ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga

ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ. ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.  ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ…

Read More

ಹೊಸನಗರ – ತೀರ್ಥಹಳ್ಳಿ ತಾಲೂಕಿನಾದ್ಯಂತ ಅಬ್ಬರಿಸುತ್ತಿರುವ ವರ್ಷಧಾರೆ|Rain

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 82.30 ಮಿ.ಮೀ. ಮಳೆಯಾಗಿದ್ದು, ಸರಾಸರಿ 11.76 ಮಿ.ಮೀ. ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 44.57 ಮಿ.ಮೀ. ಮಳೆ ದಾಖಲಾಗಿದೆ. ಹೊಸನಗರ  ಹೊಸನಗರ ತಾಲೂಕಿನ ನಗರ, ಸಂಪೆಕಟ್ಚೆ, ನಿಟ್ಟೂರು, ಯಡೂರು, ಮಾಸ್ತಿಕಟ್ಚೆ, ಕೋಡೂರು, ಗರ್ತಿಕೆರೆ, ಹುಂಚ , ಬೆಳ್ಳೂರು, ಅಮೃತ, ಸೋನಲೆ, ತ್ರಿಣಿವೆ, ಮಂಬಾರು,ರಿಪ್ಪನ್‌ಪೇಟೆ, ಕೋಡುರು, ಚಿಕ್ಕಜೇನಿ, ಬಾಳೂರು, ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನದಿಂದ…

Read More

ಮಾದಾಪುರದ ಸರ್ಕಾರಿ ಶಾಲೆಗೆ ಯುವ ಟ್ರಸ್ಟ್ ವತಿಯಿಂದ ಬ್ಯಾಗ್,ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ|yuva trust

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸೋಮವಾರ ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಬೆಂಗಳೂರು ಯುವ ಟ್ರಸ್ಟ್ ನ ಸಂಸ್ಥಾಪಕರಾದ ಜಿ ಕಿರಣ್ ಸಾಗರ್, ಟ್ರಸ್ಟಿಗಳಾದ ಸುನಿಲ್ ಬಿ. ವಿ, ಶ್ವೇತ ಎಸ್ ರಾವ್, ಅಶೋಕ್ ಬಿ ಯಾದವ್ ಇವರ ನೇತೃತ್ವದಲ್ಲಿ ಯುವ ಟ್ರಸ್ಟ್ ನ ಆಶಯದಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಸಮಾನ…

Read More

ಕಾರು ಮತ್ತು ನವದುರ್ಗ ಬಸ್ಸಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ..!!|accident

ಶಿವಮೊಗ್ಗ : ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನವದುರ್ಗ ಬಸ್​ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ  ಸರಿದು ನಿಂತಿದೆ. ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ ಎಂದು…

Read More

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|crime news

ತೀರ್ಥಹಳ್ಳಿ: ಮಲೆನಾಡಿನ ತವರೂರು, ಸುಸಂಸ್ಕೃತರ ನಾಡು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿ ಇತ್ತೀಚೆಗೆ ಅಶ್ಲೀಲ ವಿಡಿಯೋ ಪ್ರಕರಣಗಳಿಂದ ಸುದ್ದಿ ಮಾಡುತ್ತಲಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಯುವಕ ಯುವತಿಯರ ಅಶ್ಲೀಲ ವಿಡಿಯೋಗಳು ಬಾರಿ ಸದ್ದು ಮಾಡುತ್ತಿದೆ. ಈಗ ಮತ್ತೊಂದು ವಿಡಿಯೋ ವಾಟ್ಸಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದ್ದು ಸತ್ಯಾಸತ್ಯತೆ  ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ಕೈಗೊಳ್ಳಬೇಕಾಗಿದೆ. ತೀರ್ಥಹಳ್ಳಿಯ ಯುವಕನು ಯುವತಿಯೊಬ್ಬಳೊಂದಿಗೆ ವಾಟ್ಸಪ್ ಚಾಟ್ ನಲ್ಲಿ  ಅಶ್ಲೀಲವಾಗಿ ನೆಡೆದುಕೊಂಡಿರುವ ವಿಡಿಯೋ ಹರಿದಾಡುತ್ತಿದ್ದು ಇದರ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ…

Read More

ರಿಪ್ಪನ್‌ಪೇಟೆ : NSS ಶಿಬಿರಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆ ವಿರುದ್ದ ಅರಿವು ಜಾಥಾ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರದ ಸ್ವಯಂ ಸೇವಕರು ಬೆಳ್ಳೂರು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಅರಿವು ಜಾಥಾ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ಲಾಸ್ಟಿಕ್ ವಿರುದ್ಧ ಅರಿವು ಕಾರ್ಯಕ್ರಮವನ್ನು ಕಲ್ಲುಹಳ್ಳ ಸರ್ಕಾರಿ ಶಾಲೆಯಿಂದ ಆರಂಭವಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್ ವಿರುದ್ಧ ಘೋಷಣೆ ಕೂಗುತ್ತಾ ಜನಸಮುದಾಯಕ್ಕೆ ಅರಿವು ಮೂಡಿಸಿದರು. ಜಾಥ ನಡೆಸುವುದರೊಂದಿಗೆ ರಸ್ತೆಯ ಇಕ್ಕೆಲಗಳಲಿದ್ದ ಸುಮಾರು…

