Headlines

ಶಿರಾಳಕೊಪ್ಪದಲ್ಲಿ ಕಿಡಿಗೇಡಿಗಳ ಅಟ್ಟಹಾಸ – ನಿಷೇಧಿತ ಸಂಘಟನೆಯ ಗೋಡೆ ಬರಹ|shiralakopppa

ಮಲೆನಾಡಿನ ಹೆಬ್ಬಾಗಿಲಲ್ಲಿ ಮತ್ತೆ ಕಿಡಿಗೇಡಿ ಕೃತ್ಯ ಕಂಡು ಬಂದಿದೆ. ಶಾಂತವಾಗಿದ್ದ ಶಿವಮೊಗ್ಗದಲ್ಲಿ ‘ಜಾಯಿನ್ ಸಿಎಫ್‌ಐ’ ಎನ್ನುವ ಗೋಡೆ ಬರೆದು ಸಮಾಜದ ಸ್ವಾಸ್ಥ್ಯ ಕದಡಲು ಕಿಡಿಗೇಡಿಗಳು ಮುಂದಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ವಿವಿಧ ಕಡೆಗಳಲ್ಲಿ ಕಿಡಿಗೇಡಿಗಳು ಜಾಯಿನ್ ಸಿಎಫ್‌ಐ ಎಂಬ ಗೋಡೆ ಬರಹ ಬರದಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲೆಲ್ಲಿ ಗೋಡೆ ಬರಹಗಳು? ಹಳೆಯ ಪೆಟ್ರೋಲ್ ಬಂಕ್ ಪಕ್ಕದ ಕಂಬ, ಭೋವಿ ಕಾಲೋನಿಗೆ ಹೋಗುವ ರಸ್ತೆಯಲ್ಲಿ ವಿದ್ಯುತ್ ಕಂಬ,…

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More

ಸಾಗರದ ಬಳಿ ಹೊಸನಗರದ ಓಮಿನಿ‌ ಕಾರು ಅಪಘಾತ – ಜಖಂಗೊಂಡ ಕಾರಿನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯ ಜೀವ ಉಳಿಸಿದ 112 ಸಿಬ್ಬಂದಿ|Accident

ಹೊಸನಗರದಿಂದ ಕುಮುಟಾ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು  ಆಕ್ಸಿಡೆಂಟ್​ ಆಗಿ, ಜಖಂ ಆದ ವಾಹನದಲ್ಲಿ ಸಿಲುಕಿ ನರಳುತ್ತಿದ್ದ ವ್ಯಕ್ತಿಯನ್ನು 112 ಸಿಬ್ಬಂದಿ ಕಾಪಾಡಿದ್ಧಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ನಿನ್ನೆ ಬೆಳಗ್ಗಿನ ಜಾವ ಸಾಗರ ತಾಲ್ಲೂಕಿನ ಶಿರವಂತೆ ಬಳಿ ಅಪಘಾತವೊಂದು ಸಂಭವಿಸಿತ್ತು. ಹೊಸನಗರ ಮೂಲದ ಪ್ರವೀಣ್ ಓಮಿನಿ ಕಾರಿನಲ್ಲಿ  ಕುಮಟಾಕ್ಕೆ ಹೋಗುತ್ತಿದ್ದ ಸಂಧರ್ಭದಲ್ಲಿ ಅಪಘಾತವಾಗಿತ್ತು. ತಕ್ಷಣ ಸ್ಥಳೀಯರು 112 ಸಿಬ್ಬಂದಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಚಾರ ಕೇಳಿ ತಕ್ಷಣ…

Read More

ಡಾ.ಧನಂಜಯ್ ಸರ್ಜಿ ಹಾಗೂ ಕೆ ಎಸ್ ಪ್ರಶಾಂತ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ|BJP

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷ ಸೇರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಶಿವಮೊಗ್ಗದ ಖ್ಯಾತ ವೈದ್ಯ ಡಾ. ಧನಂಜಯ ಸರ್ಜಿ ಬಿಜೆಪಿ ಸೇರಿದರು. ಭಾನುವಾರ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಧನಂಜಯ ಸರ್ಜಿ ಹಾಗೂ ಸಾಗರದ ಯುವ ರಾಜಕಾರಣಿ ಕೆ. ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಶಾಸಕ ಕೆ. ಎಸ್. ಈಶ್ವರಪ್ಪ, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮುಂತಾದವರು ಉಪಸ್ಥಿತಿಯಲ್ಲಿ ಅವರು ಪಕ್ಷ…

Read More

ದ್ವಿತೀಯ ಪಿಯುಸಿ ಪೂರ್ವಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ|PUC

ಶಿವಮೊಗ್ಗ ಜಿಲ್ಲೆಯ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು  ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರ ವಹಿಸುವ  ಪದವಿ ಪೂರ್ವ ಶಿಕ್ಷಣ ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶಿಯಾಗಲಿದೆ.  2023 ಜನವರಿ 18 ರಿಂದ ಜನವರಿ 29ರ ತನಕ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ.

