Headlines

ಶಿವಮೊಗ್ಗದಿಂದ ಸ್ಪೈಸ್ ಜೆಟ್ ಹಾರಾಟ – ವೇಳಾಪಟ್ಟಿ ಹೀಗಿದೆ ನೋಡಿ

ಶಿವಮೊಗ್ಗದಿಂದ ಸ್ಪೈಸ್ ಜೆಟ್ ಹಾರಾಟ – ವೇಳಾಪಟ್ಟಿ ಹೀಗಿದೆ ನೋಡಿ ಸ್ಪೈಸ್‌ ಜೆಟ್‌ ವಿಮಾನಯಾನ ಸಂಸ್ಥೆ ಶಿವಮೊಗ್ಗ – ಹೈದರಾಬಾದ್‌ ಮತ್ತು ಶಿವಮೊಗ್ಗ – ಚೆನ್ನೈ ವಿಮಾನಯಾನ ಸೇವೆ ಆರಂಭಗೊಳ್ಳುತ್ತಿದೆ . ಅ.10ರಿಂದ ಶಿವಮೊಗ್ಗದಿಂದ ಮೂರನೆ ವಿಮಾನಯಾನ ಸಂಸ್ಥೆ ಹಾರಾಟ ನಡೆಸಲಿದೆ. ಚೆನ್ನೈಯಿಂದ ಶಿವಮೊಗ್ಗ: ಬೆಳಗ್ಗೆ 10:40ಕ್ಕೆ ಹೊರಟು, ಮಧ್ಯಾಹ್ನ 12:10ಕ್ಕೆ ತಲುಪಲಿದೆ. ಶಿವಮೊಗ್ಗದಿಂದ ಹೈದರಾಬಾದ್: ಮಧ್ಯಾಹ್ನ 12:35ಕ್ಕೆ ಹೊರಟು, ಮಧ್ಯಾಹ್ನ 2:05ಕ್ಕೆ ತಲುಪಲಿದೆ. ಹೈದರಾಬಾದ್‌ನಿಂದ ಶಿವಮೊಗ್ಗ: ಮಧ್ಯಾಹ್ನ 2:40ಕ್ಕೆ ಹೊರಟು, ಸಂಜೆ 4:10ಕ್ಕೆ ತಲುಪಲಿದೆ. ಶಿವಮೊಗ್ಗದಿಂದ…

Read More

ಸಚಿವರ ಪ್ರಮಾಣವಚನ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ..??? ಇಲ್ಲಿದೆ ಸಂಪೂರ್ಣ ಮಾಹಿತಿ|Cabinet

ಕರ್ನಾಟಕ ರಾಜ್ಯ ಸರ್ಕಾರದ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವರಿಗೆ ಈ ರೀತಿಯಾಗಿ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗುತಿದ್ದು ಆ ಪಟ್ಟಿ ಇಲ್ಲಿದೆ. ಯಾರಿಗೆ ಯಾವ್ಯಾವ ಜವಾಬ್ದಾರಿ..? ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಡಾ.ಜಿ.ಪರಮೇಶ್ವರ್ -ಗೃಹ ಸಚಿವ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು ರಿಪ್ಪನ್‌ಪೇಟೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಚಾಲನೆ ನೀಡಿದರು. ನೂರಾರು ಪುಟಾಣಿ ಮಕ್ಕಳು ಭುವನೇಶ್ವರಿ ವೇಷದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಮನಸೆಳೆದರು. ಡೊಳ್ಳು ಕುಣಿತ, ಪಟಾಕಿ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು….

Read More

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್ ರಿಪ್ಪನ್‌ಪೇಟೆ : ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ ಗಿರವಿ ಇಟ್ಟುಕೊಂಡು ಹಣ ನೀಡುವ ಮೂಲಕ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುವ ಬಗ್ಗೆ ಗ್ರಾಹಕರಿಂದ ದೂರು ಬಂದರೆ ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ಖಡಕ್ ವಾರ್ನಿಂಗ್ ನೀಡಿದರು….

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪೈಪೋಟಿ ಎದುರಿಸಲು ಸಿದ್ದರಾಗಬೇಕು – ಹರತಾಳು ಹಾಲಪ್ಪ|GJC

ರಿಪ್ಪನ್‌ಪೇಟೆ :  ಶ್ರೀಮಂತರ ಮತ್ತು ಸರ್ಕಾರಿ ನೌಕರರ ಅಧಿಕಾರಿಗಳ ಮಕ್ಕಳ ಮುಂದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸ್ಪರ್ಧಾತ್ಮಕ ಪೈಪೋಟಿ ನಡೆಸಬೇಕಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರೊಂದಿಗೆ ಬೌದ್ಧಿಕ ಬೆಳವಣಿಗಗೆ ಸಹಕಾರಿಯಾಗಬೇಕು ಎಂದು ಶಾಸಕ ಹರತಾಳು ಹಾಲಪ್ಪ ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಶುಕ್ರವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಗುರುಗಳ, ತಂದೆ-ತಾಯಿಯರ ಪೋಷಕರ ಮಾರ್ಗದರ್ಶನದೊಂದಿಗೆ ಶಿಸ್ತುಬದ್ದ ಬದುಕಿಗೆ ಸರಿಯಾದ ಮಾರ್ಗದರ್ಶನ ಕೊಡಿಸಬೇಕು. ಇಲ್ಲದಿದ್ದರೆ ಭಾರಿ ಸಂಕಷ್ಟ…

