ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ – ಪೊಲೀಸ್ ಠಾಣೆ ಮುಂದೆಯೇ ಮಲಗಿದ ಕಿಮ್ಮನೆ : ಅಹೋರಾತ್ರಿ ಪ್ರತಿಭಟನೆ|kimmane
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ v/s ಕಾಂಗ್ರೆಸ್ ಎಂಬ ಪರಿಸ್ಥಿತಿ ಬಂದಿದೆ. ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತಿದ್ದಾರೆ. ಮಂಗಳವಾರ ನಡೆದ ಹರೀಶ್ ಮೇಲಿನ ಹಲ್ಲೆ ಕೇಸ್ನಲ್ಲಿ ಪೊಲೀಸರು ಘಟನಾ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ ಕಿಮ್ಮನೆ ರತ್ನಾಕರ್ ನೇರವಾಗಿ ಬಂದು ಪೊಲೀಸ್ ಠಾಣೆ ಎದುರು ಧರಣಿ ಕೂತರು, ಅಲ್ಲಿಯೇ ಜಮಖಾನ ತರಿಸಿ…


