ಸಿದ್ದರಾಮಯ್ಯ ನಿವಾಸಕ್ಕೆ ಬಂಗಾರಪ್ಪ ಪುತ್ರರ ಭೇಟಿ..! ಇಬ್ಬರ ನಡುವೆ ಸಂಧಾನಕ್ಕೆ ಸಿದ್ದವಾಗಿದೆಯಾ ವೇದಿಕೆ ??
ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿಯಿರುವ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಇಂದು ಭೇಟಿ ನೀಡಿದರು. ಇದಾದ ಅರ್ಧ ಗಂಟೆ ಬಳಿಕ ಕುಮಾರ್ ಬಂಗಾರಪ್ಪ ಕೂಡ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ. ವಿಜಯದಶಮಿ ಪ್ರಯುಕ್ತ ಸಿದ್ದರಾಮಯ್ಯಗೆ ಶುಭಕೋರಲು ಮಧು ಬಂಗಾರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದರು. ಇದೇ ವೇಳೆ ಕುಮಾರ್ ಬಂಗಾರಪ್ಪ ಕೂಡ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಅಣ್ಣ-ತಮ್ಮನ ಸಂಧಾನಕ್ಕೆ ಮುಂದಾದರ ಎಂಬ ಪ್ರಶ್ನೆ ಮೂಡಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ, ನನ್ನ ಮಗಳ ಮದುವೆ…