ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ತರಗತಿ ವಿದ್ಯಾರ್ಥಿನಿ ….

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ವಿದ್ಯಾರ್ಥಿನಿ …. 14 ವರ್ಷಗಳ ಹಿಂದೆ ಯಾರೋ ಬೀದಿಯಲ್ಲಿ ಬಿಟ್ಟು ಹೋಗಿದ್ದ ಮೂರು ದಿನಗಳ ಕಂದನನ್ನು ತಂದು ಸಾಕಿ, ಸಲುಹಿ ಅಮ್ಮನ ಪ್ರೀತಿಯನ್ನೆಲ್ಲಾ ಧಾರೆಯೆರೆದಿದ್ದ ಈ ಮಹಿಳೆ ಮುಂದೆ ಈಕೆಯೇ ತನ್ನ ಪಾಲಿನ ಯಮಸ್ವರೂಪಿಣಿಯಾಗುತ್ತಾಳೆ ಎನ್ನುವುದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಮಕ್ಕಳಿಲ್ಲದ ಕೊರಗನ್ನು ಈ ಕಂದ ನೀಗಿಸಿದಳು ಎಂದು ಯಾರೋ ಹೆತ್ತು ಬೀಸಾಡಿದ ಮಗುವನ್ನು ತಂದು ಸಾಕಿ, ಸಲುಹಿ ಆಕೆಗೆ ಆರೈಕೆ ಮಾಡಿದ್ದರು ಈ ಅಮ್ಮ….

Read More

ಪ್ರತಿಭಾ ಕಾರಂಜಿಯಲ್ಲಿ ಮನಸೆಳೆದ ಬೇಡರ ಕಣ್ಣಪ್ಪ ಪಾತ್ರ|nagara news

ಹೊಸನಗರ : ನಗರ ಹೋಬಳಿ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತ್ತು. ಕಾರ್ಯಕ್ರಮದಲ್ಲಿ ನಗರ ಕ್ಲಸ್ಟರ್ ವಿಭಾಗದ ವಿದ್ಯಾರ್ಥಿಗಳು ಹಲವು ರೀತಿಯಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.ಈ ಸಂಧರ್ಭದಲ್ಲಿ ನಗರ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಅನೀಶ್ವ ಆರ್ ಪ್ರದರ್ಶನ ಮಾಡಿರುವ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರಗು ಹೆಚ್ಚಿಸಿತ್ತು. ಉತ್ತಮ ತರಬೇತಿ ನೀಡಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ಕಾರಣೀಕರ್ತರಾದ ಶಿಕ್ಷಕರು,ಶಾಲಾಭಿವೃದ್ದಿ ಸಮಿತಿಗೆ…

Read More

Hosanagara | ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ

ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ  ಪ್ರಸ್ತುತ ಕಾಲದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವಲ್ಲಿ ವಿದ್ಯಾವಂತ ಯುವಕರು ಮುನ್ನಲೆಗೆ ಬರಬೇಕು ಎಂದು ಹೊಸನಗರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರು ಹೇಳಿದರು. ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊವಿನಕೋಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ಶಾಲೆಯ ಅಭಿಮಾನ, ಸುಣ್ಣ ಬಣ್ಣದ ಅಭಿಯಾನ”  ಕಾರ್ಯಕ್ರಮಕ್ಕೆ ಬಣ್ಣ ಹೊಡೆಯುವ ಮೂಲಕ ಚಾಲನೆ…

Read More

ಭತ್ತದ ಗದ್ದೆಯಲ್ಲಿ ಕಂದುಜಿಗಿ ಹುಳು ಬಾಧೆಗೆ ನೂರಾರು ಎಕರೆ ಬೆಳೆ ನಾಶ – ಈ ಹುಳುವಿನ ಹತೋಟಿ ಕ್ರಮ ಏನೇನು.!? ಇಲ್ಲಿದೆ ಸಂಪೂರ್ಣ ಮಾಹಿತಿ..!

