Headlines

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಪಿ. ರಮೇಶ್ ಅವರ ಮಾಲೀಕತ್ವದ ಸಾಗರ ರಸ್ತೆಯಲ್ಲಿರುವ ಪಿ.ವಿ. ಸ್ಟೋರ್‌ನಲ್ಲಿ ಭಾರತೀಯ ಸೇನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ಗಿರೀಶ್ ಅವರಿಗೆ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಯೋಧರಿಗೆ ಶಾಲು ಹೊದಿಸಿ, ಫಲತಾಂಬೂಲ ಮತ್ತು ನೆನಪಿನ ಕಾಣಿಕೆ ನೀಡಿ ಅವರ ಸೇವಾಭಾವವನ್ನು ಸ್ಮರಿಸಲಾಯಿತು. ನಂತರ ಸಿಹಿ ತಿನ್ನಿಸಿ ನಿವೃತ್ತಿ ಜೀವನವು ಸುಖಮಯವಾಗಿ ಮತ್ತು…

Read More

ಹಂದಿ ಅಣ್ಣಿ ಹತ್ಯೆ ಆರೋಪಿಗಳಿಬ್ಬರ ಮೇಲೆ ಮಾರಾಣಾಂತಿಕ ದಾಳಿ – ಓರ್ವ ಸಾವು,ಇನ್ನೊಬ್ಬ ಗಂಭೀರ|attack

ಶಿವಮೊಗ್ಗದಲ್ಲಿ ಮತ್ತೊಮ್ಮೆ ರೌಡಿಗಳ ಅಟ್ಟಹಾಸ ಸದ್ದು ಮಾಡಿದೆ.ಚೀಲೂರಿನ ಬೋವಿನ ಕೋವಿಯ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ದಾಳಿ ನಡೆದಿದ್ದು ಈ ಪೈಕಿ ಆಂಜನೇಯ ಎಂಬಾತ ಸಾವನ್ನಪ್ಪಿದ್ದು, ಮಧು ಎಂಬಾತನ ಸ್ಥಿತಿ ಗಂಭೀರವಾಗಿದೆ. ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಕೇಸಿನಲ್ಲಿ ಕೋರ್ಟ್​ಗೆ ಅಟೆಂಡ್ ಆಗಿ ವಾಪಸ್​ ಬರುತ್ತಿದ್ದರು. ಬೈಕ್​ ನಲ್ಲಿ ಬರುತ್ತಿದ್ದ ಇವರಿಬ್ಬರನ್ನ ಸ್ಕಾರ್ಪಿಯೋ ಗಾಡಿಯೊಂದು ಫಾಲೋ ಮಾಡಿ ಬೋವಿನ ಕೋವಿ ಬಳಿ ಮಧು ಮತ್ತು ಆಂಜನೇಯನ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ….

Read More

ಮಾ.4 ರವರೆಗೆ ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ ವಿಸ್ತರಣೆ : ಶಾಲಾ ಕಾಲೇಜು ನಾಳೆಯಿಂದ ಆರಂಭ

ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ವ್ಯಾಪಾರ, ವಹಿವಾಟಿಗೆ ಅವಧಿಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ. ರಾತ್ರಿ 7 ಗಂಟೆ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲೆ, ಕಾಲೇಜುಗಳು ಪ್ರಾರಂಭ ಹರ್ಷ ಹಿಂದೂ…

Read More

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಕಾರ್ಯವೈಖರಿಗೆ ಪೊಲೀಸ್ ಇಲಾಖೆಯಿಂದ ಪ್ರಶಂಸನಾ ಪತ್ರ | PSI

ರಿಪ್ಪನ್‌ಪೇಟೆ : ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರ ಕಾರ್ಯವೈಖರಿ ಹಾಗೂ ಶೀಘ್ರ ಕಡತ ವಿಲೇವಾರಿಯನ್ನು ಮೆಚ್ಚಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸನಾ ಪತ್ರ ವಿತರಿಸಲಾಗಿದೆ. ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಇಲಾಖಾ ಕರ್ತವ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಆರ್ ಹಿತೇಂದ್ರ IPS  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಬೆಂಗಳೂರು ಅವರು ಪ್ರಶಂಸನಾ ಪತ್ರ ವಿತರಿಸಿದರು. ರಿಪ್ಪನ್‌ಪೇಟೆ ಪಿಎಸ್‌ಐ…

Read More

ರಿಪ್ಪನ್ ಪೇಟೆ : ಪಿಯು ಕಾಲೇಜಿನ 56 ವಿದ್ಯಾರ್ಥಿಗಳ ಕೋವಿಡ್ ವರದಿ ಪ್ರಕಟ :

ರಿಪ್ಪನ್ ಪೇಟೆ : ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು,ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗೆ ಕರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಸ್ಲ್ಯಾಬ್ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಗಂಟಲು /ಮೂಗಿನ ದ್ರವದ RTPCR ಟೆಸ್ಟ್ ವರದಿ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ. ಈ ಘಟನೆಯ…

