8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಸ್ಕೂಲ್ ಬಸ್ ಚಾಲಕ ಆತ್ಮಹತ್ಯೆ

ಹುಚ್ಚು ಪ್ರೀತಿಯಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಹಾಗೂ ಬಸ್ ಡ್ರೈವರ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಳವಳಕಾರಿ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಬಂಕನಕಟ್ಟೆ ಸಮೀಪ ಘಟನೆ ನಡೆದಿದ್ದು, ರೈಲಿಗೆ ಅಡ್ಡಲಾಗಿ ನಿಂತು ಡ್ರೈವರ್ ಸಂತೋಷ್ (38) ಹಾಗೂ 14 ವರ್ಷದ 8ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಬಸ್ ಡ್ರೈವರ್  ಸಂತೋಷ್ ಪ್ರೀತಿಸುವಂತೆ ಪೀಡಿಸುತ್ತಿದ್ದ.ಬಸ್ ಡ್ರೈವರ್ ನೀಡುತ್ತಿದ್ದ ಕಿರುಕುಳದ ಸಂಬಂಧ ವಿದ್ಯಾರ್ಥಿನಿ ಪೋಷಕರು…

Read More

ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕೆಲಸಗಳೇ ಡಿ ಎಸ್ ಅರುಣ್ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ವಿರೋಧ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ ಎಂದು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ತಿಳಿಸಿದ್ದಾರೆ. ಅವರು ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿ…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ – ಸೂಕ್ತ ತನಿಖೆಗೆ ಕರವೇ ಒತ್ತಾಯ|district news

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ – ಸೂಕ್ತ ತನಿಖೆಗೆ ಕರವೇ ಒತ್ತಾಯ ಶಿವಮೊಗ್ಗ: ರೈಲ್ವೆ ಇಲಾಖೆ ಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಆಂಟಿ ಕ್ರೈಮ್ ಮತ್ತು ಹೂಮನ್ ರೈಟ್ಸ್ ಆಫ್ ಇಂಡಿಯಾ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪ್ರಮುಖರಾದ ರಹೀಮ್ ಹಾಗೂ ಸಮಾಜ ಸೇವಕಿ ಸೀಮಾ ಸೆರಾವೊ ತೆಂಡುಲ್ಕರ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯ 37 ವರ್ಷದ ಶ್ವೇತಾಶ್ರೀ ಎಂಬ ಮಹಿಳೆ ತಾನು ಬಿಜೆಪಿ…

Read More

ಮೇಕೆದಾಟು ಪಾದಯಾತ್ರೆಗೆ ಜಿಲ್ಲೆಯಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ : ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಜ.19 ರಂದು ಶಿವಮೊಗ್ಗ ಜಿಲ್ಲೆಯಿಂದ ಸುಮಾರು 2000 ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಜನೆ ಜಾರಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, ಜ.19ರಂದು ಬೆಳಿಗ್ಗೆ 8.30ಕ್ಕೆ ಶಿವಮೊಗ್ಗ ಜಿಲ್ಲೆಯವರು ಕೆಪಿಸಿಸಿ ಕಚೇರಿ ಬಳಿ ಹಾಜರಿರುವಂತೆ ವರಿಷ್ಠರು ಸೂಚನೆ…

Read More

ವಿಜೃಂಭಣೆಯೊಂದಿಗೆ ಸಂಪನ್ನಗೊಂಡ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ

ರಿಪ್ಪನ್ ಪೇಟೆ;-ಪುರಾಣ ಪ್ರಸಿದ್ದ ಹೆಬ್ಬಂಡೆಯಲ್ಲಿ ನೆಲೆಸಿರುವ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ವಿಜೃಂಭಣೆಯೊಂದಿಗೆ ಸಂಪನ್ನ ಗೊಂಡಿತು. ಭಾದ್ರಪದ ಮಾಸದ ಹುಣ್ಣಿಮೆಯಿಂದ ಮಹಾಲಯ ಅಮಾವಾಸ್ಯೆಯವರೆಗೆ ಎರಡು ಮಂಗಳವಾರ ಶುಕ್ರವಾರದ ಪಿತೃ ಪಕ್ಷದಲ್ಲಿ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ಶ್ರದ್ದಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಹಳೆಯ ಅಮ್ಮನಘಟ್ಟದಲ್ಲಿ ತಾಯಿ ಮಹಾಮಾತೆ ಜೇನುಕಲ್ಲಮ್ಮ ತಾಯಿಗೆ ಕಂಕಣ ಧಾರಣೆ ಮಾಡಿ ಎರಡು ಮಂಗಳವಾರ ಮತ್ತು ಎರಡು ಶುಕ್ರವಾರದೊಂದು ದೇವಿಗೆ ವಿಶೆಷ ಅಲಂಕಾರಿಕಾ ಪೂಜೆಯೊಂದಿಗೆ ವಿವಿಧ ಧಾರ್ಮಿಕ…

