Headlines

ಉಳ್ಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – ಗಾಯಾಳುಗಳು ಆಸ್ಪತ್ರೆಗೆ ದಾಖಲು

ಸಾಗರ ತಾಲೂಕಿನ ಉಳ್ಳೂರಿನ ಹೆದ್ದಾರಿಯ ರಸ್ತೆಯಲ್ಲಿ KSRTC ಬಸ್ ಪಲ್ಟಿಯಾದ ಘಟನೆ ನಡೆದಿದೆ.ಬಸ್ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ವೇಳೆ ಈ ಘಟನೆ ನಡೆದಿದೆ. ಉಳ್ಳೂರು ರಸ್ತೆಯ ತಿರುವಿನ ಬಳಿ ಬೈಕ್ ಒಂದು ಅಡ್ಡ ಬಂದಿದ್ದು ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ತಿರುವು ತೆಗೆದುಕೊಂಡಿದ್ದಾರೆ. ಆದರೆ ರಸ್ತೆಯ ಮೇಲೆ ಮಣ್ಣು ಇದ್ದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದ 20 ಜನರಿಗೆ…

Read More

ಖಾಸಗಿ ಆಸ್ಪತ್ರೆಯ ವೈದ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ|sucide

ಶಿವಮೊಗ್ಗ ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಲೋಲಿತ್ (40) ನೇಣು ಬಿಗಿದ ಸ್ಥಿತಿಯಲ್ಲಿ ತಮ್ಮ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅವರ ಸಾವಿಗೆ ಅನಾರೋಗ್ಯದ ಕಾರಣ ತಿಳಿದು ಬಂದಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗುತಿದ್ದು ಪೊಲೀಸರ ತನಿಖೆಯ ನಂತರ ಕಾರಣ ತಿಳಿದುಬರಬೇಕಾಗಿದೆ. ತುಂಗನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More

ಹೊಸನಗರ ತಾಲೂಕಿನ ಮರಳು ಮಾಫ಼ಿಯಾದ ಗರ್ಭಗುಡಿ – “ರಿಪಬ್ಲಿಕ್ ಆಫ್ ಹರಿದ್ರಾವತಿ”

ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು,ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ “ರಿಪಬ್ಲಿಕ್ ಆಫ್ ಹರಿದ್ರಾವತಿ” ಅಧಿಪತ್ಯ ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹೌದು ಮಲೆನಾಡಿನಾದ್ಯಂತ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರು ಅಲ್ಪ ಮಟ್ಟಿಗೆ ಅದಕ್ಕೆ ಕಡಿವಾಣ ಹಾಕುವಲ್ಲಿ‌ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಯಶಸ್ವಿಯು ಆಗಿದೆ.ಆದರೆ ಹೊಸನಗರ ತಾಲೂಕಿನ ಹರಿದ್ರಾವತಿ ಎಂಬ ಸುಸಂಸ್ಕೃತ ಗ್ರಾಮದ ಶರಾವತಿ ಹಿನ್ನೀರಿನ ಕೆರೆಹಳ್ಳಿ ಪಾಯಿಂಟ್ ನಲ್ಲಿ ಸ್ಥಳೀಯ ಪ್ರಭಾವಿ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು ಇಡಲು ಆಗ್ರಹ:

ರಿಪ್ಪನ್ ಪೇಟೆ: ಶಿವಮೊಗ್ಗದಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ದೇಶದ ಪ್ರಧಾನಿಯಾಗಿ ರಾಜ್ಯದ ಕೀರ್ತಿಯನ್ನು ಇಡೀ ದೇಶಕ್ಕೆ ಪರಿಚಯಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು  ಇಡಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ರವರಿಗೆ ರಾಜ್ಯ ಜೆಡಿಎಸ್ ಮಾಜಿ ಪ್ರಧಾನಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. .                     …

