ಅಮ್ಮನಘಟ್ಟ ಕಪ್ಪು ಬಾವುಟ ಪ್ರದರ್ಶನ ಪ್ರಕರಣ – ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ವಿರುದ್ದ ಪ್ರತಿಭಟನೆಯೇ ಹೊರತು ಶಾಸಕರ ವಿರುದ್ದವಲ್ಲ – ಚಿದಂಬರಂ ಸ್ಪಷ್ಟನೆ|black
ರಿಪ್ಪನ್ಪೇಟೆ : ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ್ದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ವಿರುದ್ದವೇ ಹೊರತು ಶಾಸಕರ ವಿರುದ್ದವಲ್ಲ ಎಂದು ಮಾರುತಿಪುರ ಗ್ರಾಪಂ ಅಧ್ಯಕ್ಷ ಎಚ್ ಬಿ ಚಿದಂಬರ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ಚಿದಂಬರಂ ಬಳಿ ದೂರವಾಣಿ ಮೂಲಕ ಸ್ಪಷ್ಟನೆ ಕೇಳಿದಾಗ ಮಾತನಾಡಿದ ಅವರು ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದು ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ…