Read More

ಆನವಟ್ಟಿಯಲ್ಲಿ ಬೈಕ್ ಮತ್ತು ಟಿಟಿ ನಡುವೆ ಡಿಕ್ಕಿ – ಯುವಕ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಬೈಕ್‌ ಹಾಗೂ ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಹಾನಗಲ್ ಕಡೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಟಿಟಿಗೆ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಆನವಟ್ಟಿಯ ದುರ್ಗಮ್ಮ ಬೀದಿಯ ಕೀರ್ತಿರಾಜ್ (22) ಮೃತ ದುರ್ದೈವಿಯಾಗಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕೀರ್ತಿರಾಜ್‌ ಅವರಿಗೆ ಆನವಟ್ಟಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಕೀರ್ತಿರಾಜ್ ಮೃತಪಟ್ಟಿದ್ದಾರೆ.  ಆನವಟ್ಟಿ ಪೊಲೀಸ್ ಠಾಣೆಯಲ್ಲಿ…

Read More

ಶಿವಮೊಗ್ಗದ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಬೈಂದೂರಿನಲ್ಲಿ ಅಪಘಾತ : ಇಬ್ಬರು ಸಾವು, ಹಲವರಿಗೆ ಗಾಯ

ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತ: ಶಿವಮೊಗ್ಗ ಮೂಲದ ಇಬ್ಬರ ಸಾವು, ಹಲವರಿಗೆ ಗಾಯ A tragic accident involving a tourist bus carrying Rambhapuri College students near Trasi in Byndoor, Udupi district, claimed two lives and left several others injured. ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಪ್ರವಾಸಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ…

Read More

Ripponpete | ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು  ರಿಪ್ಪನ್‌ಪೇಟೆ – ಸಹಕಾರಿ ಕ್ಷೇತ್ರವನ್ನು ನಾವು ಇಂದು ಉಳಿಸಿ ಬೆಳೆಸಬೇಕಾಗಿದೆ. ಹಳೆ ನಂಬರ್ ಕ್ಷೇತ್ರದ ರೈತರ ಪರವಾಗಿ ಸದಾ ನಾನು ನಿಮ್ಮೊಂದಿಗೆ ಧ್ವನಿಯಾಗಿರುತ್ತೇನೆ  ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ  ಎತ್ತರಕ್ಕೆ ಬೆಳೆಸುವಂತೆ  ಆಗಬೇಕು ಎಂದು ಶಾಸಕ  ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ನಡೆದ ಕರ್ನಾಟಕ ರಾಜ್ಯ ಮಹಾಮಂಡಳ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಡಿಸಿಸಿ ಬ್ಯಾಂಕ್, ಸಹಕಾರ ಹಾಲು…

Read More

ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ|congress

ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ರಿಪ್ಪನ್‌ಪೇಟೆ : ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಬಾಳೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 20 ತಿಂಗಳು ಬಾಳೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಕಾರ್ಯ  ನಿರ್ವಹಿಸಿದ್ದ ಲೀಲಾವತಿ…

Read More

ರಿಪ್ಪನ್ ಪೇಟೆ : ಅತ್ಯಂತ ಯಶಸ್ವಿಯಾಗಿ ನಡೆದ ಸಾಮೂಹಿಕ ಗಣಹೋಮ ಮತ್ತು ಸುಮಂಗಲಿ ಪೂಜೆ

ರಿಪ್ಪನ್ ಪೇಟೆ :ಮನುಷ್ಯ ತಂತ್ರಜ್ಞಾನದ ಮೂಲಕ  ಸಂಚರಿಸುತ್ತಿದ್ದಾನೆ. ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಮಾನವೀಯ ಮೌಲ್ಯಗಳೆಂದರೆ ಮನೆಯಲ್ಲಿ ಭಜನೆಗಳು,ದೇವತಾ ಆರಾಧನೆಗಳು, ಮಕ್ಕಳಿಗೆ ವಿಶೇಷವಾಗಿರುವಂತಹ ಧರ್ಮ ಚಿಂತನೆಗಳನ್ನು  ಕಡಿಮೆ ಮಾಡುತ್ತಿದ್ದೇವೆ.ಮಕ್ಕಳನ್ನು ಸಧ್ರಡವಾದ ವ್ಯಕ್ತಿಗಳನ್ನು ಮಾಡಬೇಕಾದರೆ ತಂದೆ ತಾಯಿಗಳಾದವರು ಒಳ್ಳೆಯ ಸಂಸ್ಕಾರವಂತರಾಗಬೇಕಾಗಿದೆ. ಇಂದು ರಾಜಮಹಾರಾಜರ ಚರಿತ್ರೆಯನ್ನು ಹೇಳಬೇಕಾದರೆ ಅವರ ಹಿಂದೆ ಅವರ ತಾಯಿಯ ಪರಿಶ್ರಮ ಎಷ್ಟಿರಬಹುದು ಎಂಬುದನ್ನು ಊಹಿಸಬೇಕಾಗುತ್ತದೆ. ನಾವು ಮಕ್ಕಳನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಿದಾಗ ಸಮಾಜಕ್ಕೆ ಒಳ್ಳೆಯ ವ್ಯಕ್ತಿಯನ್ನು ಕೊಟ್ಟಂತಾಗುತ್ತದೆ, ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳನ್ನು ಕೊಟ್ಟಾಗ ಸಮಾಜ ಸದೃಢವಾಗುತ್ತದೆ. ಅಂತಹ ಸದೃಡವಾದ…

Read More