Read More

ಕಾಡುಕೋಣಗಳ ದಾಳಿಗೆ ಕೈಗೆ ಬಂದ ಫಸಲು ಪ್ರಾಣಿಗಳ ಪಾಲು – ರೈತರ ಆಂತಕ|wild corner

ರಿಪ್ಪನ್‌ಪೇಟೆ : ಆರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ದಿಡೀರ್ ಪ್ರತ್ಯಕ್ಷವಾದ ಕಾಡುಕೋಣಗಳಿಂದಾಗಿ ರೈತರ ಭತ್ತದ ಗದ್ದೆ ಮತ್ತು ಅಡಿಕೆ ಬಾಳೆ ಕಾಡುಪ್ರಾಣಿಗಳ ಪಾಲಾಗುವಂತಾಗಿದ್ದು ರೈತರು ಅಂತಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ನಾಟಿ ಮಾಡಲಾದ ಭತ್ತದ ಫಸಲು ಕಟಾವಿಗೆ ಬಂದಿದ್ದು ರಾತ್ರಿ ಹೊತ್ತಿನಲ್ಲಿ ಕಾಡುಕೋಣ ಜಮೀನಿಗೆ ನುಗ್ಗಿ ಕಟಾವು ಮಾಡಲಾದ ಭತ್ತ ಭೂಮಿ ತಾಯಿಯ ಪಾಲಾಗುವಂತಾಗಿದೆ.ಅಲ್ಲದೆ ಆಡಿಕೆ ಗಿಡಗಳನ್ನು ಮುರಿದು ಹಾಕಿ ಬಾಳೆ ಸಹ ಕೈಗೆ ಸೀಗದಂತಾಗಿ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಇAದು…

Read More

ವಿದ್ಯಾರ್ಥಿಗಳ ಅನುಪಸ್ಥಿತಿ ಇದ್ದರೂ ಶಾಲೆಗಳು ಸ್ವಾತಂತ್ರ್ಯೋತ್ಸವ ಆಚರಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಈ ಆಚರಣೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮುಖ್ಯಸ್ಥರಿಗೆ ಸೂಚಿಸಿದೆ.   ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು ರೆಕಾರ್ಡ್ ಮಾಡಿಕೊಂಡು ಆನ್ ಲೈನ್ ಮೂಲಕ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ….

Read More

ರಿಪ್ಪನ್‌ಪೇಟೆ : ದಂಡದ ಬದಲು ಇನ್ಸೂರೆನ್ಸ್ ಮಾಡಿಸಿದ ಪೊಲೀಸರು

ರಿಪ್ಪನ್‌ಪೇಟೆ :  ಇಂದು ಪಟ್ಟಣದ ಪೊಲೀಸರು ಬೈಕ್ ಸವಾರರಿಗೆ ಅವಶ್ಯಕ ದಾಖಲೆಗಳ ಬಗ್ಗೆ ವಿನೂತನವಾಗಿ ಚುರುಕು ಮುಟ್ಟಿಸುವ ಕಾರ್ಯಾಚರಣೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದ ತಂಡ ಇಂದು ಪಟ್ಟಣದಲ್ಲಿ ವಾಹನಗಳನ್ನು ತಡೆ ಹಿಡಿದು ಸಾವಿರ ದಂಡ ಕಟ್ಟುವ ಬದಲು ಸಾವಿರ ರೂಪಾಯಿಯಲ್ಲೇ ಇನ್ಸೂರೆನ್ಸ್ ಮಾಡಿಸಿ ಎಂದು ಸವಾರರಿಗೆ ಬುದ್ದಿ ಹೇಳಿ ಸ್ಥಳದಲ್ಲಿಯೇ ಇನ್ಸೂರೆನ್ಸ್ ಹಾಕಿಸಿ ಕಳುಹಿಸುತ್ತಿದ್ದ ದೃಶ್ಯ ಕಂಡುಬಂದಿತ್ತು. ಪೊಲೀಸರು ವಾಹನ ಅಡ್ಡ ಹಾಕಿದ್ರೆ ಸಾಕು, ಲೈಸೆನ್ಸ್ ಎಲ್ಲಿ, ಆರ್.ಸಿ. ಕೊಡು, ಎಮಿಷನ್…