Read More

ಶಂಕಿತ ಭಯೋತ್ಪಾದಕ ಶಾರೀಕ್ ಸಹಚರರ ಮಾಹಿತಿ ಸಂಗ್ರಹಕ್ಕೆ ಶಿವಮೊಗ್ಗಕ್ಕೆ NIA ತಂಡ ಭೇಟಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಮೂರು ತಿಂಗಳ ಹಿಂದೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ನ ಸಹಚರರಾದ ಮಾಜ್ ಮುನೀರ್ ಅಹಮದ್ ಮತ್ತು ಶಿವಮೊಗ್ಗದ ಸಯ್ಯದ್…

Read More

ಗಡಿಪಾರು ಆದೇಶಕ್ಕೆ ಹೆದರಿ ವಿಷ ಸೇವಿಸಿದ್ದ ತೀರ್ಥಹಳ್ಳಿಯ ರೌಡಿ ಶೀಟರ್ ಕೋಬ್ರಾ ಸುಹೈಲ್ ಸಾವು|cobra suhail

ತೀರ್ಥಹಳ್ಳಿ : ಹಲವಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸ್‌ ಇಲಾಖೆಯಿಂದ ಗಡಿಪಾರು ಆದೇಶ ಪಡೆದಿದ್ದ ತೀರ್ಥಹಳ್ಳಿಯ ಸುಹೇಲ್ ಕೋಬ್ರಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸುಹೇಲ್ ವಿರುದ್ದ ತೀರ್ಥಹಳ್ಳಿ ಹಾಗು ಮಾಳೂರು ಠಾಣೆಯಲ್ಲಿ ಹಲವು ಕ್ರಿಮಿನಲ್ ‌ಪ್ರಕರಣ ದಾಖಲಾಗಿದ್ದವು. ಈತನ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಇಲಾಖೆ ಎರಡು ವರ್ಷಗಳ ಅವಧಿಗೆ ಜಿಲ್ಲೆಯಿಂದ ಗಡಿಪಾರು ಮಾಡಿತ್ತು. ನವೆಂಬರ್‌ 25 ರಂದು ಗಡಿಪಾರು ಆದೇಶವನ್ನು ಜಾರಿ ಮಾಡಿ ಆತನ ಮನೆಗೆ ನೋಟಿಸ್‌ ಕಳುಹಿಸಲಾಗಿತ್ತು. ಈ ಗಡಿಪಾರು ಆದೇಶಕ್ಕೆ ಬೆದರಿದ್ದ ಸುಹೇಲ್‌ ಅಂದೇ…

Read More

ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ತಂಡವನ್ನು ದರೋಡೆ ಮಾಡಿದ ಖತರ್ ನಾಕ್‌ ಗ್ಯಾಂಗ್ – ಆರೋಪಿಗಳನ್ನು ಬಂಧಿಸಿದ ಪೊಲೀಸರು|Robbery

ಸ್ನೇಹಿತರೊಂದಿಗೆ ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ಸ್ಥಳಕ್ಕೆ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದ 12 ಜನರ ಖತರ್ ನಾಕ್ ಗ್ಯಾಂಗ್ ಆ ದಿನ ಹುಟ್ಟುಹಬ್ಬ ಸಂಭ್ರಮದಲ್ಲಿ ನೆರೆದಿದ್ದವರನ್ನೆಲ್ಲಾ ಲೂಟಿ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರು ಜನ ಆರೋಪಿಗಳನ್ನು ಪತ್ತೆಹಚ್ಚಿ ಹೆಡೆಮುರಿ‌ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಸಾರಾಂಶ : 13-11-2022 ರಂದು ಸಂಜೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಬೆನವಳ್ಳಿ ಗ್ರಾಮದ…

Read More

ನಾಯಿಯನ್ನು ಭೇಟೆಯಾಡಲು ಬಂದ ಚಿರತೆ ಬೋನಿಗೆ ಬಿತ್ತು – ಅಂತೂ ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆಯನು ಸೆರೆ ಹಿಡಿದ ಅರಣ್ಯ ಇಲಾಖೆ|Leopard

ಹಲವು ದಿನಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ  ಭದ್ರಾವತಿ ತಾಲೂಕು  ಹರಮಘಟ್ಟ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದ್ದು ಚಿರತೆಯನ್ನ ನೋಡಲು ಜನ ಸಾಗರವೇ ಹರಿದು ಬಂದಿದೆ. ಸುಮಾರು 15 ದಿನಗಳ ಹಿಂದೆ 3 ಹಸುಗಳನ್ನ‌ ಭೇಟೆಯಾಡಿದ್ದ ಚಿರತೆ ಹಾವಳಿ ಗ್ರಾಮಸ್ಥರಲ್ಲಿ ಭಯವನ್ನ ಹುಟ್ಟಿಸಿತ್ತು. ಇದರಬೆನ್ನಲ್ಲೇ ಗ್ರಾಮಸ್ಥರು ಚಿರತೆಯನ್ನ ಹಿಡಿಯಲು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಹರಮಘಟ್ಟದ 200 ಮೀಟರ್ ವ್ಯಾಪ್ತಿಯಲ್ಲಿ ಬೋನು ಇಟ್ಟು ಅದರಲ್ಲಿ ನಾಯಿಯನ್ನ ಇಡಲಾಗಿತ್ತು….

Read More

ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ – ಓರ್ವ ಆಸ್ಪತ್ರೆಗೆ ದಾಖಲು|Accident

ಕುಂಸಿ ಸಮೀಪದ ತುಪ್ಪೂರು ಬಳಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು ಅಪಘಾತದಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕುಂಸಿ ಸಮೀಪದ ತುಪ್ಪೂರು ತಿರುವಿನಲ್ಲಿ ಶಿವಮೊಗ್ಗದಿಂದ ಸಾಗರದ ಕಡೆಗೆ ಬರುತಿದ್ದ ಪ್ರಕಾಶ್ ಟ್ರಾವೆಲ್ಸ್ (KA 51 AB 0913) ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಮಾರುತಿ ಸ್ವಿಫ್ಟ್ (KA 18 Z 0329) ಕಾರಿನ ನಡುವೆ ಅಪಘಾತ ನಡೆದಿದ್ದು ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ವ್ಯಕ್ತಿಗೆ ತಲೆಗೆ ತೀವ್ರತರವಾದ ಪೆಟ್ಟಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ…

Read More
Exit mobile version