Read More

ಚಿತ್ರ ನಟಿ ಅನು ಗೌಡ ಮೇಲೆ ಮಾರಣಾಂತಿಕ ಹಲ್ಲೆ – ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲು|assault

ಜಮೀನು ವ್ಯಾಜ್ಯದಲ್ಲಿ ಕನ್ನಡ ಚಲನಚಿತ್ರ ರಂಗದ ನಟಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ. ಸಾಕಷ್ಟು ಚಲನಚಿತ್ರ ಮತ್ತು ಕಿರುತೆರೆಯಲ್ಲಿ ನಟಿಸಿರುವ ನಟಿ ಅನಿತಾ ಗೌಡ @ ಅನೂಗೌಡ ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮದೇ ಹೆಸರು ಗಳಿಸಿದ್ದಾರೆ. ಘಟನೆಯ ಹಿನ್ನಲೆ : ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿವಾಸಿಯಾದ ಇವರಿಗೆ ಸಾಗರ ತಾಲೂಕಿನ ಕಾಸ್ಪಡಿಯಲ್ಲಿ ಜಮೀನು ಇತ್ತು. ಆ ಜಮೀನ ಅನುಗೌಡ ರವರ ಅಪ್ಪ ಅಮ್ಮ ವಾಸವಾಗಿದ್ದರು….

Read More

ರಿಪ್ಪನ್‌ಪೇಟೆ : ಸಿಡಿಲು ಬಡಿದು ಮೂರು ಎಮ್ಮೆ ಸಾವು|lighting

ಮೇಯಲು ಹೋಗಿದ್ದ ಜಾನುವಾರುಗಳಿಗೆ ಸಿಡಿಲು ಬಡಿದು ಮೂರು ಎಮ್ಮೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಮ್ಮಡಿಕೊಪ್ಪ ಗ್ರಾಮದ ಪುರುಮಠ ಎಂಬಲ್ಲಿ ನಡೆದಿದೆ. ಪುರುಮಠ ಗ್ರಾಮದ ರಾಜು ಎಂಬವರಿಗೆ ಸೇರಿದ ಮೂರು ಸಾಕು ಎಮ್ಮೆಗಳು ಮನೆ ಸಮೀಪದ ಕಾಡಿನಲ್ಲಿ ಮೇಯಲು ಹೋದಾಗ ಈ ಘಟನೆ ನಡೆದಿದೆ. ಗುರುವಾರ ಮೇಯಲು ಬಿಟ್ಟಿದ್ದ ಎಮ್ಮೆ ಮನೆಗೆ ಬಾರದ ಹಿನ್ನಲೆಯಲ್ಲಿ ಸ್ಥಳೀಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದ ಮನೆ ಮಂದಿ, ಕೊನೆಗೆ ಮನೆ ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೂರು ಎಮ್ಮೆಯ…

Read More

ರೌಡಿ ಶೀಟರ್ ಸೈಫು ಕಾಲಿಗೆ ಪೊಲೀಸರ ಗುಂಡೇಟು|firing

ಶಿವಮೊಗ್ಗ : ಕೊಲೆ ಯತ್ನ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ಮಾಡಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ನಡೆದಿದೆ. ಮಾರ್ಕೆಟ್ ಫೌಜನ್​​ ಗ್ಯಾಂಗ್​ನ ಸದಸ್ಯನಾಗಿರುವ ರೌಡಿಶೀಟರ್​ ಸೈಫುಲ್ಲಾ ಖಾನ್​ ಅಲಿಯಾಸ್ ಸೈಫುಗೆ ಜಯನಗರ ಠಾಣೆ ಪಿಎಸ್​ಐ ನವೀನ್​ರಿಂದ ಫೈರಿಂಗ್​​ ಮಾಡಲಾಗಿದೆ.  ಕೊಲೆ ಪ್ರಕರಣ ಸಂಬಂಧ ಬಂಧಿಸಲು ತೆರಳಿದ್ದಾಗ ಕಾನ್ಸ್​ಟೇಬಲ್​ ನಾಗರಾಜ್ ಮೇಲೆ ಸೈಫುಲ್ಲಾ ಖಾನ್​ನಿಂದ ಹಲ್ಲೆ ಮಾಡಲಾಗಿದೆ. ಆತ್ಮರಕ್ಷಣೆಗಾಗಿ ಸೈಫು ಕಾಲಿಗೆ ಗುಂಡು ಹಾರಿಸಲಾಗಿದೆ. ಸದ್ಯ ಗಾಯಾಳು ಸೈಫುಲ್ಲಾ ಸೇರಿದಂತೆ ಪೊಲೀಸರಿಗೆ ಮೆಗ್ಗಾನ್…

Read More