Headlines

ತೀರ್ಥಹಳ್ಳಿ: ನವವಿವಾಹಿತೆಯನ್ನು ಬಲಿ ತೆಗೆದುಕೊಂಡ ನಾಯಿ ಚೈನ್…! ವಾಕಿಂಗ್ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ತೀರ್ಥಹಳ್ಳಿ: ಸಾಕುನಾಯಿಯನ್ನು ಕರೆದುಕೊಂಡು ವಾಯುವಿಹಾರಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನವ ವಿವಾಹಿತೆಯೊಬ್ಬಳು ಕೆರೆಗೆ  ಬಿದ್ದು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕು ಕೈಮರದಲ್ಲಿ ನಡೆದಿದೆ. ನಿಶ್ಮಿತಾ(26) ಮೃತ ವಿವಾಹಿತೆ.ತೀರ್ಥಹಳ್ಳಿಯ ಕೈಮರದ ನಾಗಪ್ಪ ಗೌಡ ಅವರ ಪುತ್ರ ಮಂಜುನಾಥ್ ಅವರ ಪತ್ನಿ ನಿಶ್ಮಿತಾ ಮೂಲತಃ ಹೊಸನಗರ ತಾಲೂಕು ಹುಲಿಕಲ್ ಗ್ರಾಮದವರು. ಕಳೆದ 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಶನಿವಾರ ಬೆಳಿಗ್ಗೆ ಸಾಕುನಾಯಿಯನ್ನು ಕರೆದುಕೊಂಡು ವಾಯು ವಿಹಾರಕ್ಕೆ ಹೋಗಿದ್ದಾಳೆ. ಈ ವೇಳೆ ಕರೆದಂಡೆ ಮೇಲೆ ಹೋಗುವಾಗ ನಾಯಿ ಚೈನ್ ಎಳೆದು ಓಡಿದೆ….

Read More

ಪೋಸ್ಟ್ ಮ್ಯಾನ್ ನ್ಯೂಸ್‌ ಇಂಫ್ಯಾಕ್ಟ್ – ಬಡ ವೃದ್ದೆಯ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ !

ಪವರ್‌ ಫುಲ್‌ ನ್ಯೂಸ್‌ಗೆ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ ! ಫ್ರೀಡಂ ಫೈಟರ್‌ ಮಡದಿ ಪರವಾದ ಹೋರಾಟಕ್ಕೆ ಜಯ! | ಸುದ್ದಿ ಇಂಪ್ಯಾಕ್ಟ್‌ಗೆ ಮನೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಮ್ಯಾನೇಜರ್‌! ಪಿಂಚಣಿ ಆಧಾರದ ಸಾಲಕ್ಕೆ ಕಟ್‌ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಮಡದಿಯ ಕಿವಿಚೈನ್‌ ಕಾಸು..  ಮನೆಗೆ ಬಂತು ವಾಪಸ್‌… ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಇಂಪ್ಯಾಕ್ಟ್‌ಗೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಕೋಣಂದೂರಿನ ಕೆನರಾ ಬ್ಯಾಂಕ್ ಮ್ಯಾನೇಜರ್‌!…

Read More

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿ

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿ ಅಂಗನವಾಡಿಯಲ್ಲಿ ಕಾರ್ಯನಿರತರಾಗಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ವ್ಯಕ್ತಿಯೊಬ್ಬ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬೈಲು ಗ್ರಾಮದ ಮಿನಿ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾರಾಮತಿ ಎಂಬವರು ಆ. 22ರಂದು ಕರ್ತವ್ಯ ನಿರತರಾಗಿದ್ದಾಗ ಸಂಜೆ 4 ಗಂಟೆ ಸುಮಾರಿಗೆ ನೀಲಿ ಬಣ್ಣದ ಜರ್ಕಿನ್ ಹಾಕಿಕೊಂಡು ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಅಪರಿಚಿತ ವ್ಯಕ್ತಿಯೋರ್ವ ಅಂಗನವಾಡಿಗೆ ನುಗ್ಗಿ…

Read More

ಚಾಲಕನಿಗೆ ನಿದ್ರೆ ಮಂಪರು – ಕಾರು ಪಲ್ಟಿ|Accident

ನಿದ್ದೆ ಮಂಪರಿನಲ್ಲಿದ್ದ ಚಾಲಕ – ತಳುವೆ ಬಳಿ ಕಾರು ಪಲ್ಟಿ ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ  ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು  ಆತನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು ಇದರಿಂದ ಹಾಗಾಗಿ ಯಾವುದೇ ರೀತಿ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ರಿಪ್ಪನ್‌ಪೇಟೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಪ್ರಜ್ವಲ್ ಎನ್ ಎಮ್ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ 23ನೇ ಯುವ ವಾಲಿಬಾಲ್ ಚಾಂಪಿಯನ್‌ ಶಿಪ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟೀಯ ಮಟ್ಟದ  ವಾಲಿಬಾಲ್ (21ವರ್ಷದೊಳಗಿನ ವಯೋಮಿತಿ) ಪಂದ್ಯವು ಇದೇ ತಿಂಗಳ 11 ರಿಂದ 16 ರವರೆಗೆ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ವಿದ್ಯಾ ನಗರ ನಿವಾಸಿಗಳಾದ ಶಿಕ್ಷಕರಾದ ಮಹೇಶ್ವರ ಆಚಾರಿ ಹಾಗೂ ಮೀನಾಕ್ಷಿ ದಂಪತಿಗಳ…

Read More

ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ,ಜನರ ಪರದಾಟ…!

