ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದವರಿಂದ ಹಲ್ಲೆ: ಪ್ರಕರಣ ದಾಖಲು

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದ ಸದಸ್ಯರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ವಿಭಜನೆ ಬಿಕ್ಕಟ್ಟು ದಿನಕಳೆದಂತೆ ಹೆಚ್ಚಾಗುತ್ತಿದೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಭಹಿಷ್ಕಾರ, ಹಲಾಲ್ ಕಟ್-ಜಟ್ಕಾ ಕಟ್ ವಿವಾದಗಳು ಒಂದಾದ ಮೇಲೊಂದರಂತೆ ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿವೆ. ಇದರ ಬೆನ್ನಲ್ಲೆ ಹಲಾಲ್ ಮಾಂಸ ಮಾರಾಟಗಾರನ ಮೇಲೆ ಹಲ್ಲೆ ಮಾಡಿರುವುದು ಹಿಂಸಾಚಾರವನ್ನು ಭುಗಿಲೇಳಲಿದೆ. ಇದಕ್ಕೆ ಬಿಜೆಪಿ ಪ್ರಚೋದನೆ ನೀಡುತ್ತಿದೆ ಎನ್ನುವ ಆರೋಪಗಳನ್ನು ವಿಪಕ್ಷಗಳು ಮಾಡುತ್ತಿವೆ. ಹೀಗಾಗಿ ರಾಜ್ಯದಲ್ಲಿ ಧಾರ್ಮಿಕ…

Read More

ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಶಾಸಕ ಆರಗ ಜ್ಞಾನೇಂದ್ರ ಸಂತಸ|araga

ಅರಸಾಳಿನಲ್ಲಿ ರೈಲು ನಿಲುಗಡೆ ಶಾಸಕ ಆರಗ ಜ್ಞಾನೇಂದ್ರ ಸಂತಸ, ಬಹು ವರ್ಷಗಳ ಬೇಡಿಕೆಯಾಗಿದ್ದ ಅರಸಾಳು ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಇಂದಿನಿಂದ ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಬಹಳ ವರ್ಷಗಳಿಂದ ಈ ನಿಲುಗಡೆಗೆ ಪತ್ರ ಮುಖೇನ ಒತ್ತಾಯಿಸಿದ್ದನ್ನು ನೆನಪಿಸಿಕೊಂಡಿರುವ ಶಾಸಕರು, ತೀರ್ಥಹಳ್ಳಿ ಮತ್ತು ಹುಂಚ ಹೋಬಳಿಯ ಸಾರ್ವಜನಿಕರಿಗೆ ರೈಲು ಸೇವೆ ಹತ್ತಿರವಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದ್ದಾರೆ. ಅರಸಾಳು ಮತ್ತು ಕುಂಸಿ…

Read More

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ನಾಳೆ 04/05/24 ರ ವಿದ್ಯುತ್ ವ್ಯತ್ಯಯವಾಗುತ್ತದೆ ಎನ್ನುವ ಪ್ರಕಟಣೆಯನ್ನು ಮೆಸ್ಕಾಂ ಇಲಾಖೆ ಹಿಂಪಡೆದಿದೆ. ನಾಳೆ ಎಂದಿನಂತೆ ವಿದ್ಯುತ್ ಸರಬರಾಜು ಇರಲಿದೆ ಎಂದು ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ವಿದ್ಯುತ್ ಸರಬರಾಜು ನಿಲ್ಲಿಸಲು ತೀರ್ಮಾನಿಸಲಾಗಿತ್ತು ಆದರೆ…

Read More

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ ಶಿವಮೊಗ್ಗ : ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್‌) ಕಷ್ಟವಾದರೂ ಉಳಿಸುತ್ತೇನೆ. ಕಾರ್ಮಿಕರ ಹಿತದೃಷ್ಟಿಯಿಂದ ಮತ್ತು ವಿಶ್ವೇಶ್ವರಯ್ಯನವರ ಹೆಸರು ಉಳಿಸಲು ವಿಐಎಸ್‍ಎಲ್ ಪುನರುಜ್ಜೀವನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಿಐಎಸ್‌ಎಲ್ ಮುಚ್ಚಬೇಕೆಂಬ ತೀರ್ಮಾನಕ್ಕೆ ಬರಲಾಗಿತ್ತು. ಸಾವಿರಾರು ಕುಟುಂಬಗಳಿಗೆ ಕಾರ್ಖಾನೆ ಅನ್ನ ಕೊಟ್ಟಿದೆ. ಅದನ್ನು ಉಳಿಸಲು…

Read More

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ The 135th Ambedkar Jayanti and Pratibha Puraskar program was held at Billeshwara Ambedkar Bhavan in Huncha Gram Panchayat, where legislators highlighted Dr. B.R. Ambedkar’s ideals and honored talented students. ತೀರ್ಥಹಳ್ಳಿ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲೆಶ್ವರ ಅಂಬೇಡ್ಕರ್ ಭವನದಲ್ಲಿ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಅದ್ಧೂರಿಯಾಗಿ…

Read More

ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ

ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ ಶಿವಮೊಗ್ಗ, ಆಗಸ್ಟ್ 19: ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಶರಾವತಿ ನದಿಯ ಜೀವನಾಡಿಯಾದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಅಣೆಕಟ್ಟಿನ ನೀರಿನ ಮಟ್ಟ 1816 ಅಡಿಗೆ ತಲುಪಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ವಿದ್ಯುತ್ ನಿಗಮದ ಇಂಜಿನಿಯರ್‌ಗಳು 11 ರೇಡಿಯಲ್ ಗೇಟ್‌ಗಳನ್ನು ತೆರೆಯುವ ಮೂಲಕ ಸುಮಾರು 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ….

Read More

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ ನವದೆಹಲಿ, ಡಿ.26 : ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ…

Read More

ಸಾಹಿತಿಗಳಿಗೆ ಬೆದರಿಕೆಯೊಡ್ಡುವುದನ್ನು ಸಹಿಸಲು ಸಾಧ್ಯವಿಲ್ಲ : ಹರತಾಳು ಹಾಲಪ್ಪ | ಸಾಹಿತಿ ನಾ ಡಿಸೋಜಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕರು|sagara

ಸಾಗರ : ಲೇಖಕರು, ಸಾಹಿತಿಗಳು ನಿರ್ಭಯವಾಗಿ ಬರವಣಿಗೆ ಮಾಡಲು ಅವಕಾಶವಾಗಬೇಕು. ಹಿಂಸೆ, ಭಯದ ಮೂಲಕ ಲೇಖನಿಯನ್ನು ತಡೆಯುವ ಯಾವುದೇ ಪ್ರಯತ್ನ ಸರಿಯಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.  ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಡಾ| ನಾ.ಡಿಸೋಜಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಅವರು ಮಾತನಾಡಿದರು. ಹಿಂದೆ ಗೌರಿ ಲಂಕೇಶ್‌, ಕಲಬುರ್ಗಿ ಅಂತವರ ಹತ್ಯೆ ನಡೆದಿದೆ. ಬೇರೆ ಬೇರೆ ವಿಚಾರಧಾರೆಯುಳ್ಳವರಿಂದ ಇಂತಹ ಕೆಲಸ ನಡೆದಿದೆ. ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೇ ವಿನಃ ಹಿಂಸೆಗೆ ಇಳಿಯಬಾರದು…

Read More

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ  ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…

Read More

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More
Exit mobile version