ಸಾಗರ ನಗರಸಭೆ ವಿರುದ್ದ ಪ್ರತಿಭಟನೆ ನಡೆಸಿದ್ದ ಹೋರಾಟಗಾರನಿಗೆ ಪೌರಕಾರ್ಮಿಕ ಸಂಘದ ಅಧ್ಯಕ್ಷರಿಂದ ಧಮ್ಕಿ : ಆಡಿಯೋ ವೈರಲ್

ಸಾಗರ: ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ವೈಖರಿಯನ್ನು ಖಂಡಿಸಿ ಬುಧವಾರ ನಗರಸಭಾ ಕಾಂಗ್ರೆಸ್ ಸದಸ್ಯೆ ಮಧುಮಾಲತಿ ಪೌರಾಯುಕ್ತರ ಕೊಠಡಿ ಎದುರು ಏಕಾಂಗಿ ಧರಣಿ ನಡೆಸಿ, ಆಡಳಿತದ ವಿರುದ್ಧ ಧಿಕ್ಕಾರ ಕೂಗಿದ್ದರು ಈ ಸಂಧರ್ಭದಲ್ಲಿ ಅವರಿಗೆ ಬೆಂಬಲಿಸಿದ ಹೋರಾಟಗಾರ ಅನ್ವರ್ ಭಾಷಾ ರವರಿಗೆ ನಗರಸಭೆ ಪೌರ ಕಾರ್ಮಿಕ ಸಂಘದ ಅಧ್ಯಕ್ಷರಾದ ನಾಗರಾಜ್ ರವರು ಕರೆ ಮಾಡಿ ಧಮ್ಕಿ ಹಾಕಿದ್ದಾರೆ ಎನ್ನುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏಕೋ ಏನೋ ಇತ್ತೀಚೆಗೆ ಸಾಗರ ನಗರಸಭೆ ಜಿಲ್ಲೆಯಲ್ಲಿ…

Read More

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ|gurukula

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ ಹೊಸನಗರ : ಮಕ್ಕಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳು ಸೇವಾ ಚಟುವಟಿ  ಹೆಚ್ಚಿಸಬೇಕು ಎಂದು ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ ಅಭಿಪ್ರಾಯಪಟ್ಟರು. ಇಂದು ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದ ತ್ರಯೋದಶ ಪ್ರದರ್ಶಿನಿ ಕಾರ್ಯಕ್ರಮದ ಎರಡನೇ ಸೇವಾ ಚಟುವಟಿಕೆ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಇಂದಿನ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವ ಪಠ್ಯ ಕೊರತೆ ಹೆಚ್ಚುತ್ತಿದೆ. ಮತ್ತೊಂದೆಡೆ…

Read More

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು….

Read More

ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಸಮೀಪದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ಪರವಾನಗಿ ನೀಡದಂತೆ ಮನವಿ|Ripponpet

ರಿಪ್ಪನ್‌ಪೇಟೆ : ಇಲ್ಲಿ ಹೊಸನಗರ ರಸ್ತೆಯ ಮಸೀದಿ ಸಮೀಪದ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತಿದ್ದು ಅದಕ್ಕೆ ಅನುಮತಿ ನೀಡಬಾರದು ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ಪ್ರಗತಿಪರ ಚಿಂತಕರಿಂದ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಸಮೀಪದ ಖಾಸಗಿ ವಾಣಿಜ್ಯ ಕಟ್ಟಡವೊಂದರಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹುನ್ನಾರ ನಡೆಯುತಿದ್ದು ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತಾಧಿಗಳಿಗೆ ಹಾಗೂ ಸನಿಹದಲ್ಲೇ ಇರುವ ಅರೆಬಿಕ್ ಮದರಸದಲ್ಲಿ…

Read More

ಬಿದರಹಳ್ಳಿಯಲ್ಲಿ ಮಗು ಸಮೇತ ತಾಯಿ ಆತ್ಮಹತ್ಯೆ ಪ್ರಕರಣ : ಅಮಾಯಕ ಮಗುವಿನ ಹತ್ಯೆಗೆ ಹೊಣೆ ಯಾರು……!?

