Headlines

ರಿಪ್ಪನ್‌ಪೇಟೆಯಲ್ಲಿ ಚಿರತೆ ಪ್ರತ್ಯಕ್ಷ – ದಾಳಿಗೆ ಬಲಿಯಾದ ಹಸು : ಆತಂಕದಲ್ಲಿ ಗ್ರಾಮಸ್ಥರು|leopard

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿ ಜಾನುವಾರು ಬಲಿ  ಪಡೆದುಕೊಂಡ  ಘಟನೆ ನಡೆದಿದೆ. ರಿಪ್ಪನ್‌ಪೇಟೆ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಸಮೀಪದ ಮಳವಳ್ಳಿ ಗ್ರಾಮದ ಸಂಪರ್ಕ ರಸ್ತೆಯ ಬದಿಯಲ್ಲಿ ತಡರಾತ್ರಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ, ಸಾಯಿಸಿ ಹಸುವಿನ ಹೊಟ್ಟೆಯೊಳಗಿದ್ದ ಕರುವನ್ನು ಎಳೆದು ಸುಮಾರು ನೂರು ಅಡಿಯಷ್ಟು ದೂರದಲ್ಲಿ ಎಳೆದು ಹಾಕಿ ಹೋಗಿರುವಂತಹ ಹೃದಯಾ ವಿದ್ರಾವಕ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ್…

Read More

ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರ : ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಭವ್ಯ ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿನ ಬ್ರಾಹ್ಮಣ ಸಮಾಜದ ಶ್ರೀರಾಮಮಂದಿರದ ಸಮುದಾಯ ಭವನದ ಮೇಲಂತಸ್ತು ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ನಂತರ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ.ಧಾರ್ಮಿಕ ,ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಈ ಸಮಾಜ ದೇಶದ ಪ್ರಗತಿಯಲ್ಲಿ…

Read More

ಹೊಸನಗರ ಸಮೀಪ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ : ಚಾಲಕನಿಗೆ ಗಂಭೀರ ಗಾಯ|Accident

ಇನ್ನೊವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ನಡೆದು ಕಾರು ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ನಗರ ಹೋಬಳಿ ಮತ್ತಿ ಮನೆ ಸಮೀಪ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನೊವಾ ಕಾರಿನ ಚಾಲಕ ಸಿದ್ದರಾಜು ಎಂಬುವರ ಕಾಲಿಗೆ, ಹೊಟ್ಟೆಗೆ ಹಾಗೂ ಕಿವಿಗೆ  ಗಂಭೀರವಾಗಿ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.  ಕಾರು ಮೈಸೂರಿನಿಂದ ಸಿಗಂದೂರು ಕಡೆಗೆ ತೆರಳುತಿದ್ದು…

Read More

ಹಣದಾಸೆಗೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಕೊಲೆ ಮಾಡಿ ಚಿನ್ನ ಕದ್ದೊಯ್ದಿದ್ದ ಆರೋಪಿಯ ಬಂಧನ|Arrested

ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪೇಪರ್ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್ 3 ರಂದು‌ ಭದ್ರಾವತಿಯ ಸುಣ್ಣದಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕೊಲೆ ಮಾಡಿ ಆರೋಪಿ ಬಂಗಾರದ ಓಲೆ ಮತ್ತು ಮೂಗುತಿಯೊಂದಿಗೆ ಪರಾರಿಯಾಗಿದ್ದನು. ಸದರಿ ಜಟಿಲ ಪ್ರಕರಣವನ್ನು ಕೈಗೆತ್ತಿಕೊಂಡ ಪೇಪರ್ ಟೌನ್ ಪೊಲೀಸರು ಕುಂದಾಪುರದ ಕರುಣಾಕರ ದೇವಾಡಿಗ (24) ಎಂಬಾತನನ್ನು ಬಂಧಿಸಿ 14000 ರೂ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ….

