ರಾಜ್ಯ ಗೃಹಮಂತ್ರಿಗಳ ಸಾಮ್ರಾಜ್ಯದಲ್ಲಿ ಇದೆಂತಹ ಪರಿಸ್ಥಿತಿ…!!
ರಿಪ್ಪನ್ಪೇಟೆ: ಕೋಡೂರು ಮತ್ತು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಂತಪುರ – ಗರ್ತಿಕರೆ ಸಂಪರ್ಕಿಸುವ ಸುಮಾರು 10 ಕಿ.ಮೀ.ಉದ್ದದ ಜಿಲ್ಲಾ ಮುಖ್ಯರಸ್ತೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ರೈತನಾಗರೀಕರು ಓಡಾಡದಂತಾಗಿದ್ದರೂ ಕೂಡಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಸಚಿವರ ಕಣ್ಣಿಗೆ ಇನ್ನೂ ಬಿದ್ದಿಲ್ಲವೊ..! ಎಂಬ ಅನುಮಾನ ಇಲ್ಲಿನ ಜನರನ್ನು ಕಾಡುವಂತಾಗಿದೆ. 1995 ರಲ್ಲಿ ನಬಾರ್ಡ್ ಯೋಜನೆಯಡಿ ಡಾಂಬರೀಕರಣಗೊಂಡ ಶಾಂತಪುರ-ಗರ್ತಿಕೆರೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ರಸ್ತೆಯಲ್ಲಿ ಹೊಂಡಗಳಿದೆಯೋ ಅಥವಾ ಹೊಂಡಗಳಲ್ಲಿ ರಸ್ತೆ…