Headlines

ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂರಕ : ಆರಗ ಜ್ಞಾನೇಂದ್ರ.

 ರಿಪ್ಪನ್ ಪೇಟೆ: ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆಗಳ  ತೆರೆಯುವಿಕೆಯಿಂದ  ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ಇಂಗ್ಲಿಷ್ ಭಾಷೆಯ ಬಳಕೆಯ  ದುರುಪಯೋಗ ಸಿಗುತ್ತದೆ ಎಂದು ರಾಜ್ಯ ಗೃಹ ಸಚಿವ ಹಾಗೂ ತೀರ್ಥಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.  ಅಮೃತ ಗ್ರಾಮದಲ್ಲಿ  ಶನಿವಾರ ಆಯೋಜಿಸಲಾಗಿದ್ದ ಎರಡು ಕೋಟಿ ರೂ ವೆಚ್ಚದ ಕರ್ನಾಟಕ ಪಬ್ಲಿಕ್ ಸ್ಕೂಲಿನ  ನೂತನ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ…

Read More

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ : ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸಿ :ನಾಗರಾಜ ಪರಿಸರ.

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನದಲ್ಲಿ  ಶಿಕ್ಷಣ  ಪಡೆಯುತ್ತಿರುವ ಯುವ ಸಮೂಹ  ಪ್ರತಿಯೊಬ್ಬರನ್ನು  ಗೌರವಿಸುವ  ಮನೋಭಾವನೆಯನ್ನು ಬೆಳೆಸಿಕೊಂಡರೆ  ಉತ್ತಮ ಸಮಾಜ  ನಿರ್ಮಾಣ ಮಾಡಬಹುದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜನೆ ಅಧಿಕಾರಿ  ಡಾ. ನಾಗರಾಜ  ಪರಿಸರ  ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸುವಂತಾಗಬೇಕು. ಅಂತ ಮನೋಭಾವನೆಯನ್ನು…

Read More

ತೀರ್ಥಹಳ್ಳಿ : ಶರಾವತಿ ಚಳುವಳಿ ಪಾದಯಾತ್ರೆಗೆ ಕಲ್ಲುಕೊಪ್ಪದಿಂದ ಚಾಲನೆ :

ತೀರ್ಥಹಳ್ಳಿ : ಶರಾವತಿ ವರಾಹಿ ಚಕ್ರ ಸಾವೇಹಕ್ಲು ಮುಳುಗಡೆ ಸಂತ್ರಸ್ತರಿಗೆ ಭೂಮಿ ಮತ್ತು ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಇಂದು ಕಲ್ಲುಕೊಪ್ಪದಲ್ಲಿ ಮೂರು ದಿನ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಗೋಡು ತಿಮ್ಮಪ್ಪ ಚುನಾವಣೆ ಇರಲಿ ಬಿಡಲಿ ಸಂತ್ರಸ್ತರಿಗೆ ನ್ಯಾಯಕೊಡಿಸಬೇಕು. ಈ ಭಾಗದಲ್ಲಿ ನೆಲೆಸಿರುವ ಸಂತ್ರಸ್ತರ ಪಟ್ಟಿ ಮಾಡಿ ಈ ಕಾಯ್ದೆ ಅಡಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ್ ಗೆ ಪಟ್ಟಿ ನೀಡುವಂತೆ ಕೋರಿದ ಕಾಗೋಡು. ಬಂದವರಿಗೆಲ್ಲಾ ಹಕ್ಕುಪತ್ರ ಕೊಡಿ ಎಂದು ಅರ್ಜಿ ಕೊಡುವುದಲ್ಲವೆಂದು ಗುಡುಗಿದರು….

Read More

ಕೋಡೂರು ಸಮೀಪದಲ್ಲಿ ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ : ಕಾರು ಸಮೇತ ಅಕ್ರಮ ಗಾಂಜಾ ವಶಕ್ಕೆ

ಕೋಡೂರು  : ಇಲ್ಲಿನ ಸಮೀಪದ ಕೇಶವಪುರ ಗ್ರಾಮದಲ್ಲಿ ಕಾರಿನಲ್ಲಿ‌ ಗಾಂಜಾ ಸಾಗಾಟ ಮಾಡುತಿದ್ದ ಕಾರು ಮತ್ತು 60ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಕೇಶವಪುರ ಗ್ರಾಮದ ಶೇಕ್ ಫೈಝರ್ ಮಸೂದ್ ಗೆ ಸೇರಿದ ಕಾರಿನ ಮೇಲೆ ದಾಳಿ ಮಾಡಿ ಕಾರಿನಲ್ಲಿ ಸಾಗಣಿಕೆ ಮಾಡಲು ಹೊಂದಿದ್ದ 60 ಗ್ರಾಂ ಒಣ ಗಾಂಜಾ ಸೊಪ್ಪುನ್ನು ಮತ್ತು ಒಂದು ಕಾರನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ಧ ಅಬಕಾರಿ ನಿರೀಕ್ಷಕರು ಹೊಸನಗರ ವಲಯ ರವರು NDPS ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದೆ‌. ಈ ದಾಳಿಯಲ್ಲಿ  ಅಬಕಾರಿ…

