನು ಮಂಜೂರು ವಿಚಾರದಲ್ಲಿ ಯಾರಿಗೂ ನಯಾ ಪೈಸೆ ಹಣ ಕೊಡಬೇಡಿ – ಗೃಹ ಸಚಿವ ಆರಗ ಜ್ಞಾನೇಂದ್ರ|94c

94ಸಿ ಹಾಗೂ ಬಗರ್‌ಹುಕುಂ ಹಕ್ಕು ಪತ್ರ ವಿತರಣೆ ; ಜಮೀನು ಮಂಜೂರು ವಿಚಾರದಲ್ಲಿ ನಯಾ ಪೈಸೆ ಹಣ ಕೊಡಬೇಡಿ ; ಸಚಿವ ಆರಗ ಜ್ಞಾನೇಂದ್ರ ಹೊಸನಗರ: ಜಮೀನು ಮಂಜೂರಾತಿ ವಿಚಾರದಲ್ಲಿ ಅಧಿಕಾರಿಗಳು ಹಣ ಕೇಳುವ ಕುರಿತಾಗಿ ಸಾಕಷ್ಟು ದೂರು ಬಂದಿದ್ದು ರೈತರು ನಯಾ ಪೈಸೆ ಕೊಡಬೇಡಿ. ಅರ್ಹ ಫಲಾನುಭವಿ ರೈತರಿಗೆ ಹಕ್ಕುಪತ್ರ ಸಿಕ್ಕೆ ಸಿಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ 94 ಸಿ ಹಾಗೂ ರೈತರಿಗೆ ಬಹರ್‌ಹುಕುಂ ಸಾಗುವಳಿ ಹಕ್ಕು…

Read More

ಚಲಿಸುತಿದ್ದ ರೈಲಿನಿಂದ ಕೆಳಗೆ ಬಿದ್ದು ರಿಪ್ಪನ್‌ಪೇಟೆಯ ಸರ್ಕಾರಿ ವೈದ್ಯ ಸಾವು|accident

ರಿಪ್ಪನ್‌ಪೇಟೆ : ತುಮಕೂರು ಜಿಲ್ಲೆಯ ಕ್ಯಾತಸಂದ್ರ ಬಳಿ ಚಲಿಸುತಿದ್ದ ರೈಲಿನಿಂದ ಬಿದ್ದು ಪಟ್ಟಣದ ಶಬರೀಶನಗರದ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಬರೀಶನಗರದ ಡಾ. ಗುರುರಾಜ್ ((46) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಂಗಳೂರಿನಿಂದ – ಶಿವಮೊಗ್ಗಕ್ಕೆ ರೈಲಿನಲ್ಲಿ ಸಂಚರಿಸುತಿದ್ದಾಗ ಕ್ಯಾತಸಂದ್ರದ ಬಳಿ ರೈಲಿನ ಬಾಗಿಲು ತಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತಿದೆ. ಡಾ. ಗುರುರಾಜ್ ರಿಪ್ಪನ್‌ಪೇಟೆ,ಹೊಸನಗರ ಮತ್ತು ಗೌತಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಪ್ರಸ್ತುತ ಸಂಪೆಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತಿದ್ದರು.ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ…

Read More

ಶಿವಮೊಗ್ಗ ಜೈಲಿನಲ್ಲಿ ಮಾರಾಮಾರಿ : ಒಬ್ಬನಿಗೆ ಆರು ಜನರಿಂದ ಥಳಿತ|jail

ಶಿವಮೊಗ್ಗ : ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಮೇಲೆ ಹಳೇ ದ್ವೇಷದಿಂದ ಇತರ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ನಾಗರಾಜ್ ಎಂಬ ವಿಚಾರಣಾಧೀನ ಕೈದಿ ಮೇಲೆ ಸಚಿನ್ ಅಲಿಯಾಸ್ ಸ್ಯಾಡೋ, ದರ್ಶನ್, ಪರಶುರಾಮ, ಅನಿಲ್‌ಕುಮಾರ್, ವಿಶ್ವನಾಥ, ವಿಶಾಲ್ ಎಂಬುವರು ಹಲ್ಲೆ ಮಾಡಿದ್ದಾರೆ. ನಾಗರಾಜ್ ಭದ್ರಾವತಿಯ ಎರಡನೇ ಅಪರ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಲು ಜೈಲಿನಲ್ಲಿರುವ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುವಾಗ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಜೈಲು ನಿರೀಕ್ಷಕ ಆತ್ಮಾನಂದ ಕುದರಿ ಮತ್ತು…

