ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ|church
ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ ರಿಪ್ಪನ್ಪೇಟೆ : ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಶಿವಮೊಗ್ಗ ಮಲ್ಟಿಪಲ್ ಸೋಷಿಯಲ್ ಸರ್ವಿಸ್ ನಿರ್ದೇಶಕರಾದ ಧರ್ಮಗುರು ರೋಷನ್ ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ ಅವರು ಸಮಾಜದಲ್ಲಿನ ಪ್ರತಿಯೊಬ್ಬರು ಪ್ರೀತಿಯನ್ನು…