Read More

ಬ್ಯಾಂಕ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆ | Crime News

ಬ್ಯಾಂಕ್ ಲೋನ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು  ದರೋಡೆ | Crime News ಬ್ಯಾಂಕ್ ಲೋನ್ ಸಿಬ್ಬಂದಿ ಎಂದು ಹೇಳಿಕೊಂಡು ಮನೆಗೆ ಬಂದ ಕಳ್ಳರ ತಂಡ ನೀರು ಕೇಳುವ ನೆಪದಲ್ಲಿ ದರೋಡೆ ಮಾಡಿರುವ ಘಟನೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಸೋಮವಾರ ಸುಮಾರು  01:15 ಗಂಟೆ ಸಮಯದಲ್ಲಿ ಯಾರೋ ಎರಡು ಜನ ಅಪರಿಚಿತರು ಮನೆಯ ಕಾಂಪೌಂಡ್‌ ಚಿಲಕವನ್ನು ತಗೆದು  ಒಳಬಂದಿದ್ದಾರೆ. ಮನೆಗೆ ಬಂದ ಅಪರಿಚಿತರನ್ನು ದೂರುದಾರರು ಯಾರು…

Read More

Crime News – ಅಡಿಕೆ ಮಂಡಿ ವರ್ತಕನ ಪತ್ನಿ ನೇಣಿಗೆ ಶರಣು

ಶಿವಮೊಗ್ಗ ನಗರದ ಅಡಿಕೆ ಮಂಡಿ ವರ್ತಕರೊಬ್ಬರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಅಡಿಕೆ ಮಂಡಿ ವರ್ತಕ ಪ್ರಶಾಂತ್‌ ಎನ್ನುವವರ ಪತ್ನಿ ಶ್ವೇತಾ (40) ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಡಿಯ ಕೋಣೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಇನ್ನು ಸಾವಿಗೆ ಪತಿಯ ಸಾಲ ಹಾಗೂ ಜಮೀನು ಮಾರಾಟದ ವಿಷಯವೇ ಕಾರಣ ಎಂದು ಹೇಳಲಾಗುತ್ತಿದೆ.  ಸಂಸಾರದಲ್ಲಿ ಅದೇನು ಕಲಹವಿತ್ತೋ ಗೊತ್ತಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕುರಿತು…

Read More

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!ಪೊಲೀಸರು ರಣರೋಚಕ ಕೇಸ್ ಪತ್ತೆಹಚ್ಚಿದ್ದು ಹೇಗೆ!? ತೀರ್ಥಹಳ್ಳಿ : ಅವರಿಬ್ಬರು ಪರಸ್ಪರ ಪರಿಚಯಸ್ಥರು ಮಾತ್ರವಲ್ಲದೆ ಸಂಬಂಧಿಕರು ಕೂಡ ಆಗಿದ್ದರು. ಅವರ ನಡುವೆ ಸಹಜವಾದ ಸಲಿಗೆ ಕೂಡ ಇತ್ತು. ಇತ್ತೀಚಿಗೆ ನಡೆದ ಕೆಲವು ಘಟನೆಗಳು ಅವರಿಬ್ಬರ ನಡುವೆ ಕಂದಕವನ್ನು ಸೃಷ್ಟಿ ಮಾಡಿದ್ದಲ್ಲದೆ ಈ ಕಂದಕವೇ ಇದೀಗ ಒಬ್ಬರ ಜೀವ ತೆಗೆಯುವಂತೆ ಮಾಡಿದೆ. ಇನ್ನು ಪೊಲೀಸರ ಅತಿಥಿ ಆಗಿರುವ ಆತ ಸಾಮಾನ್ಯ ಆಸಾಮಿಯನಲ್ಲ, ಕೊಲೆ…

Read More