ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ|wild
ರಿಪ್ಪನ್ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು, ಕೋಯ್ಲು ಮಾಡಿ ಹಾಕಿದ್ದ ಭತ್ತ, ಹುಲ್ಲು ಹಾಗೂ ಕೊಳವೆ ಬಾವಿಗೆ ಅಳವಡಿಸಿದ್ದ ಪೈಪ್ ಲೈನ್ ದ್ವಂಸಗೊಳಿಸಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ ಏರಿ ಒಡೆದು ಬೆಳೆ…