Read More

ಶಿಕ್ಷಣ ಸಚಿವ ಮಧುಬಂಗಾರಪ್ಪನವರಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ|education minister

“ಶಿಕ್ಷಣ ಸಚಿವ ಮಧುಬಂಗಾರಪ್ಪನರಿಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ’’ ರಿಪ್ಪನ್‌ಪೇಟೆ;-ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ತೀರ್ಥಹಳ್ಳಿಗೆ ರಿಪ್ಪನ್‌ಪೇಟೆ ಮಾರ್ಗವಾಗಿ ತೆರಳುತ್ತಿದ್ದಾಗ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರಿಂದ ಸಾರ್ವಜನಿಕರಿಂದ ಅದ್ದೂರಿಯಾಗಿ  ಸ್ವಾಗತಿಸುವ ಮೂಲಕ ಬರಮಾಡಿಕೊಂಡರು. ಕಾರ್ಯಕರ್ತರ ಮತ್ತು ಸಾರ್ವಜನಿಕರ ಸ್ವಾಗತ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪನವರು ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಶಕ್ತಿ ಗ್ಯಾರಂಟಿ ಯೋಜನೆಯಡಿ ಬಸ್ ಬಿಡುವಂತೆ ಸಚಿವರಿಗೆ ಮನವಿ ಮಾಡಿಕೊಂಡ ಮೇರಗೆ ಸಚಿವರು ಸ್ಪಂದಿಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಬಸ್…

Read More

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ | Hanuman langur

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ ಸೊರಬ ತಾಲ್ಲೂಕಿನ ಶಕುನವಳ್ಳಿಯಲ್ಲಿ ಕಳೆದೊಂದು ವಾರದಲ್ಲಿ 14 ಮಕ್ಕಳಿಗೆ ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೂರು ಮುಶಿಯಾಗಳ (ಹನುಮಾನ್‌ ಲಂಗೂರ್‌) ಪೈಕಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆಹಿಡಿದಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅರವಳಿಕೆ ಮದ್ದು ನೀಡಿ ಮುಶಿಯಾ ಸೆರೆ ಹಿಡಿಯಲಾಗಿದೆ. ಗ್ರಾಮದಲ್ಲಿ ಮುಶಿಯಾಗಳ ತಂಡ ಬೀಡು ಬಿಟ್ಟಿದೆ. ಅದರಲ್ಲಿ ಮೂರು ಮುಶಿಯಾ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ…

Read More

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ “ಥ ಇನ್ಫರ‍್ಮೇಶನ್ ಸೋರ್ಸ್ ಫಾರ್ ಮೇಕಿಂಗ್ ಪ್ರೋಟಿನ್ ಇನ್ ದ ಸೆಲ್ಸ್ ಇಸ್” ಎಂಬ ಬಹು ಆಯ್ಕೆಯ ಪ್ರಶ್ನೆಗೆ ಕೇಳಲಾಗಿತ್ತು. ಅದಕ್ಕೆ ಜೀನ್, ಕ್ರೋಮೋಜೋಮ್, ಡಿಎನ್‌ಎ, ರೈಬೊಝೋಮ್ ಎಂಬ ನಾಲ್ಕು ಆಯ್ಕೆ ಇತ್ತು. ಜೀನ್ ಸಹ ಪ್ರೋಟಿನ್ ಸೆಲ್ ಎಂದು ಸಂಜನಾ ಉತ್ತರ ನೀಡಿದ್ದಳು. ಆದರೆ ಸರಿಯಾದ ಉತ್ತರ ಡಿಎನ್‌ಎ ಎಂದಿತ್ತು. ಶಿವಮೊಗ್ಗ: ಒಂದು ಅಂಕದಿಂದ ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಕನಸು…

Read More

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ  ಬಾವಿಗೆ ಬಿದ್ದಿದ್ದ  ಹಸುವನ್ನು  ಮೇಲೆತ್ತಲು ಇಳಿದಿದ್ದ ವ್ಯಕ್ತಿ ‌ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕೂಲಿ ಕಾರ್ಮಿಕ, ಕೇರಳದ ಸತೀಶ (45) ಮೃತಪಟ್ಟವನು. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆಇಳಿದಿದ್ದಾಗ ಈ ದುರ್ಘಟನೆ ನಡೆದಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ…

Read More

Sagara | ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಸಾಗರ : 2023 ನೇ ಸಾಲಿನ ರಾಜ್ಯೋತ್ಸವ (ರಂಗಭೂಮಿ ಕ್ಷೇತ್ರ) ಪ್ರಶಸ್ತಿಗೆ ಭಾಜನರಾದ ನಾಡಿನ ಹೆಸರಾಂತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ರವರನ್ನು ಅವರ ಸ್ವಗೃಹದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿ ಸನ್ಮಾನಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆಳದಿ ಸಮೀಪದ ಅಡ್ಡೇರಿ ಗ್ರಾಮದವರಾದ ಜಂಬೆಯವರು. ಕೆಳದಿಯ ಭಾರತಿ ಕಲಾವಿದರು ಸಂಸ್ಥೆಯ “ಸಂಗ್ಯಾ-ಬಾಳ್ಯಾ” ನಾಟಕದ ಮೂಲಕ ರಂಗಭೂಮಿಯನ್ನು ಪ್ರವೇಶಿಸಿ,…

Read More