Read More

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ | Thirthahalli

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ ತೀರ್ಥಹಳ್ಳಿ : ಸಾಗರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪನವರಿಗೆ ಈಡಿಗ ನಾಮಧಾರಿ, ಬಿಲ್ಲವ, ದೀವರು ಹಾಗೂ 26 ಪಂಗಡಗಳ ವತಿಯಿಂದ ಮಾ. 5, ರಂದು ಅದ್ದೂರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈಡಿಗ ಸಮಾಜಕ್ಕೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ…

Read More

Ripponpete | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ

ಪ್ರಜ್ವಲ್ ರೇವಣ್ಣ ಪ್ರಕರಣ ಸಿ.ಬಿ.ಐ.ಗೆ ಒಪ್ಪಿಸುವಂತೆ  ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್‌ಡ್ರೈವ್ ಬಿಡುಗಡೆ ಪ್ರಕರಣವನ್ನು ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಧೀಶರಿಗೆ ವಹಿಸುವಂತೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಸಂಪುಟದಿಂದ  ವಜಾ ಮಾಡುವಂತೆ  ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ನೇತೃತ್ವದಲ್ಲಿ ರಾಜ್ಯಪಾಲರರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು. ಮನವಿ ಪತ್ರವನ್ನು ಸಲ್ಲಿಸಿ ಮಾದ್ಯಮಪ್ರತಿನಿಧಿಗಳೊಂದಿಗೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್…

Read More

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ ವಿವಿಧೆಡೆ ಇ ಡಿ (ED) ದಾಳಿ

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ  ಇ ಡಿ (ED) ದಾಳಿ ಶಿವಮೊಗ್ಗ:  2014ರಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಕಲಿ ಬಂಗಾರ ಹಗರಣಕ್ಕೆ ಸಂಬಂಧಿಸಿ ಜಾರಿ‌ ನಿರ್ದೇಶನಾಲಯದ ( ಇ. ಡಿ. )ಅಧಿಕಾರಿಗಳು  ಮಂಗಳವಾರ ಶಿವಮೊಗ್ಗ ಮತ್ತು ಭದ್ರಾವತಿಯ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದರು. ಅಂದು ಹಗರಣದ ಕೇಂದ್ರಬಿಂದುವಾಗಿದ್ದ ಡಿಸಿಸಿ ಬ್ಯಾಂಕಿನ  ಶಿವಪ್ಪ‌ನಾಯಕ ವೃತ್ತದ ಬಳಿ ಇದ್ದ ಶಾಖೆಯ  ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ  ಅವರ ನಿವಾಸ, ಚಾಲಕರಾಗಿದ್ದ ಕಾಮಾಕ್ಷಿ ಬೀದಿಯ ಶಿವಕುಮಾರ್ ಮನೆ, ಭದ್ರಾವತಿ…

Read More

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್ ರಿಪ್ಪನ್‌ಪೇಟೆ : ಕಾರು, ಬೈಕ್ ಹಾಗೂ ಇತರ ವಾಹನಗಳಿಗೆ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್ ಹಾಕಿಸಿಕೊಳ್ಳುವುದು ಈಗ ಸಾಮಾನ್ಯವಾಗಿಬಿಟ್ಟಿದೆ. ಆದರೆ, ಇದರಿಂದ ಎದುರುಬದಿಯಲ್ಲಿ ವಾಹನ ಚಲಾಯಿಸುವವರಿಗೆ ವಿಪರೀತ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಇದರ ವಿರುದ್ಧ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಇಂದು ಹಲವಾರು ವಾಹನಗಳ LED ಲೈಟ್ ನ್ನು…

Read More

ರಿಪ್ಪನ್‌ಪೇಟೆ : ಯುವ ಕಾಂಗ್ರೆಸ್ ವತಿಯಿಂದ ಅರಸಾಳುವಿನಲ್ಲಿ ರೈಲು ತಡೆಗೆ ಯತ್ನ – ಕಾರ್ಯಕರ್ತರ ಬಂಧನ,ಬಿಡುಗಡೆ|Protest

ರಿಪ್ಪನ್‌ಪೇಟೆ : ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ಪಟ್ಟಣದ ಸಮೀಪದ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ವತಿಯಿಂದ ರೈಲು ತಡೆಗೆ ಯತ್ನಿಸಿದ ಘಟನೆ ನಡೆಯಿತು. ಇಂದು ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗೂತ್ತ ಮೈಸೂರು – ತಾಳಗುಪ್ಪ ರೈಲು ತಡೆ ನಡೆಸಲು ಮುನ್ನುಗ್ಗುತಿದ್ದಂತೆ ಗೇಟ್ ಬಳಿಯೇ ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದರು. ಕಾರ್ಯಕರ್ತರನು ಬಂಧಿಸಿ ರಿಪ್ಪನ್‌ಪೇಟೆ…

Read More

ಮನೆ ಮೇಲೆ ಬಿದ್ದ ಮರ : ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಮತ್ತು ಮಗು ಪಾರು

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ…

Read More
Exit mobile version