Headlines

ಸಂಸದರಿಗೆ ಸಹಕರಿಸುವ ಅಧಿಕಾರಿಗಳ ವರ್ಗಾವಣೆ – ಬಿಜೆಪಿ ಪರವಿರುವ ಅಧಿಕಾರಿಗಳೇ ನಮ್ಮ ಟಾರ್ಗೆಟ್ : ಶಾಸಕ ಬೇಳೂರು|smg

ಶಿವಮೊಗ್ಗ ನಗರದಲ್ಲಿ ನಡೆದ ನೂತನ ಸಚಿವ ಮಧು ಬಂಗಾರಪ್ಪರಿಗೆ ಸ್ವಾಗತ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಜಿಲ್ಲೆಯಲ್ಲಿನ ಅಧಿಕಾರಿಗಳ ಪೈಕಿ ಕೆಲವರು ಬಿಜೆಪಿ ಮನಸ್ಥಿತಿಯವರು ಇದ್ದಾರೆ, ಅಂತವರನ್ನ ಕಿತ್ತುಹಾಕಬೇಕಿದೆ ಎಂದರು.  ಅಲ್ಲದೆ, ಜಿಲ್ಲೆಯಲ್ಲಿ ಸಂಸದರು ಹೇಳಿದ ಹಾಗೆ ಕೇಳುವ ಅವರಿಗೆ ಸಹಕಾರ ನೀಡುವ ಅಧಿಕಾರಿಗಳಿದ್ದು, ಈ ಹಿಂದೆ ಹಲವರು ಅವರ ಚೇಲಾಗಳ ರೀತಿಯಲ್ಲಿ ಕೆಲಸ ಮಾಡಿದ ಉದಾಹರಣೆಯಿದೆ, ಅಂತಹವರನ್ನ ವರ್ಗಾವಣೆ ಮಾಡಬೇಕಿದೆ ಎಂದರು.  ದರಿದ್ರ  ಬಿಜೆಪಿ ಸರ್ಕಾರವನ್ನು ಕಿತ್ತು…

Read More

Ripponpete | ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ – ಹರತಾಳು ಹಾಲಪ್ಪ

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಲಿಕ ಹಿನ್ನಲೆ ಅರಿವೇ ಇಲ್ಲದ.ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ ಆಂತವಳಿಗೆ ಮತದಾರರ ಮತಹಾಕಬೇಕಾ.? ಬಗರ್ ಹುಕುಂ ಆರಣ್ಯ ಹಕ್ಕು ಅಂದರೆ ಏನು ಎಂಬುದೇ ಗೊತ್ತಿಲ್ಲದವರು ಸಂಸತ್ ಪ್ರವೇಶ ಮಾಡಿದರೆ ಪ್ರಯೋಜನವಿಲ್ಲ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿರುವಂತಹ ಬಿ.ವೈ.ರಾಘವೇಂದ್ರರನ್ನು ಬೆಂಬಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮತದಾರರಲ್ಲಿ ಮನವಿ ಮಾಡಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ…

Read More

ಒಂದೇ ದಿನಕ್ಕೆ ₹4 ಲಕ್ಷದಿಂದ ₹3 ಲಕ್ಷಕ್ಕೆ ಇಳಿದ ಬೆಳ್ಳಿ ಬೆಲೆ | ಚಿನ್ನದ ಬೆಲೆಯಲ್ಲೂ ಭಾರಿ ಇಳಿಕೆ – ಮುಂದೇನಾಗುತ್ತೆ !?

MCX silver prices witnessed a massive crash with nearly 25% fall in a single day, wiping out almost ₹1 lakh per kg. Global sell-off, strong US dollar and gold price correction triggered investor panic. ಮಹಿಳೆಯರ ಅಚ್ಚುಮೆಚ್ಚಿನ ಅಮೂಲ್ಯ ಲೋಹವಾಗಿರುವ Silver Price Today ಮಾರುಕಟ್ಟೆಯಲ್ಲಿ ಭಾರೀ ಅಚ್ಚರಿ ಮೂಡಿಸಿದೆ. ದಾಖಲೆಯ ಗರಿಷ್ಠ ಮಟ್ಟ ತಲುಪಿದ ಬೆನ್ನಲ್ಲೇ, ಶುಕ್ರವಾರ MCX Silver ದರಗಳಲ್ಲಿ ದಿಢೀರ್…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನ.

  ರಿಪ್ಪನ್ ಪೇಟೆ: ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ ಕನ್ನಡದ ಉಪನ್ಯಾಸಕ ರಾಜು ಶಿವಪುರ ಮಾತನಾಡಿ ಈ ಬಾರಿಯ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡಕ್ಕಾಗಿ ನಾವು ಎಂಬ ವಿಭಿನ್ನ ಅಭಿಯಾನ ಹಮ್ಮಿಕೊಂಡಿದೆ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಕೈಜೋಡಿಸಬೇಕೆಂದರು.  ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಭಾಷಾ ಸಂಸ್ಕೃತಿ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್…

Read More

ಸಾಗರ : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಅಕ್ರಮ ಗೋ ಕಳ್ಳರ ವಿರುದ್ಧ ಪ್ರತಿಭಟನೆ

