Headlines

ಹುಂಚಾ – ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ|sucide

ಹುಂಚಾ : ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ನಡೆದಿದೆ.  ತಿಮ್ಮಪ್ಪ ಜಿ ಡಿ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದ ಇವರು ಮಾನಸಿಕ ಖಿನ್ನತೆಗೊಳಗಾಗಿದ್ದರು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಶೌಚಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕೊಂಡೊಯ್ಯಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More

ನೀರುಪಾಲಾಗಿದ್ದ ಹೊಸನಗರದ ಯುವಕ ಪ್ರಸನ್ನ ಭಟ್ ಮೃತದೇಹ ಪತ್ತೆ|death

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತಿತೂರು ಕೆರೆಯಲ್ಲಿ ಈಜು ಹೊಡೆಯಲು ಹೋಗಿ ನೀರುಪಾಲಾಗಿದ್ದ ಪ್ರಸನ್ನ ಭಟ್ (26) ಮೃತ ದೇಹ ಪತ್ತೆಯಾಗಿದೆ. ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಹೊಸನಗರ ಪಟ್ಟಣದ ಗಣಪತಿ ದೇವಸ್ಥಾನದ ಅರ್ಚಕ ರೇಣುಭಟ್ ರವರ ಪುತ್ರ. ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್ ಕೆರೆಗೆ ಈಜಲು ತೆರಳಿ ನೀರುಪಾಲಾಗಿದ್ದ.ರಾಮೇಶ್ವರಕ್ಕೆ ಹೊರಟಿದ್ದ ಪ್ರಸನ್ನ ಸಮಯವಿದ್ದ ಕಾರಣ ಸಹೋದರನ ಮನೆ ರಾಮನಗರದ ಕನಕಗಿರಿಗೆ ಹೋಗಿದ್ದರು. ಕನಕಪುರ…

Read More

ಹೊಸನಗರದ ಯುವಕ ಪ್ರಸನ್ನ ರಾಮನಗರದಲ್ಲಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|prasanna

ಹೊಸನಗರ ಮೂಲದ ಯುವಕನೊಬ್ಬ ರಾಮನಗರ ಜಿಲ್ಲೆಯ ಕನಕಗಿರಿ ಬಳಿಯ ಕೆರೆಯಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಸನಗರ ಟೌನ್ ನಿವಾಸಿ ಪ್ರಸನ್ನ ಭಟ್ ನೀರುಪಾಲಾಗಿರುವ ವ್ಯಕ್ತಿಯಾಗಿದ್ದಾರೆ. ಇಂದು ರಾಮಗನಗರದ ಜಿಲ್ಲೆಯ ಕನಕಗಿರಿಯ ಕೆರೆಗೆ ಸಹೋದರ ಕೌಶಿಕ್ ಜೊತೆ ಈಜಲು ತೆರಳಿದ್ದರು.ಈ ಸಂಧರ್ಭದಲ್ಲಿ ಈ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ತೀವ್ರ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರ ನೆಚ್ಚಿನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಸಂಸದರು ಸಂಸತ್ ಇರುವ ಕಾರಣ ಕ್ಷೇತ್ರದಲ್ಲಿ ಇಲ್ಲದೇ ಇರುವುದರಿಂದ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಾಜ್ಯಕ್ಕೆ ಮಾದರಿ : ಆರಗ ಜ್ಞಾನೇಂದ್ರ|araga

ರಿಪ್ಪನ್‌ಪೇಟೆ : ಸಮಾಜದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಮೂಲಕ ಹೊಸನಗರ ತಾಲೂಕ್ ಒಕ್ಕಲಿಗ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ವಿಶ್ವಮಾನವ ಸಭಾ ಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಆಯೋಜಿಸಿದ್ದ ಸಂಸ್ಥಾಪಕ ಆಡಳಿತ ಮಂಡಳಿ ಮತ್ತು ಮಾಜಿ ನಿರ್ದೇಶಕರಿಗೆ ಬೀಳ್ಕೋಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಕ್ಕಲಿಗ ಸಮುದಾಯದ ಶಕ್ತಿಯನ್ನು ಬಲಪಡಿಸಲು ಆ ಕಾಲದಲ್ಲಿಯೇ ಹೊಸನಗರ ತಾಲೂಕಿನ ಒಕ್ಕಲಿಗ ಸಂಘ ಅಸ್ತಿತ್ವಕ್ಕೆ ಬಂದು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು…

