ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬದ ಮೂಲಗಳು  ತಿಳಿಸಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಸಹೋದರಿಗೆ ಮೊದಲು ಕೆಎಫ್…

Read More

ದೇವರ ಮೊರೆಹೋದ ಶರಾವತಿ ಸಂತ್ರಸ್ಥರು : ಕಲ್ಲುಕೊಪ್ಪ ದಿಂದ ಧರ್ಮಸ್ಥಳದ ವರೆಗೆ ಪಾದಯಾತ್ರೆ !

ತೀರ್ಥಹಳ್ಳಿ : ತಾಲೂಕಿನಾದ್ಯಂತ ಇತ್ತೀಚಿಗೆ ಅತೀ ಹೆಚ್ಚು ಸುದ್ದಿ ಮಾಡಿದ್ದೂ ಎಂದರೆ ಅದು ಶರಾವತಿ ಸಂತ್ರಸ್ತರ ಹೋರಾಟ. ಹೌದು ಈಗಾಗಲೇ ತಾಲೂಕಿನ ಹಣಗೇರೆ ಕಟ್ಟೆ ಸಮೀಪ ಕಲ್ಲುಕೊಪ್ಪದಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ಮಾಡಿ ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಶರಾವತಿ ಮುಳುಗಡೆ ಸಂತ್ರಸ್ತರು ಈಗ ದೇವರ ಮೊರೆ ಹೋಗಿದ್ದಾರೆ.   ಕಲ್ಲುಕೊಪ್ಪದಿಂದ ಸುಮಾರು 21 ಜನ  ಧರ್ಮಸ್ಥಳಕ್ಕೆ ಕಾಲ್ನಡಿಗೆ ಮೂಲಕ ಪಾದಯಾತ್ರೆ ಸಂಚರಿಸಲಿದ್ದಾರೆ. ಬರಿ ಕಾಲಿನಲ್ಲಿ ಅಂದಾಜು 200 ಕಿ ಮೀ ನೆಡೆದು ಧರ್ಮಸ್ಥಳದ  ಮಂಜುನಾಥನಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.  ಸಂಕ್ಲಾಪುರ ಮತ್ತು…

Read More

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿಯ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ಮತದಾರನ ಮನೆ ಬಾಗಿಲು ಬಡಿಯುವುದು ಯಾಕೆ – ಯಡೂರು ರಾಜಾರಾಂ|JDS

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ತಮ್ಮ ಕಾರ್ಯಕರ್ತರ ಮೂಲಕ ಮತದಾರನ ಮನೆ ಬಾಗಿಲು ತಟ್ಟುವುದು ಯಾಕೆ ಎಂದು  ಜೆಡಿಎಸ್ ಪಕ್ಷದ ಅಭ್ಯರ್ಥಿ ಯಡೂರು ರಾಜಾರಾಂ ಪ್ರಶ್ನೆ ಮಾಡಿದರು. ಹುಂಚಾ ಹೋಬಳಿ ವ್ಯಾಪ್ತಿಯ ಹುಂಚ, ಹೆದ್ದಾರಿಪುರ, ಕೋಡೂರು, ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿ ಕಲ್ಲೂರು ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ,ಸಚ್ಚಾರಿತ್ರ್ಯದ ನಾಟಕವಾಡುವ ಇಬ್ಬರು ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಚುನಾವಣೆಯ ಹಿಂದಿನ…

Read More

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಾಣವಾಗುತಿದ್ದು ಈ ಮಾಫಿಯಾದಲ್ಲಿ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಪಟ್ಟಣದ ಗ್ರಾಪಂ ಹಿರಿಯ ಸದಸ್ಯ ಜಿ ಡಿ ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ಗ್ರಾಪಂ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಹಳಷ್ಟು ಬೆಳೆಯುತ್ತಿರುವುದರಿಂದ ನಗರ ಭಾಗದಲ್ಲಿ…

Read More

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ A woman police officer in Shikaripura lost Rs 6.78 lakh in an online fraud after opening a fake RTO challan APK file sent to her mobile phone. A case has been registered at Shivamogga CEN Police Station. ಶಿಕಾರಿಪುರ : ಆನ್‌ಲೈನ್ ವಂಚಕರು RTO ಚಲನ್…

Read More

ಸೇವಾ ನಿವೃತ್ತಿ ಹೊಂದಿದ ಆರ್. ಉಮೇಶ್ ರವರ ಸೇವೆ ಎಲ್ಲರಿಗೂ ಪ್ರೇರಣೆ : ಜೇನಿ ಗ್ರಾ.ಪಂ ಅಧ್ಯಕ್ಷೆ ಶಾರದಾ