Read More

ಅಂಗನವಾಡಿ ಕಾರ್ಯಕರ್ತೆರಿಗೆ ಮತ್ತು ಸಹಾಯಕಿಯರಿಗೆ ಮನೆ ಮತ್ತು ಬಿಪಿಎಲ್ ಕಾರ್ಡ್ ಕಡ್ಡಾಯ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು : ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಜಗತ್ತನ್ನು ವ್ಯಾಪಿಸಿದ್ದ ಕೊರೋನಾ ಮಹಾಮಾರಿ ರೋಗದ ಸಂದರ್ಭದಲ್ಲಿ ಅಂಗನವಾಡಿ ಆಶಾ ಮತ್ತು ಅರೋಗ್ಯ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಶ್ರಮಿಸಿರುವುದು ಪ್ರಸಂಶನೀಯವಾಗಿದೆ ಅದರೆ ಅವರಿಗೆ ಕನಿಷ್ಟ ವೇತನವಿಲ್ಲದೆ ಪರದಾಡುವ ಸ್ಥಿತಿ ಇದ್ದರೂ ಕರ್ತವ್ಯವನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ ಇವರಿಗೆ ಇದೇ 19 ರಿಂದ ಅರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಗಮನಸೆಳೆಯುವುದರೊಂದಿಗೆ ಪರಿಹಾರ ಕಲ್ಪಿಸುವ ಭರವಸೆಯನ್ನು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಜ್ಯೋತಿಮಾಂಗಲ್ಯ…

Read More

ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films

ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ  ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು.   ರಾಮಾ ರಾಮಾ ರೇ…

Read More

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ|jds

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿ ಆರ್. ಎ. ಚಾಬುಸಾಬ್ ಅವರನ್ನು ನೇಮಿಸಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಪಕ್ಷ ಸಂಘಟನೆಗೆ ಅಣಿಯಾಗುವಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ನೀಡಿದ್ದಾರೆ. ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಪಕ್ಷದ ಕಟ್ಟಾಳಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಚಾಬುಸಾಬ್ ಅವರು ಎರಡನೇ ಬಾರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿದ್ದಾರೆ. ಮೊದಲಿಗೆ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲದೇ ಇರುವಾಗ ಪಕ್ಷ…

Read More

ಹೊಳೆಯಲ್ಲಿ ದನಗಳ ಮೈ ತೊಳೆಸಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವು|mutuguppe

ದನಗಳ ಮೈ ತೊಳೆಸಲು ಹೋದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ತಾಲೂಕಿನ ಮುಟುಗುಪ್ಪೆ ಸಮೀಪದ ಬಂದಿಗೆ  ಗ್ರಾಮದ ಹೊಳೆಯಲ್ಲಿ ದನಗಳಿಗೆ ಮೈ ತೊಳೆಸಲು ಹೋಗಿ ಆಕಸ್ಮಿಕವಾಗಿ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಬಂದಿಗೆ ಗ್ರಾಮದ ಪುನೀತ್ ಕುಮಾರ್ (23) ಮೃತ ದುರ್ಧೈವಿ. ಇಂದು ಬೆಳಗ್ಗೆ ದನಗಳಿಗೆ ಮೈ ತೊಳಿಸಲು ತಮ್ಮ ಜಮೀನಿನ ಹತ್ತಿರವಿರುವ ಜಮೀನಿನ ಹೊಳೆಗೆ ಹೋಗಿದ್ದಾರೆ.ಆದರೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರು ತಳಕ್ಕೆ…

Read More

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

H D ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ವರಸಿದ್ದಿ ವಿನಾಯಕನಲ್ಲಿ ಸಂಕಲ್ಪ ಪೂಜೆ :|jds

ರಿಪ್ಪನ್‌ಪೇಟೆ : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮೊತ್ತೊಮ್ಮ ರಾಜ್ಯದ ಮುಖ್ಯಮಂತ್ರಿಯಾಗುವಂತೆ ಅವರ ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಕಾರ್ಯಕರ್ತರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಸಂಕಲ್ಪ ಪೂಜೆ ನೆರವೇರಿಸಿದರು. ಸಂಕಲ್ಪ ಪೂಜೆಯ ನಂತರ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಯೋಜನೆ ಸೇರಿದಂತೆ ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಜನಾನುರಾಗಿಯಾಗಿದ್ದು…

Read More