ಕಳೆದ ಬೇಸಿಗೆಯಲ್ಲಿ ಸೈನಿಕ ಹುಳುಬಾಧೆ, ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಜೋಳ ಬೆಳೆ ಕಳೆದುಕೊಂಡ ರೈತರೀಗ ಕಂದುಜಿಗಿ ಹುಳು ಬಾಧೆಯಿಂದ ಭತ್ತದ ಬೆಳೆಯನ್ನೂ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುವ ಆತಂಕದಲ್ಲಿದ್ದಾರೆ. ಭತ್ತದ ಬೆಳೆಯಿಂದ ಲಾಭ ಕಡಿಮೆ. ಹೀಗಾಗಿ ಹೆಚ್ಚು ಬೆಲೆಯ ಕೀಟನಾಶಕ ಸಿಂಪಡಿಸುವುದು ಕಷ್ಟಸಾಧ್ಯ. ಸಾಮಾನ್ಯ ಕೀಟನಾಶಕಗಳನ್ನು ಸಿಂಪಡಿಸುವುರಿಂದ ಹತೋಟಿ ಸಾಧ್ಯವಿಲ್ಲ. ಹೀಗಾಗಿ ಕೃಷಿ ಇಲಾಖೆ ರಿಯಾಯಿತಿ ದರದಲ್ಲಿ ಪರಿಣಾಮಕಾರಿ ಗುಣಮಟ್ಟದ ಕೀಟನಾಶಕವನ್ನು ಒದಗಿಸಿ ರೈತರ ಹಿತ ಕಾಯಬೇಕಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದುಜಿಗಿ ಹುಳು ಬಾಧೆ…

Read More

ಸಾಲಭಾದೆಗೆ ಬೇಸತ್ತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ|TTH

ಸಾಲಭಾದೆಗೆ ಬೇಸತ್ತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಸಾಲ ಬಾಧೆಯಿಂದ ಬೇಸತ್ತು ಮಹಿಳೆಯೊಬ್ಬಳು ತುಂಗಾ ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆಯಿಂದ ಹಾರಿದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಲದ ಕಿರಿಕಿರಿ ತಾಳಲಾರದೇ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿಯ ಕೋಡಿಗೆಹಳ್ಳಿ ಮೂಲದ ಲತಾಮಣಿ(44) ಮೃತ ಮಹಿಳೆಯಾಗಿದ್ದಾಳೆ. ಸ್ಥಳದಲ್ಲಿ ಲತಾಮಣಿ ಡೆತ್ ನೋಟ್ ಮತ್ತು ಕೆಲ ದಾಖಲೆಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆಯ ಆಧಾರ್ ಕಾರ್ಡ್,…

Read More

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university

ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ…

Read More

ಮಂಜುನಾಥ ಗೌಡರನ್ನು ನಂಬಿ ನಾನು ಹಾಳಾದೆ – ಮಂಜುನಾಥ್ ಪೂಜಾರಿಯಿಂದ ಹೇಳಿಕೆ

ಶಿವಮೊಗ್ಗ : ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ಅವರ ನಡುವಿನ ಒಳಜಗಳ ಈಗ  ಮತ್ತೊಂದು ಹೊಸ ರೂಪ ಪಡೆದಿದೆ. ಹೆಗಲತ್ತಿಯ ತೋಟದ ಕೊಪ್ಪದ ಮಂಜುನಾಥ್ ಪೂಜಾರಿ ಮಾತನಾಡುತ್ತಾ ನಾನು ಮಂಜುನಾಥ್ ಗೌಡರ ಕೈಗೊಂಬೆಯಾಗಿದ್ದೇನೆ,ಅವರ ಶಿಷ್ಯ ದಿನೇಶ್ ನನ್ನನು ಕಿಡ್ನಾಪ್ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್ ಪೂಜಾರಿ ಆರ್.ಎಂ.ಮಂಜುನಾಥ್ ಗೌಡರು ನನ್ನನ್ನ ಬಳಸಿಕೊಂಡು ಕಿಮ್ಮನೆ ರತ್ನಾಕರ್ ಅವರ ಬಗರ್ ಹುಕುಂ ಹೋರಾಟವನ್ನ ಮೊಟಕುಗೊಳಿಸುವ ಪ್ರಯತ್ನ…