ಸಾಗರ:ಗೋವು ಕಳ್ಳರನ್ನು ಬಂಧಿಸುವಂತೆ ಆಗ್ರಹಿಸಿ ಸಾಗರದ ಮಾರಿಕಾಂಬ ದೇವಸ್ಥಾನ ಎದುರು ಇಂದು ಸಾಗರದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಸಾಗರದ ಮಾರಿಕಾಂಬ ದೇವಸ್ಥಾನದ ತವರು ಮನೆ ಎದುರು ಗೋವು ಪೂಜೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು.   ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ಪ್ರತಿಭಟನೆಯನ್ನು ಮುಂದುವರೆಸುವ ತೀರ್ಮಾನವನ್ನು ವಿಹಿಂಪ ಮತ್ತು ಬಜರಂಗದಳ ತೆಗೆದುಕೊಂಡಿದೆ. ಸಾಗರದ ಬಿ.ಹೆಚ್.‌ರಸ್ತೆಯ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಯನ್ನು ಮಾಡಲಾಗುವುದೆಂದು    ಪ್ರತಿಭಟನಾಕಾರರು ಹೇಳಿದ್ದಾರೆ. ಸರಕಾರದ ವಿರುದ್ದ, ಪೋಲೀಸರ ವಿರುದ್ದ…

Read More

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!! ವೃದ್ದೆಯ ಕೈಯಿಂದ ಫಲಾವ್ ತಿಂದು ಹಿಂಬದಿಯಿಂದ ಹತ್ಯೆಗೈದಿದ್ದಇಬ್ಬರು ಯುವಕರ ಬಂಧನ ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಬಸಮ್ಮ ಅವರ ಮೇಲೆ ನಡೆದಿದ್ದ ಕ್ರೂರ ಹತ್ಯೆ ರಹಸ್ಯಕ್ಕೆ ಎರಡು ತಿಂಗಳ ಬಳಿಕ ತೆರೆ ಬಿದ್ದಿದೆ. ದೂರದೃಷ್ಟಿಯಿಂದ ರೂಪಿಸಿದ ದರೋಡೆ–ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೋಚಿದ್ದ ಚಿನ್ನಾಭರಣ, ಬೈಕ್ ಸೇರಿದಂತೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ; ಕುಂಸಿ ಗ್ರಾಮದ…

Read More

ರಿಪ್ಪನ್ ಪೇಟೆ: ಗುರು ರಾಘವೇಂದ್ರ ಸ್ವಾಮಿಗಳವರ 350ನೇ ಆರಾಧನ ಮಹೋತ್ಸವ:

ರಿಪ್ಪನ್‌ಪೇಟೆ:ಇಲ್ಲಿನ ಬೈರಾಪುರದ ಕಿರುಮಂತ್ರಾಲಯ ಶ್ರೀಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 23 ರಿಂದ 25 ರವರೆಗೆ ಗುರುರಾಘವೇಂದ್ರ ಸ್ವಾಮಿಗಳವರ 350ನೇ ಆರಾಧನಾ ಮಹೊತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಟಿ.ಪುರುಷೋತ್ತಮ್‌ರಾವ್ ಮತ್ತು ಕಾರ್ಯದರ್ಶಿ ಕೆ.ದೇವರಾಜ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊರೊನಾ ಮಾರ್ಗಸೂಚಿಯನ್ವಯ ಸರಳ ಸಂಪ್ರದಾಯದಂತೆ 23ರಂದು ಸೋಮವಾರ ಬೆಳಗ್ಗೆ ಪೂರ್ವಾರಾಧನೆ ಮತ್ತು ವಿಶೇಷ ಪೂಜೆಗಳು ತೀರ್ಥಪ್ರಸಾದ ವಿತರಣೆ, ಆಗಸ್ಟ್ 24 ರಂದು ಮಂಗಳವಾರ ಗುರುರಾಯರ ಆರಾಧನೆ ವಿಶೇಷ ಪೂಜೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ಆರ್‌.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು…

Read More

ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಕುಗ್ರಾಮದ ಗ್ರಾಮಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ:

ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಗ್ರಾಮಸ್ಥರು ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ದ ಗದ್ದೆಯಂತಾದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿಭಿನ್ನ ಪ್ರತಿಭಟನೆಯನ್ನು ನಡೆಸಿದ ಘಟನೆ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮಪಂಚಾಯತ್ ವ್ಯಾಪ್ತಿಯ ಒಂದಗದ್ದೆ, ನೀರೇರಿ  ಎಂಬ ಅವಳಿ ಗ್ರಾಮದಲ್ಲಿ ನಡೆದಿದೆ. ಒಂದಗದ್ದೆ ಹಾಗೂ ನೀರೇರಿ ಗ್ರಾಮಗಳು ಅವಳಿ ಗ್ರಾಮಗಳಾಗಿವೆ. ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಬೀದಿದೀಪ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಗ್ರಾಮಸ್ಥರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.  ಈ ಮೂಲಭೂತ ಸೌಕರ್ಯಗಳ…

Read More
Exit mobile version