Read More

ಮಿಸ್ ಪೈರಿಂಗ್ ಪ್ರಕರಣ : ಗುಂಡು ತಗುಲಿದ್ದ ಯುವಕ ಸಾವು|miss fire

ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.  ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಕೊನೆಯುಸಿರೆಳೆದಿದ್ದಾನೆ. ವಿದ್ಯಾನಗರದಲ್ಲಿ ಮಂಜುನಾಥ ಓಲೇಕಾರ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. 12 ಗಂಟೆಗೆ ಸಂಭ್ರಮಾಚರಣೆ ವೇಳೆ ಮಂಜುನಾಥ ಓಲೇಕರ್ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆದರೆ ಆ ಗುಂಡು ಮಂಜುನಾಥ ಓಲೇಕಾರ್ ಅವರ ಮಗನ ಸ್ನೇಹಿತ ವಿನಯ್ ಗೆ ತಗುಲಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿನಯ್ ನನ್ನು ಮ್ಯಾಕ್ಸ್…

Read More

ಹೊಸವರ್ಷದ ಪಾರ್ಟಿಯಲ್ಲಿ ಗನ್ ಫೈರ್ – ಯುವಕನಿಗೆ ಗಾಯ : ಗುಂಡು ಹಾರಿಸಿದ ವ್ಯಕ್ತಿ ಸಾವು|miss fire

ಶಿವಮೊಗ್ಗ : ಹೊಸ ವರ್ಷದ ಪಾರ್ಟಿ ವೇಳೆ ಗುಂಡು ತಗುಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಗುಂಡು ಹಾರಿಸಿದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ವಿದ್ಯಾನಗರದಲ್ಲಿರುವ ಮಂಜುನಾಥ ಓಲೇಕರ್ ಎಂಬುವವರ ಮನೆಯಲ್ಲಿ ಪಾರ್ಟಿ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ. ಕುಟುಂಬದವರೊಂದಿಗೆ ಹೊಸ ವರ್ಷಾಚರಣೆ ಮಾಡುತ್ತಿದ್ದರು.  ಸರಿಯಾಗಿ 12 ಗಂಟೆಗೆ ಮಂಜುನಾಥ ಓಲೇಕರ್ ಅವರು ತಮ್ಮ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮಂಜುನಾಥ ಓಲೇಕರ್ ಅವರು ಹಾರಿಸಿದ ಗುಂಡು ಮಿಸ್ ಫೈರ್ ಆಗಿದೆ. ಪಾರ್ಟಿ ಮಾಡುತ್ತಿದ್ದ ಯುವಕನಿಗೆ…

Read More

ದೇಶಾದ್ಯಂತ ಯುಪಿಐ ಸರ್ವರ್ ಡೌನ್ – ಪೋನ್ ಪೇ ,ಗೂಗಲ್‌ಪೇ ,ಪೇಟಿಎಂ ಸರ್ವರ್ ಡೌನ್|phonepay

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಹೊಸ ವರ್ಷ ಸ್ವಾಗತಿಸುವ ಉತ್ಸಾಹದಲ್ಲಿದ್ದವರಿಗೆ ಯುಪಿಐ ಸರ್ವರ್ ಡೌನ್ ನಿಂದ ತುಂಬಾ ತೊಂದರೆಯಾಗಿದೆ.ಈಗ ಹಣದ ವಹಿವಾಟಿಗಿಂತ ಸ್ಕ್ಯಾನರ್ ಪಡೆದು ಸ್ಕ್ಯಾನ್ ಮಾಡಿ ಹಣ ಪಾವತಿಸುವ ಕಾಲ ಇಂತಹ ಸಂಭ್ರಮದ ಸಮಯದಲ್ಲಿ ಸರ್ವರ್ ಡೌನ್ ಆಗಿರುವುದರಿಂದ ಗ್ರಾಹಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು…

Read More

ರಿಪ್ಪನ್‌ಪೇಟೆ : ಕಳಪೆ ರಸ್ತೆ ಕಾಮಗಾರಿ ಕಂಡು ಸಿಡಿಮಿಡಿಗೊಂಡ ಶಾಸಕ ಹರತಾಳು ಹಾಲಪ್ಪ |Ripponpet

