Headlines

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ ಹೊಸನಗರ(Hosanagara) ತಾಲೂಕಿನ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 25 ವರ್ಷದ ಯುವಕನಿಗೆ ಶಿವಮೊಗ್ಗ(shivamogga)ದ ಫಾಸ್ಟ್‌ಟ್ರ್ಯಾಕ್ ಸ್ಪೆಷಲ್ ಕೋರ್ಟ್‌ 20 ವರ್ಷಗಳ ಕಠಿಣ ಸಜೆ ವಿಧಿಸಿದೆ. ಹೊಸನಗರ ತಾಲೂಕು ಗ್ರಾಮ ಒಂದರಲ್ಲಿ 2022ರಲ್ಲಿ ಆರೋಪಿ ಯುವಕ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.ಇದರಿಂದ ಬೇಸತ್ತ ಬಾಲಕಿ ಮನೆಯವರಿಗೆ ತಿಳಿಸಿದ್ದಳು. ಇದಾದ ಬಳಿಕ ಬಾಲಕಿ ಹೊಸನಗರ…

Read More

Hosanagara | 06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ

06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06…

Read More

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಕುಕ್ಕಳಲೆ ಕೆ.ಆರ್ ನಾಗರಾಜ ಗೌಡರವರು ಹೃದಯಾಘಾತದಿಂದ ಬೆಳಗಿನ ಜಾವ ನಿಧನರಾಗಿದ್ದಾರೆ. ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಹಾಗೂ ವೀರಶೈವ ಸಮಾಜದ ಮುಖಂಡರಾಗಿ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಾಗರಾಜ್ ಗೌಡ ರವರು ಅಲ್ಪ ಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರು. ಕುಕ್ಕಳಲೆ ರೇಣುಕಪ್ಪ ಗೌಡ ರವರ ಪುತ್ರರಾದ ನಾಗರಾಜ್…

Read More

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

Ripponpete | ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ

ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ ರಿಪ್ಪನ್ ಪೇಟೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗದ ನೇತಾರ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪನವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೆ ಎಸ್ ಈಶ್ವರಪ್ಪ ಬಳಗದ ಸಂಚಾಲಕರಾದ ವಾಟಗೋಡು ಸುರೇಶ್ ಮತ್ತು ತ.ಮ.ನರಸಿಂಹ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುಟುಂಬ ರಾಜಕಾರಣ ಮತ್ತು ಭಾರತೀಯ ಜನತಾ ಪಕ್ಷದ ಶುದ್ಧೀಕರಣಕ್ಕಾಗಿ ಹೋರಾಟ ನಡೆಸುತ್ತಿರುವ ಕೆ ಎಸ್ ಈಶ್ವರಪ್ಪ ರವರ ಹೋರಾಟಕ್ಕೆ ಬಿಜೆಪಿಯಲ್ಲಿ ನೊಂದ ಅನೇಕ ಕಾರ್ಯಕರ್ತರು ಮತ್ತು ಬೇರೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಶೇ 80% ರಷ್ಟು ಮತದಾನ – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಶೇ.80%ರಷ್ಟು ಮತದಾನವಾಗಿದೆ. ಶಾಂತಿಯುತವಾಗಿ ಮತದಾನ ನಡೆದಿದ್ದು, ಕೆಲವೆಡೆ ಇವಿಎಂ ಕೈ ಕೊಟ್ಟ ಹಿನ್ನೆಲೆಯಲ್ಲಿ ಮತದಾನ ಕೆಲ ಸ್ಥಗಿತಗೊಂಡಿತ್ತು.ವಿವಿಧ ಸುಮಾರು 20 ಮತದಾನ ಕೇಂದ್ರದಲ್ಲಿ ಹೆಚ್ಚುವರಿ ಸಮಯ ನೀಡಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹೇಳಿದರು. ಎಲ್ಲೂ ಮರು ಮತದಾನ ನಡೆಸುವ ಅಗತ್ಯ ಕಂಡು ಬಂದಿಲ್ಲವೆಂದು ತಿಳಿಸಿರುವ ಡಿಸಿಮತ ಎಣಿಕೆ ಸಂಬಂಧ ಅಗತ್ಯ ಸಿದ್ಧತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು. ಅಂತಿಮ ಹಾಗೂ ಒಟ್ಟಾರೆ ಶೇಕಡಾವಾರು ಮತದಾನದ ವಿವರ ಲಭ್ಯವಾಗಿದೆ. ಚುನಾವಣಾ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಅದಿರು ತುಂಬಿದ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಅದಿರು ತುಂಬಿದ ಲಾರಿಯೊದು ಮರಕ್ಕೆ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಿಡಿಹಳ್ಳ ಸೇತುವೆ ಸಮೀಪದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಸಮೀಪದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ನಿದ್ರೆಯ ಮಂಪರಿನಿಂದ ಅಪಘಾತವಾಗಿರಬಹುದು ಎನ್ನಲಾಗುತ್ತಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…

Read More

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ”

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ” ರಿಪ್ಪನ್‌ಪೇಟೆ – ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ…

Read More