ಎತ್ತು ಸಾಗಿಸುತಿದ್ದವನ ಮೇಲೆ ಹಲ್ಲೆ – 9 ಮಂದಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ.  ಎತ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ.  ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ….

Read More

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ|jds

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿ ಆರ್. ಎ. ಚಾಬುಸಾಬ್ ಅವರನ್ನು ನೇಮಿಸಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಪಕ್ಷ ಸಂಘಟನೆಗೆ ಅಣಿಯಾಗುವಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ನೀಡಿದ್ದಾರೆ. ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಪಕ್ಷದ ಕಟ್ಟಾಳಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಚಾಬುಸಾಬ್ ಅವರು ಎರಡನೇ ಬಾರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿದ್ದಾರೆ. ಮೊದಲಿಗೆ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲದೇ ಇರುವಾಗ ಪಕ್ಷ…

Read More

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ ತೀರ್ಥಹಳ್ಳಿ : ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ ( ಐ. ಸಿ. ಎಸ್. ಸಿ ) ಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾರೆ. ಐಸಿರಿ (14 ವರ್ಷ )  ಮೃತಪಟ್ಟ ದುರ್ಧೈವಿ.ಹೆಗ್ಗೋಡಿನ ಐಸಿರಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.  ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ ಹೊಸನಗರ : ಮಾರುತಿ ಓಮಿನಿ‌ ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತವಾದ ಘಟನೆ ಕರಿನಗೊಳ್ಳಿ ಸಮೀಪದಲ್ಲಿ ನಡೆದಿದೆ. ಕಾರಿನಲ್ಲಿದ್ದ 4 ಮಕ್ಕಳು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗುತ್ತಿದೆ. ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ನ ಮುಂಭಾಗದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಮಾರುತಿ ಓಮ್ನಿ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಹೊಸನಗರ ಕಡೆಗೆ…

Read More

ರಿಪ್ಪನ್‌ಪೇಟೆ – ಕ್ಯಾಂಟರ್ ಲಾರಿ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಕ್ಯಾಂಟರ್ ಲಾರಿ ಹಾಗೂ ಟೊಯೋಟಾ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಸಮೀಪದಲ್ಲಿ ನಡೆದಿದೆ. ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಟೊಯೋಟಾ ಇನ್ನೋವಾ ಕಾರು ಹಾಗೂ ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ ಕ್ಯಾಂಟರ್ ಲಾರಿ ನಡುವೆ ಸೂಡೂರು ಗೇಟ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಆಯನೂರು ಬಳಿ ಮರಕ್ಕೆ ಡಿಕ್ಕಿ‌ ಹೊಡೆದ ಖಾಸಗಿ ಬಸ್ : ಹಲವರಿಗೆ ಗಂಭೀರ ಗಾಯ

ಆಯನೂರು : ಇಲ್ಲಿನ ಸಮೀಪದ ಕದಂಬ ರೆಸ್ಟೋರೆಂಟ್ ಬಳಿ ಖಾಸಗಿ ಬಸ್ ಮರಕ್ಕೆ ಗುದ್ದಿ ಹಲವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಚಾಮೇನಹಳ್ಳಿಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಮಂಜುನಾಥ್ ಬಸ್  ವಾಹನವೊಂದನ್ನು ಹಿಂದಿಕ್ಕಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ಚಾಮೇನಹಳ್ಳಿ ನಿವಾಸಿಗಳಾದ ಶಿಲ್ಪ(33) ಕೀರ್ತಿ(21) ಭೂಮಿಕಾ(21) ಮತ್ತು ಕಾವ್ಯಾ(21) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಮೂವರು ಶಿವಮೊಗ್ಗದ ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಕುಂಸಿ ಪೊಲೀಸ್ ಠಾಣೆ…

Read More

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More

ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು

ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04  ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ  ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು  ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.  ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…

Read More

ಅಕ್ರಮವಾಗಿ ಜಾನುವಾರು ವಧೆ, ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ

ಜಾನುವಾರು ವಧೆ, ಅಕ್ರಮ ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ ರಿಪ್ಪನ್‌ಪೇಟೆ : ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಗರ್ತಿಕೆರೆಯ ಮಸ್ಜೀದ್ ಎ ಖುಬಾ ಮಸೀದಿ ಸಮಿತಿಯವರು ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ನಂತರ ಮಾತನಾಡಿದ ಗರ್ತಿಕೆರೆ ಮಸ್ಜಿದ್ ಎ ಖುಬಾ ಮಸೀದಿಯ ಅಧ್ಯಕ್ಷರಾದ ಬಶೀರ್ ಅಹಮದ್ ಗರ್ತಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇತ್ತಿಚೆಗೆ ಅನಧಿಕೃತವಾಗಿ ಜಾನುವಾರುಗಳ…

Read More