Read More

ಸಾಗರ : ಐಗಿನಬೈಲ್ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಡಿಕ್ಕಿ – ಯುವತಿ ಸ್ಥಳದಲ್ಲೇ ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲೇ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಿನಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ 24 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಶೃತಿ(24) ಮೃತಪಟ್ಟಿರುವ ಯುವತಿಯಾಗಿದ್ದು  ಶಿವಮೊಗ್ಗದ ಸಿಟಿ ಸೆಂಟರ್ ನಲ್ಲಿ ಸೆಕ್ಯೂರಿಟಿ ಗಾರ್ಡಾಗಿ…

Read More

ತೀರ್ಥಹಳ್ಳಿ ಪಟ್ಟಣದ ತುಡ್ಕಿಯಲ್ಲಿ ಕಾಣಿಸಿಕೊಂಡ ಚಿರತೆ – ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ|leopard

ವನ್ಯಜೀವಿಗಳ ಕಾಟ ಬರೀ ಗ್ರಾಮಾಂತರ ಪ್ರದೇಶಕ್ಕೆ ಸೀಮಿತವಾಗಿಲ್ಲ, ಪಟ್ಟಣ, ನಗರ ಪ್ರದೇಶಕ್ಕೂ ವನ್ಯಜೀವಿಗಳು ದಾಂಗುಡಿ ಇಡುತ್ತಿದ್ದು ಭಯ ಮೂಡಿಸುತ್ತಿವೆ. ಕೆಲದಿನದಿಂದ ಪಟ್ಟಣ ಸಮೀಪದ ತುಡ್ಕಿಯ ಆನಂದಗಿರಿ ಗುಡ್ಡದ ಸುತ್ತಲಿನ ಪ್ರದೇಶದಲ್ಲಿ ಚಿರತೆ ಕಂಡು ಬಂದಿದ್ದು ಜನರು ಗಾಬರಿಗೊಂಡಿದ್ದಾರೆ. ಆನಂದಗಿರಿ ಗುಡ್ಡದಲ್ಲಿರುವ ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ. ಮಕ್ಕಳ ಪ್ರಾರ್ಥನಾ ಕಾರ್ಯಕ್ರಮದ ಅವಧಿಯನ್ನು ಕೆಲ ದಿನದ ಮಟ್ಟಿಗೆ ಬದಲಾಯಿಸಲಾಗಿದೆ. ಕಟ್ಟಡ ಒಳಾಂಗಣ, ಕೊಠಡಿಯಲ್ಲಿ ಇರುವಂತೆ ಮಕ್ಕಳಿಗೆ ಸೂಚಿಸಲಾಗಿದೆ. ಚಿರತೆ ಓಡಾಟವನ್ನು ಸಾರ್ವಜನಿಕರು…

Read More

ಅತ್ಯಂತ ನೀರಸ,ಚುನಾವಣಾ ತಂತ್ರಗಾರಿಕೆಯ ಬಜೆಟ್‌ – ಜೆಡಿಎಸ್|JDS

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ 2023-24 ನೇ ಸಾಲಿನ ಬಜೆಟ್ ಚುನಾವಣಾ ತಂತ್ರಗಾರಿಕೆ ಬಜೆಟ್ ಆಗಿದೆಯೇ ಹೊರತು ಇದರಲ್ಲಿ ಯಾವುದೇ ಅಭಿವೃದ್ಧಿ ಕಾರ್ಯದ ಮುನ್ನೋಟವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಆರೋಪಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದ್ದರು. ಎಲ್ಲೂ ಕೂಡ ದುಪ್ಪಟ್ಟು ಮಾಡಲು ಯೋಜನೆ ಹಾಕಿಕೊಂಡಿಲ್ಲ. ಕೇಂದ್ರ ಸರ್ಕಾರ ಈ ಸಲ ಕೃಷಿಗೆ 50 ಸಾವಿರ ಕೋಟಿ ರೂ‌ಪಾಯಿ ಅನುದಾನ ಕಡಿಮೆ ಮಾಡಿದ್ದಾರೆ….

Read More

ಕರ್ನಾಟಕ ಬಜೆಟ್ 2023-24 : ಸಂಪೂರ್ಣ ಮುಖ್ಯಾಂಶಗಳು

2023-24ನೇ ಸಾಲಿನ ಆಯವ್ಯಯ ಸನ್ಮಾನ್ಯ ಸಭಾಧ್ಯಕ್ಷರೆ, 1. 2023-24ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. 2. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ. 3. ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 6.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ. ಇದೇ ಸಂದರ್ಭದಲ್ಲಿ G-20…

Read More