ರಿಪ್ಪನ್‌ಪೇಟೆ: ಇಲ್ಲಿನ ವಿನಾಯಕ ನಗರದ ದುರ್ಗಾ ಪರಮೇಶ್ವರಿ ದೇವಸ್ಥಾನದ ರಸ್ತೆ ಮತ್ತು ಬಾಕ್ಸ್ ಚರಂಡಿ ಕಾಮಗಾರಿಗೆ 35 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿರುವ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ಮಾಡಲಾಗುತ್ತಿದೆ ಎಂದು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಿಡಿಮಿಡಿಗೊಂಡು ತರಾಟೆಗೆ ತೆಗೆದುಕೊಂಡರು. ಇಂದು ಕಾಮಗಾರಿ ನಡೆಯುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಕೆಲಸಗಾರರ ಬಳಿ ಎಷ್ಟು ಸಿಮೆಂಟ್ ಹಾಕುತ್ತಿದ್ದೀರಾ ? ಎಂದು ಕೇಳಿದಾಗ ತಡವರಿಸಿ ಕೆಲಸಗಾರ 10 ಚೀಲ ಎಂದು…

Read More

ರಿಪ್ಪನ್‌ಪೇಟೆ : ಮನೆ ಬೀಗ ಮುರಿದು ಕಳ್ಳತನ ನಡೆಸಿ – ಮನೆ ಮುಂಭಾಗವಿದ್ದ ಕಾರನ್ನು ಕದ್ದೊಯ್ದ ಕಳ್ಳರು|theft

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ ತಡರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದೊಯ್ದಿರುವ ಘಟನೆ ನಡೆದಿದೆ. ಜ್ಯೋತಿ ಮಾಂಗಲ್ಯ ಮಂದಿರ ಸಮೀಪದ ಕೋಳಿ ಫಾರಂ ಪಕ್ಕದಲ್ಲಿರುವ ಹರೀಶ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಶುಕ್ರವಾರ ತಡರಾತ್ರಿ ಮನೆ ಮುಂದಿನ ಗೇಟ್ ಬೀಗ ಒಡೆದು ನಂತರ ಮನೆಯ ಬಾಗಿಲು ಮುರಿದು ಕಳ್ಳತನ ನಡೆಸುವುದರ ಜೊತೆಗೆ…

Read More

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ ಆನೆ ಹಾವಳಿ..! ಸಿಸಿಟಿವಿ ದೃಶ್ಯಾವಳಿ : ಅರಣ್ಯಾಧಿಕಾರಿಗಳಿಂದ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ|thirthahalli

ತೀರ್ಥಹಳ್ಳಿ : ಪಟ್ಟಣದ ವಾರ್ಡ್ 14 ರ ಕುರುವಳ್ಳಿಯಲ್ಲಿ ಇಂದು ಬೆಳಗ್ಗಿನ ಜಾವಾ 3.30 ರ ವೇಳೆಯಲ್ಲಿ ಕಾಡಾನೆಯೊಂದು ಸ್ಥಳೀಯ ನಿವಾಸಿ ಒಬ್ಬರಿಗೆ ಕಾಣಿಸಿಕೊಂಡಿದ್ದು ಆನೆಯ ಹೆಜ್ಜೆ ಗುರುತು ಕೂಡ ಪತ್ತೆಯಾಗಿದೆ. ತಡರಾತ್ರಿ ವ್ಯಕ್ತಿಯೊಬ್ಬರಿಗೆ ಕಾಣಿಸಿಕೊಂಡ ಕಾಡಾನೆಯ ಸಿಸಿಟಿವಿ ದೃಶ್ಯ ಮಾಧ್ಯಮಕ್ಕೆ ಲಭ್ಯವಾಗಿದೆ. ಎರಡು ದಿನಗಳ ಹಿಂದೆ ಶೇಡ್ಗಾರ್, ಕಟ್ಟೆಹಕ್ಲು ಸಮೀಪ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದ್ದೂ ಅದೇ ಆನೆ ಈ ಕಡೆ ಬಂದಿರಬಹುದು ಎಂದು ಊಹಿಸಲಾಗುತ್ತಿದೆ. ರಾಷ್ಟಿಯ ಹೆದ್ದಾರಿ 169 ರ ತೀರ್ಥಹಳ್ಳಿ-ಕೊಪ್ಪ- ಶೃಂಗೇರಿ ಮಾರ್ಗದಲ್ಲಿರುವ  ಕುರುವಳ್ಳಿ…

Read More