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯಿತಿಯ ಬಿದರಹಳ್ಳಿ ಗ್ರಾಮದ ಸಮೀಪದ ಚಿಟ್ಟೆ ಗೆದ್ದೆಯ ಮುದ್ದುಮುಖದ ನಾಲ್ಕು ವರ್ಷದ  ತನ್ವಿ ಎಂಬ ಪುಟ್ಟ ಮುದ್ದು ಕಂದಮ್ಮನ ಹತ್ಯೆಗೆ ಹೊಣೆ ಯಾರು. ಅಜ್ಜ-ಅಜ್ಜಿಯೋ?. ತಂದೆಯೋ?  ಅಥವಾ ಲೋಕದ ಅರಿವಿಲ್ಲದ ಚಂದದ ಮುಗ್ಧ ಬಾಲಕಿಯನ್ನು ವೇಲಿನಿಂದ ಸೊಂಟಕ್ಕೆ ಕಟ್ಟಿ ಬಾವಿಗೆ ಹಾರಿದ ತಾಯಿ ವಿದ್ಯಾ ಕಾರಣವಾದರೆ ??? 2014 ರಲ್ಲಿ ಚಿಟ್ಟೆಗೆದ್ದೆ ಯ ಲೋಹಿತ ಎಂಬುವರೊಂದಿಗೆ ಮದುವೆಯಾಗಿದ್ದ  ವಿದ್ಯಾ ಅತ್ತೆ ಮಾವ ಮತ್ತು ಗಂಡನ ಕಿರುಕುಳದಿಂದ ಬೇಸತ್ತು ಮೇಲಿನಿಂದ…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

ರಾಜಕೀಯ ದ್ವೇಷದ ಆರೋಪ: ಗರ್ತಿಕೆರೆ ಕೆಪಿಎಸ್ ಶಾಲೆ ಮುಂದೆ ಪೋಷಕರ ಆಕ್ರೋಶ

Parents staged a protest at Gartheekere KPS government school opposing the transfer of teacher Satyanarayan, alleging political interference and demanding withdrawal of the transfer order. ತೀರ್ಥಹಳ್ಳಿ ತಾಲ್ಲೂಕಿನ ಗರ್ತಿಕೆರೆ ಕೆಪಿಎಸ್ ಸರ್ಕಾರಿ ಶಾಲೆಯ ಶಿಕ್ಷಕ ಸತ್ಯನಾರಾಯಣ್ ಅವರನ್ನು ವರ್ಗಾವಣೆಗೊಳಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಎದುರು ಪ್ರತಿಭಟನೆ ನಡೆಸಿದರು. ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ಉತ್ತಮ ಶಿಕ್ಷಕನನ್ನು ಅನ್ಯಾಯವಾಗಿ ವರ್ಗಾವಣೆಗೊಳಿಸಲಾಗಿದೆ…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk ರಿಪ್ಪನ್‌ಪೇಟೆ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಇಬ್ಬರು ಪುಟ್ಟ ಮಕ್ಕಳ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಬರುವೆ ಗ್ರಾಮದ ನಿವಾಸಿಗಳಾದ ರಾಮು ಎಂಬಾತನ ಮೂರು ವರ್ಷದ ದರ್ಶನ್ ಹಾಗೂ ಬರುವೆ ಗ್ರಾಮದ ಶೇಖರಪ್ಪ ರವರ  ಹನ್ನೆರಡು ವರ್ಷದ ವಿನೋದ್ ಗೆ ಹುಟ್ಟಿನಿಂದಲೇ ಹೃದಯ ಸಂಬಂಧಿ ಖಾಯಿಲೆಯಿದ್ದು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ತೋರಿಸಿ ತಕ್ಕಮಟ್ಟಿಗೆ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದಾರೆ…

Read More

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ Power outage scheduled on May 10, 2026, in Ripponpet and Heddaripura Gram Panchayat limits due to MESCOM electric line replacement work from 10 AM to 6 PM. ರಿಪ್ಪನ್ ಪೇಟೆ ಗ್ರಾಪಂ ವ್ಯಾಪ್ತಿ ಹಾಗೂ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ 10/05/26 ರಂದು ಬೆಳಿಗ್ಗೆ 10 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ|encroachment

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸರ್ವೆ ನಂಬರ್ 85 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 2.5 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಮಳವಳ್ಳಿ ಗ್ರಾಮದ ಶ್ರೀಧರ ಬಿನ್ ತಿಮ್ಮನಾಯ್ಕ ಸರ್ವೆ ನಂ 85 ರಲ್ಲಿ ಸುಮಾರು ಎರಡೂವರೆ ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಕೆರೆಹಳ್ಳಿ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ…

Read More