ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident
ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ….