ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ಪೇಟೆಯ ವಿದ್ಯಾರ್ಥಿಗಳು ಆಯ್ಕೆ|volleyball
ರಿಪ್ಪನ್ಪೇಟೆ : ತಮಿಳುನಾಡಿನಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 23 ರಿಂದ 27 ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಪ್ರಜ್ವಲ್ ಎನ್ ಎಂ ಮತ್ತು ಮಹಮ್ಮದ್ ಅರ್ಬಾಜ಼್ ಆಯ್ಕೆಯಾಗಿದ್ದಾರೆ. ವಿದ್ಯಾನಗರದ ನಿವಾಸಿಗಳಾದ ಮಹೇಶ್ವರಾಚಾರಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರನಾದ…


