ರಿಪ್ಪನ್ ಪೇಟೆಯಲ್ಲಿ ಜುಲೈ 25 ರಂದು ಗ್ರಾಮಾಡಳಿತದ ವಿರುದ್ಧ ಪಕ್ಷಾತೀತವಾಗಿ ಪ್ರತಿಭಟನೆ :

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದ ಬಳಿಯ ಹೊಸನಗರ-ತೀರ್ಥಹಳ್ಳಿ ರಸ್ತೆಗೆ ಹೊಂದಿಕೊಂಡಿರುವ ಸಾರ್ವಜನಿಕ ಬಸ್‌ಪ್ರಯಾಣಿಕರ ತಂಗುದಾಣಕ್ಕೆ ಹೋಗಿ ಬರುವ ಜಾಗದಲ್ಲಿ ಅವೈಜ್ಞಾನಿಕ ಕಬ್ಬಿಣದ ರಾಡುಗಳ ಮೂಲಕ ತಡೆಗೋಡೆ ಮಾಡಿರುವುದರಿಂದ ಮಹಿಳೆಯರು, ವೃದ್ದರು ಮತ್ತು ಅನಾರೋಗ್ಯ ಪೀಡಿತರು ಬಿದ್ದು ಕಾಲು ಕೈ  ಮುರಿದುಕೊಂಡ ಗಾಯಗಳಾದ ಘಟನೆಗಳು ನಡೆದಿರುತ್ತವೆ ಈ ಬಗ್ಗೆ ಸಾಕಷ್ಟು ಭಾರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾದರೂ ಕೂಡಾ ಅದನ್ನು ತೆರವುಗೊಳಿಸದೇ ನಿರ್ಲಕ್ಷ ವಹಿಸಿದ್ದಾರೆಂದು ಆರೋಪಿಸಿ ಬರುವ ಜುಲೈ 25 ರಂದು ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ಏರ್ಪಡಿಸಲಾಗಿದೆ…

Read More

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested ಶಿವಮೊಗ್ಗ : ರಾಗಿಗುಡ್ಡ ಚಾನಲ್‌ನ ಬಳಿಯಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.   ಆರೋಪಿಗಳಾದ ಸಂಕೇತ, 23 ವರ್ಷ, ಗೋಪಾಳ, ಶಿವಮೊಗ್ಗ ಟೌನ್, ಅಂಬರೀಶ, 26 ವರ್ಷ, ನ್ಯೂ ಮಂಡ್ಲಿ, ಶಿವಮೊಗ್ಗ ಟೌನ್ ಮತ್ತು ಧನುಷ್, 20 ವರ್ಷ, ಪುರಲೆ, ಶಿವಮೊಗ್ಗ ಟೌನ್ ರವರನ್ನು…

Read More

ಸಂಸ್ಕೃತಿಯೆಡೆಗೆ ಸೌಹಾರ್ದ ನಡಿಗೆ ಪಾದಯಾತ್ರೆಗೆ ನಾದಬ್ರಹ್ಮ ಹಂಸಲೇಖ ಚಾಲನೆ :

ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ  ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು. ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ…

Read More

ತೀರ್ಥಹಳ್ಳಿಯಲ್ಲಿ ಪ್ರತಿದಿನ ನೆಡೆಯುತ್ತಿದ್ದ ಪ್ರಸಿದ್ಧ ತುಂಗಾ ಆರತಿ ನಿಂತಿದ್ದು ಹೇಗೆ…? ಯಾರಿಂದ….?

ತೀರ್ಥಹಳ್ಳಿ : ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ಗಂಗಾ ಆರತಿ ಮಾಡಿದ್ದ ಹಾಗೆ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಲೆನಾಡಿನ ತೀರ್ಥಹಳ್ಳಿಯಲ್ಲಿ ಕುರುವಳ್ಳಿಯ ಕಾಶಿ ದೀಕ್ಷಿತ್ ಇವರ ನೇತೃತ್ವದಲ್ಲಿ ತುಂಗಾ ಆರತಿಯನ್ನು ಮಾಡಲಾಯಿತು. ಇದಕ್ಕೆ ತೀರ್ಥಹಳ್ಳಿಯ ಜನಪ್ರತಿನಿಧಿಗಳಿಂದ ಹಾಗೂ ಸಾರ್ವಜನಿಕರಿಂದ ಪ್ರಶಂಸೆ ಕೂಡ ವ್ಯಕ್ತವಾಯಿತು.  ನಂತರ ತೀರ್ಥಹಳ್ಳಿಯ ತಹಸೀಲ್ದಾರ್ ಡಾ. ಶ್ರೀಪಾದ್ ಇವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿದಿನ ಸಂಜೆ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಅರ್ಚಕರು ಒಂದೊಂದು ತಿಂಗಳು ತುಂಗೆಗೆ ಆರತಿ ನೆಡೆಸಲಿ…