Read More

ಕೆಂಚನಾಲ : ಬಸ್ ಅಡ್ಡಗಟ್ಟಿ ವಿದ್ಯಾರ್ಥಿಯ ಮೇಲೆ ನಾಲ್ವರು ಯುವಕರಿಂದ ಹಲ್ಲೆ – ದೂರು ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕೆದಲುಗುಡ್ಡೆ ಗ್ರಾಮದಲ್ಲಿ ಚಲುಸುತಿದ್ದ ಬಸ್ ನ್ನು ಅಡ್ಡ ಹಾಕಿ ನಾಲ್ವರು ಯುವಕರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಗಾಳಿಬೈಲ್ ಗ್ರಾಮದ ನಿವಾಸಿ ರಿಫಾಯತ್(17) ಇಂದು ಸಂಜೆ ವಿಶೇಷ ತರಗತಿ ಮುಗಿಸಿಕೊಂಡು‌ ತನ್ನ ಊರಾದ ಕೆಂಚನಾಲಕ್ಕೆ ಬಸ್ ನಲ್ಲಿ ಹಿಂದಿರುತಿದ್ದಾಗ ನಾಲ್ಕು ಜನ ಯುವಕರು ಬೈಕ್ ನಲ್ಲಿ ಹಿಂಬಾಲಿಸಿ ಕೆದಲುಗುಡ್ಡೆ ಗ್ರಾಮದ ಬಳಿ ಬಸ್…

Read More

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ ಶಿವಮೊಗ್ಗ : ತುರ್ತು ಚಿಕಿತ್ಸೆ ಆಗತ್ಯವಿದ್ದ ಹಿನ್ನಲೆಯಲ್ಲಿ ಮಗುವೊಂದನ್ನು ಜೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಿವಾರ ರವಾನೆ ಮಾಡಲಾಗಿದೆ. ಉಸಿರಾಟ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದ ಸಾಗರ ಮೂಲದ ಸುಮಂಗಳ ಹಾಗೂ ಲೋಕೆಶ್ ದಂಪತಿಗಳ 6 ದಿನದ ಗಂಡು ಮಗುವಿಗೆ ಐದು ದಿನದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಗರ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು…

Read More

ಕ್ಷುಲ್ಲಕ್ಕ ವಿಚಾರಕ್ಕೆ ಹಿಂದೂ ಯುವಕನ ಮೇಲೆ ಗುಂಪಿನಿಂದ ಹಲ್ಲೆ , ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಹಿಂದೂ‌ ಮುಖಂಡ ಧೀನ್ ದಯಾಳ್ ಭೇಟಿ

ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.  ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು. ಇಂದು ಹೂವು ಕೊಟ್ಟು ಬೈಕ್ ನಲ್ಲಿ…

Read More

RIPPONPETE | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಅಂಗವಾಗಿ ಶಾಂತಿಸಭೆ

RIPPONPETE | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಅಂಗವಾಗಿ ಶಾಂತಿಸಭೆ ಕಾನೂನು ಪಾಲನೆಗೆ ಕರೆಯಬೇಡಿ ಹಬ್ಬಕ್ಕೆ ಕರೆಯಿರಿ – ತಹಶೀಲ್ದಾರ್ ರಶ್ಮಿ ಹಾಲೇಶ್ ರಿಪ್ಪನ್‌ಪೇಟೆ : ಜಾತಿ ಮತ ಪಂಥಗಳ ಭೇಧವನ್ನು ಮರೆತು ಸಧ್ಭಾವನೆಯಿಂದ ಎಲ್ಲರಲ್ಲೂ ಬೆರೆತು ಹಬ್ಬವನ್ನು ಆಚರಿಸಿದಾಗ ಅದು ನಾಡಹಬ್ಬವಾಗುತ್ತದೆ ಎಂದು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದರು. ಇಲ್ಲಿನ ಗ್ರಾಮ ಪಂಚಾಯಿತಿಯ ಕುವೆಂಪು ಸಭಾಭವನದಲ್ಲಿ ಪೊಲೀಸ್, ಕಂದಾಯ ಇಲಾಖೆಯವರು ಆಯೋಜಿಸಲಾದ “ಗೌರಿ-ಗಣೇಶ ಮತ್ತು ಈದ್ ಮಿಲಾದ್’’ ಹಬ್ಬದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ :

ಹೊಸನಗರ ವಿಧಾನಸಭಾ ಕ್ಷೇತ್ರವು ತಾಲ್ಲೂಕಿನಲ್ಲಿ 2001 ರ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ ನಂತರದ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ಸಮಯದಲ್ಲಿ ಹೊಸನಗರ ಕ್ಷೇತ್ರವನ್ನು ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ಸೇರಿಸಿ ಹೊಸನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಾಗಿತ್ತು. ಇಂದು ಹೊಸನಗರ ತಾಲ್ಲೂಕಿನ ಎಲ್ಲ ಪಕ್ಷದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡು ಮಾಜಿ ಶಾಸಕ ಬಿ.ಸ್ವಾಮಿರಾವ್‌ ರವರ ನೇತೃತ್ವದಲ್ಲಿ ಹಳೇ ಕೋರ್ಟ್ ರಸ್ತೆಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಹೊಸನಗರದ ತಹಶೀಲ್ದಾರ್‌ ಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು….

Read More