ರಿಪ್ಪನ್ ಪೇಟೆ : ಇಲ್ಲಿನ ಚಿಕ್ಕಜೇನಿ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ಉತ್ತಮ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ  ಹೊಂದಿದ  ಆರ್ ಉಮೇಶ ರವರ ಸೇವೆ ಪ್ರಶಂಸನೀಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಶಾರದಾ ರವರು ಹೇಳಿದರು. ಅವರು ಶುಕ್ರವಾರ ಇಲ್ಲಿಗೆ ಸಮೀಪದ ಚಿಕ್ಕಜೇನಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿ ನಿವೃತ್ತರಾದ ಆರ್. ಉಮೇಶ್ ರವರಿಗೆ ಸನ್ಮಾನಿಸಿ ನೀಡಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹೇಳಿದರು.  ತಾಲ್ಲೂಕಿನಲ್ಲಿಯೇ ಪ್ರೌಢಶಾಲೆಗೆ ಒಳ್ಳೆಯ ಹೆಸರು ತರುವಲ್ಲಿ ಉಮೇಶ್ ಅವರ ಪಾತ್ರ ಮಹತ್ವದ್ದು ಎಂದು ಹೇಳಿದರು.  ಕ್ಷೇತ್ರ…

Read More

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಒಂದಿಲ್ಲೊಂದು ಸುದ್ದಿಯಿಂದ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವುದು ತಿಳಿದಿರುವ ಸಂಗತಿಯಾಗಿದೆ ಇದೀಗ ಈ ಪುಟ್ಟ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ ಕ್ರೂರ ಸ್ವಭಾವದ ವ್ಯಕ್ತಿಯೊಬ್ಬರ ಮೇಲೆ…

Read More

ಸಹಕಾರಿ ಸಂಸ್ಥೆಗಳಿಂದ ರೈತರ ಬದುಕು ಹಸನಾಗಿದೆ – ಹರತಾಳು ಹಾಲಪ್ಪ|inauguration

ಸಹಕಾರಿ ಸಂಸ್ಥೆಗಳಿಂದ ರೈತರ ಬದುಕು ಹಸನಾಗಿದೆ : ಹಾಲಪ್ಪ ರಿಪ್ಪನ್‌ಪೇಟೆ : ಸಹಕಾರಿ ಸಂಘ ಸಂಸ್ಥೆಗಳಿಂದ ಗ್ರಾಮೀಣ ಭಾಗದ ರೈತ ಕುಟುಂಬದ ಬದುಕು ಹಸನಾಗಿದೆ ಎಂದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.  ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಎರಡು ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಹಾಗೂ ೮೫ ಲಕ್ಷದ ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿರುವ ಬಹುಸೇವಾ ವಾಣಿಜ್ಯ ಗೋದಾಮು ಹಾಗೂ ೪ನೇ ವರ್ಷದ ಜಿಲ್ಲಾ ಮಟ್ಟದ…

Read More

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ – ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ  ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ. ಆಗುಂಬೆ ಘಾಟಿಯ ಪ್ರದೇಶದಲ್ಲಿ ಸಂಜೆ ಬಿರುಸಿನ ಗಾಳಿ ಮತ್ತು ಮಳೆಗೆ ಒಂದು ದೊಡ್ಡ ಮರ ರಸ್ತೆ ಮೇಲೆ ಬಿದ್ದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169A–ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುದೀರ್ಘ ಸಮಯದವರೆಗೆ ಉಡುಪಿ ಮತ್ತು…

Read More

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗದ ಯುವಕನಿಗೆ ₹2.66 ಲಕ್ಷ ವಂಚನೆ

ಕ್ರಿಪ್ಟೋ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗ ಯುವಕನಿಗೆ ₹2.66 ಲಕ್ಷ ವಂಚನೆ ಶಿವಮೊಗ್ಗ: ಕ್ರಿಪ್ಟೋ ಕರೆನ್ಸಿ ಹೂಡಿಕೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ಶಿವಮೊಗ್ಗದ ಯುವಕನೊಬ್ಬನಿಂದ ₹2,66,069 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಯುವಕ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 2ರಂದು ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿದೆ. ತಮ್ಮನ್ನು “Live Trading” ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡ ವಂಚಕರು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು…

Read More