Read More

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ | Traffic fine

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು ಮತ್ತು ಬೀಟ್/ಡಿಫೆಕ್ಟಿವ್ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಉಂಟಾಗುವ ರೀತಿಯಲ್ಲಿ ತನ್ನ ವಾಹನವನ್ನು ಚಲಾಯಿಸುತ್ತಿದ್ದಾನೆಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪೂರ್ವ ಸಂಚಾರ ಪೊಲಸ್ ಠಾಣೆಯ ಪಿಎಸ್‌ಐ ನವೀನಕುಮಾರ್ ಮಠಪತಿ ಮತ್ತು ಸಿಬ್ಬಂದಿಗಳಾದ ಸಂತೋಷ ಕೆ,ಹೆಚ್…

Read More

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವಿಷಯ ತಿಳಿದು ಬರುತ್ತಿದ್ದಂತೆ, ತಹಶೀಲ್ದಾರ್ ರಾಜೀವ್, ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಿಯಾ ನೇತೃತ್ವದಲ್ಲಿ ದಾಳಿ ನಡೆಸಿ 60 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಹಲವು ದಿನಗಳ ಹಿಂದೆ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಗಣಿ ಮತ್ತು ಭೂ…

Read More

ನಾನು ಗುಳಿಗ ದೈವದ ಬಗ್ಗೆ ಕೀಳಾಗಿ ಮಾತನಾಡಿಲ್ಲ – ಇದೆಲ್ಲಾ ಕಾಂಗ್ರೆಸ್ ಪಕ್ಷದ ಕಪೋಕಲ್ಪಿತ ಕಥೆ : ಆರಗ ಜ್ಞಾನೇಂದ್ರ|ARAGA

ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ ನಾಟಕವಾಡಿಸಿದ್ದಾರೆ. ಚುನಾವಣೆ ಸಮಯದಲ್ಲಿ ಜನರ ಭಾವನೆಗಳನ್ನು ರಾಜಕಾರಣಕ್ಕೆ ಕಾಂಗ್ರೆಸ್…

Read More

ಹಲವು ದಶಕದ ಸಮಸ್ಯೆ ಕೇವಲ ಭರವಸೆಯಲ್ಲೆ ಕಳೆಯಿತು:ಸೇತುವೆ ಇಲ್ಲದೇ ಹಳಿಯೂರು ಗ್ರಾಮಸ್ಥರ ನರಕಯಾತನೆ

ರಿಪ್ಪನ್ ಪೇಟೆ: ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷದಿಂದ ಗವಟೂರು ಗ್ರಾಮದ ಹಳಿಯೂರು (ಮತ್ತಿಮನೆ, ಸಂಪಳ್ಳಿ ಸಂಪರ್ಕ)ಭಾಗದ ಜನರು ಕಳೆದ 60 ವರ್ಷಗಳಿಂದ ಸೇತುವೆ ಇಲ್ಲದೆ ಮಳೆಗಾಲದ ಸಂದರ್ಭದಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.  ದಿನ ನಿತ್ಯದ ವಸ್ತುಗಳನ್ನು ಖರೀದಿಸುವರು, ಶಾಲೆಗೆ ಹೋಗುವ ಮಕ್ಕಳು, ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗೋಕೆ ಆಗದೇ ಪರದಾಡುತ್ತಿರುವ ಊರಿನ ಜನರು, ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ ಇತ್ಯಾದಿ ಮೂಲಭೂತ ಸೌಕರ್ಯಗಳ ಸಮಯಕ್ಕೆ ಸರಿಯಾಗಿ ಪಡೆಯಲು ಕೃಷಿಕರು ಸೇತುವೆ ಇಲ್ಲದೆ ಸಂಕಟಪಡುತ್ತಿದ್ದಾರೆ. ಗ್ರಾಮಸ್ಥರು ಸೇತುವೆ ರಸ್ತೆ ಇಲ್ಲದೆ ಬೇಸತ್ತು…

Read More

ತೀರ್ಥಹಳ್ಳಿ : ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ABVP ಸಂಘಟನೆಯ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತೀಕ್ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಈ…

Read More

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ…

Read More