ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ|CM

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.‌ ಮಧ್ಯಾಹ್ನದ ವೇಳೆಗೆ ಶಿವಮೊಗ್ಗಕ್ಕೆ ಆಗಮಿಸಿ ಸಂಜೆ ಬೆಂಗಳೂರಿಗೆ ನಿರ್ಗಮಿಸುತ್ತಿದ್ದಾರೆ. ನವೆಂಬರ್ 25 ರ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.50 ಕ್ಕೆ ಶಿವಮೊಗ್ಗದ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ ತಲುಪುವರು. ನಂತರ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 4.15 ಕ್ಕೆ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್‍ನಿಂದ ಹೊರಟು ಸಂಜೆ 5.35 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣ ತಲುಪುವರು…

Read More

Ripponpete | ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ

ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನ ಮುಂದೊಂದು ದಿನ ಪುಣ್ಯ ಕ್ಷೇತ್ರವಾಗಲಿದೆ – ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ.ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು ಅನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಆಯೋಜಿಸಲಾದ ಧಾರ್ಮಿಕ ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ…

Read More

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು   ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…

Read More

ಸರ್ಕಾರಿ ಗೌರವದೊಂದಿಗೆ ಯೋಧ ಪ್ರಜ್ವಲ್ ಅಂತ್ಯಕ್ರಿಯೆ – ಶಾಸಕ ಬೇಳೂರು ಅಂತಿಮ ನಮನ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ಪ್ರಜ್ವಲ್‌ ಅಂತ್ಯಕ್ರಿಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು. ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಗ್ನಿವೀರ್‌ ಯೋಧ ಪ್ರಜ್ವಲ್‌ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ರಜ್ವಲ್‌ಗೆ ಅಂತಿಮ ನಮನ ಸಲ್ಲಿಸಲಾಯಿತು ಅಗಲಿದ ಯೋಧನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್‌ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ…

Read More

ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ಜನರು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ನಡೆಯುತಿದ್ದ ಸಾಮಾನ್ಯಸಭೆಗೆ ದಿಡೀರ್ ಭೇಟಿ ನೀಡಿದ ಅವರು ಜನಪ್ರತಿನಿಧಿಗಳ ಬಳಿ ಅಹವಾಲು ಕೇಳಿ…

Read More

ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ

ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ ಹೊಸನಗರ, ನವೆಂಬರ್ 3: ಹೊಸನಗರ ತಾಲೂಕಿನ ನಿಟ್ಟೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಘಟಕದ ವತಿಯಿಂದ ಕಾರ್ಯಕರ್ತರ ಸಭೆ ಜರುಗಿತು. ನಿಟ್ಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಹಸಿರೆಮಕ್ಕಿ–ಕೆ.ಬಿ. ಸರ್ಕಲ್ ರಸ್ತೆ, ರಾಮೇಶ್ವರ, ಮಹಾಗಣಪತಿ ಹಾಗೂ ವೀರಭದ್ರ ದೇವಸ್ಥಾನಗಳ ರಸ್ತೆ, ಕಾಲುಸಂಕ ನಿರ್ಮಾಣ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ವಿಶೇಷ…

Read More

ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Shivamogga district reports two separate theft incidents – daytime house burglary in Kunsi Kanaka Nagar where ₹1.40 lakh worth gold stolen, and arecanut theft in Veerapura shed with ₹1.20 lakh loss. Police investigation underway. ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕುಂಸಿ ಗ್ರಾಮದ ಕನಕ ನಗರದಲ್ಲಿರುವ ಎಲೆಕ್ಟ್ರಿಷಿಯನ್…

Read More

ಶಿವಮೊಗ್ಗ ಮೂಲದ ಮಹಿಳೆ ನಾಪತ್ತೆ|missing

ಶಿವಮೊಗ್ಗ ಮೂಲದ ಕೆ.ಶುಭಾ ಎಂಬವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.   ಈಕೆ ಬಹರೈನ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅಲ್ಲಿಂದ ತಮ್ಮ ಗಂಡನ ಮನೆ ಇರುವ ಉಡುಪಿ ಜಿಲ್ಲೆಯ ಗೋಪಾಲಪುರಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ ಆ ಬಳಿಕ ನಾಪತ್ತೆಯಾಗಿದ್ದಾರೆ.  ಇವರ ಗುರುತು 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ, ಮರಾಠಿ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತ ನಾಡುತ್ತಾರೆ.  ಇವರ ಬಗ್ಗೆ ಮಾಹಿತಿ…

Read More

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ A private bus and a car collided head-on at Agumbe Ghat in Shivamogga district. No fatalities were reported as the bus driver managed to control the vehicle, preventing a major tragedy. ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿಯಿಂದ ಉಡುಪಿಯತ್ತ ತೆರಳುತ್ತಿದ್ದ ಖಾಸಗಿ…

Read More

ರಿಪ್ಪನ್ ಪೇಟೆ : ನೂರು ಕೋಟಿ ಜನರಿಗೆ ಲಸಿಕೆ ನೀಡಿದ ವೈದ್ಯಕೀಯ ಸಿಬ್ಬಂದಿಗಳಿಗೆ ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ:

ರಿಪ್ಪನ್‌ಪೇಟೆ: ಜಗತ್ತನೆ ತಲ್ಲಣಗೊಳಿಸಿದ ಮಹಾಮಾರಿ ಕೋರೊನ ರೋಗಕ್ಕೆ ಭಾರತ ದೇಶ ಭಯಭೀತರಾಗದೆ ನೂರು ಕೋಟಿ ಜನರಿಗೆ ಉಚಿತ ಲಸಿಕೆ ನೀಡುವ ಮೂಲಕ ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಬಿಜೆಪಿ ಪಕ್ಷದ ವತಿಯಿಂದ ಅಭಿನಂದಿಸುವ ಅಭಿಯಾನ ನಡೆಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಬಿ.ಜೆ.ಪಿ ಮುಖಂಡ ದತ್ತಾತ್ರಿ ಉದ್ಘಾಟಿಸಿ, ಕೋವಿಡ್ ಸಂದಂರ್ಭದಲ್ಲಿ ದೇಶದ ಜನರ ಪ್ರಾಣ ರಕ್ಷಣೆಯಲ್ಲಿ ವೈದ್ಯಕೀಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸಿರುವುದು ಪ್ರಶಂಸನೀಯ ಎಂದರು. ಈ ಸಂಧರ್ಭದಲ್ಲಿ  ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಬಿಳಗೋಡು ಗಣಪತಿ,…

Read More