Read More

ಹೆತ್ತ ತಾಯಿಯ ಮನೆಯಲ್ಲಿಯೇ ಕಳ್ಳತನ ಮಾಡಿದ ಮಗ – ಬಂಧನ|Theft

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗೋಪಾಳದ ಶ್ರೀರಾಮನಗರದ ಗಿರೀಶ್ ಅಲಿಯಾಸ್ ಸುಣ್ಣ ಬಂಧಿತ ಮನೆ ಕಳ್ಳ. ಆರೋಪಿಯು ತನ್ನ ತಾಯಿ ಮನೆಯಲ್ಲಿಲ್ಲದ ವೇಳೆ ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಗಿರೀಶ್​ ತಾಯಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗಿರೀಶ್​​ ಕದ್ದಿರುವ ಅನುಮಾನದಿಂದ ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ. ಈತ ಹಮಾಲಿ ಕೆಲಸ ಮಾಡುತ್ತಿದ್ದು,…

Read More

ರಾಜ್ಯದಲ್ಲಿ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಎರಡು ಮಕ್ಕಳ ಯೋಜನಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಉತ್ತರ ಪ್ರದೇಶ ರಾಜ್ಯ ಸರ್ಕಾರ ಕುಟುಂಬಕ್ಕೆ 2 ಮಕ್ಕಳು ಇರಬೇಕು ಎಂಬ ತೀರ್ಮಾನ ಮಾಡಿದ್ದನ್ನು ನಾನು ಗಮನಿಸಿದ್ದೇನೆ. ರಾಜ್ಯದಲ್ಲಿ ಏನು ಮಾಡ್ಬೇಕು ಎಂದು ಸಿಎಂ ನೇತೃತ್ವದಲ್ಲಿ ಕುಳಿತು ಚರ್ಚೆ,ಯೋಚನೆ ಮಾಡುತ್ತೇವೆ.ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಾ ಹೋಗ್ತಾನೆ ಇದೆ. ಅದನ್ನು ಕಡಿಮೆ ಮಾಡಲು ಬಹಳ ವರ್ಷದಿಂದ ಕೇಂದ್ರ ಸರಕಾರಗಳು ಎಲ್ಲಾ ಪ್ರಯತ್ನ ಮಾಡುತ್ತಿದೆ. ಅದ್ರೇ, ಯಾವುದೇ ಪ್ರಯೋಜನವಾಗುತ್ತಿಲ್ಲ, ಇದರಿಂದ ಬಡತನ, ನಿರುದ್ಯೋಗ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ದೇಶ ಸಂಪದ್ಭರಿತವಾಗಬೇಕಾದರೆ ಜನಸಂಖ್ಯೆ ನಿಯಂತ್ರಣ…

Read More

ಅದ್ದೂರಿಯಾಗಿ ಜರುಗಿದ ಕೆಂಚನಾಲ ಉರೂಸ್ ಕಾರ್ಯಕ್ರಮ :

ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರಾದ ಮೊಹಮ್ಮದ್ ಝುಲ್ಪಿಕರ್ ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು.ಈ ಸಂಧರ್ಭದಲ್ಲಿ ಶಿವಮೊಗ್ಗದ ಮುರ್ಷದ್ ರವರು ಸಂದಲ್ ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್ ಮೆರವಣಿಗೆಗೆ ರಂಗು ತಂದರು.ನೂರಾರು ಭಕ್ತಾದಿಗಳು…

Read More