ರಿಪ್ಪನ್ ಪೇಟೆ :: ಆಹಾರ ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಒಂದು ವಾರಗಳಿಂದ ಪಡಿತರ ಪಡೆಯಲು ಸಾಧ್ಯವಾಗದೇ ಕಾರ್ಡುದಾರರು ಪರದಾಡುತ್ತಿದ್ದಾರೆ.ನ್ಯಾಯಬೆಲೆ ಅಂಗಡಿ ಮುಂದೆ ದಿನವಿಡೀ ಕಾದರೂ ಪಡಿತರ ಸಿಗದೇ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.  ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಅಕ್ರಮ ತಡೆಯಲು ಲೆಡ್ಜರ್ ವಿತರಣಾ ವ್ಯವಸ್ಥೆ ಬದಲಾಗಿ  ಬಯೋಮೆಟ್ರಿಕ್ ಪದ್ಧತಿಯಲ್ಲಿ ಕಾರ್ಡುದಾರರ ಹೆಬ್ಬೆರಳ ಗುರುತು ಪತ್ತೆ ಮಾಡಿ ಆಹಾರ ವಿತರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೆ ಪೂರಕವಾದ ತಾಂತ್ರಿಕ ವ್ಯವಸ್ಥೆ ರೂಪಿಸದ ಕಾರಣ ಸರ್ವರ್ ಮೇಲೆ ಒತ್ತಡ ಬಿದ್ದು ಪದೇ…

Read More

ಮಂಗನ ಕಾಯಿಲೆಗೆ ವೃದ್ಧ ಬಲಿ

ಮಂಗನ ಕಾಯಿಲೆಗೆ ವೃದ್ಧ ಬಲಿ Elderly man dies from monkeypox ಸಾಗರ ತಾಲ್ಲೂಕಿನ ಗ್ರಾಮವೊಂದರ ವಯೋವೃದ್ಧರೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕಳೆದ ಕೆಲವು ದಿನಗಳಿಂದ ತೀವ್ರ ವಾಂತಿ ಮತ್ತು ಜಲದೋಷದಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ನಡೆಸಿದ ರಕ್ತಪರೀಕ್ಷೆಯಲ್ಲಿ ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಗೆ…

Read More

ಯೋಧರ ಸಾವು ಸಂಭ್ರಮಿಸುತ್ತಿರುವ ವಿಕೃತರಿಗೆ ನಡು ರಸ್ತೆಯಲ್ಲಿಯೇ ಗುಂಡಿಟ್ಟರು ತಪ್ಪಿಲ್ಲ ಎಂದ ಶಿವಮೊಗ್ಗ ಗ್ರಾಮಾಂತರ ಶಾಸಕ..

ಶಿವಮೊಗ್ಗ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರೆ ಯೋಧರ ಸಾವಿನ ಕುರಿತಂತೆ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದವರ ವಿರುದ್ದ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್ ಗರಂ ಆಗಿದ್ದಾರೆ. ಇಂತಹ ವಿಕೃತರನ್ನು ನಡು ರಸ್ತೆಯಲ್ಲಿಯೇ ಗುಂಡಿಟ್ಟು ಕೊಂದರು ತಪ್ಪಿಲ್ಲ..! ಎಂದು ಟ್ವೀಟ್ ಮಾಡಿದ್ದಾರೆ.  ಈ ಕುರಿತಂತೆ ಶುಕ್ರವಾರ ತಮ್ಮ ಅದಿಕೃತ ಟ್ವಿಟರ್ ಖಾತೆಯಲ್ಲಿ ಕೆ.ಬಿ.ಅಶೋಕನಾಯ್ಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ.ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ತರವಾದ ಪಾತ್ರವಹಿಸಿ ದೇಶಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿರುವ…

Read More

ಇನ್ನೂ ಪತ್ತೆಯಾಗದ ವೃದ್ದನನ್ನು ರಕ್ಷಿಸಲು ಚಾನೆಲ್ ಗೆ ಹಾರಿ ನಾಪತ್ತೆಯಾಗಿದ್ದ ರಿಪ್ಪನ್ ಪೇಟೆಯ ಯುವಕ : ಅಗ್ನಿಶಾಮಕ ದಳದವರಿಂದ ಬಿರುಸಿನ ಕಾರ್ಯಾಚರಣೆ

ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ನಲ್ಲಿ ವೃದ್ದನೊಬ್ಬನನ್ನು  ರಕ್ಷಿಸಲು ಹೋಗಿ ರಿಪ್ಪನ್‌ಪೇಟೆಯ ಯುವಕನೊಬ್ಬ ನಾಪತ್ತೆಯಾಗಿ ಸುಮಾರು 48 ಗಂಟೆ ಕಳೆದಿದ್ದು ಇನ್ನೂ ಯುವಕನ ಸುಳಿವು ಪತ್ತೆಯಾಗಿಲ್ಲ.   ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ಎಂಬ ಯುವಕ ಮಂಗಳವಾರ ಬೆಳಿಗ್ಗೆ ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲ್ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ…

Read More

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್ ಮುಖ್ಯ ವಾಹಿನಿಗೆ ಮಹಿಳೆಯರು ಬರಬೇಕು ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತಮ್ಮದೇ ಆದಾ ಕೊಡುಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಡಿ ಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ಅವರು ಕರೆ ನೀಡಿದರು. ಅವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಮಹಿಳೆಯರ ಏಳಿಗೆಗೆ…

Read More