ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4)…

Read More

ಶಿವಮೊಗ್ಗದಲ್ಲಿ ನಿನ್ನೆ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ :

ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಪದ್ಮ ಚಲನಚಿತ್ರದ ಮಂದಿರದ ಬಳಿ ವಾಕಿಂಗ್ ಹೋಗಿದ್ದ ವೆಂಕಟೇಶ್ ಎಂಬುವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಇಬ್ಬರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು ಓರ್ವನ ಭೇಟೆಗೆ ಬಲೆ ಬೀಸಿದ್ದಾರೆ. ನಿನ್ನೆ ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿ ವೆಂಕಟೇಶ್ ಎಂಬುವರು ತಮ್ಮ ನಾಯಿಯನ್ನು ಹಿಡಿದುಕೊಂಡು ವಾಕಿಂಗ್ ಗೆ ಹೋಗಿ ವಾಪಾಸ್ ಮನೆಗೆ ಹಿಂದಿರುಗುವಾಗ ವಿದ್ಯಾನಿಕೇತನ ಶಾಲೆಯ ಹತ್ತಿರ ಅವರಿಗೆ ಕಲ್ಲಿನಿಂದ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್ ಹಾಗೂ ಉಬೇದುಲ್ಲಾ ಷರೀಫ್ ನೇಮಕ

ಶಿವಮೊಗ್ಗ: ಜಿಲ್ಲೆಯ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ, ಯುವ ಮುಖಂಡ ನಾಗೋಡಿ ವಿಶ್ವನಾಥ್ ಹಾಗೂ ಕೆಂಚನಾಲ ಗ್ರಾಪಂ ಮಾಜಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC) ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ಹೊಸನಗರ ಬ್ಲಾಕ್…

Read More

Shivamogga | ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ

ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಚುನಾವಣೆ ಸಿದ್ಧತೆಗಾಗಿ ಬುಧವಾರ ಜಿಲ್ಲೆಗೆ ಬಂದರು. ಭದ್ರಾವತಿ ಸಮೀಪದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಶಿವಮೊಗ್ಗಕ್ಕೆ ಮೆರವಣಿಗೆಯಲ್ಲಿ ಕರೆತಂದರು. ಕಾರ್ಯಕರ್ತರ ಜೈಕಾರದ ನಡುವೆ ತೆರೆದ ವಾಹನದಲ್ಲಿ ಗೀತಾ ಹಾಗೂ ಅವರ ಪತಿ, ನಟ ಶಿವರಾಜಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ…

Read More

ಜೋಗದ ಕೆಪಿಸಿ ಪ್ರೌಢಶಾಲೆಗೆ ಶೇ.100 ಫಲಿತಾಂಶ – ರೋಸ್ನಾ ರಿಂಷಾ 96% ಅಂಕಗಳೊಂದಿಗೆ ಪ್ರಥಮ ಸ್ಥಾನ

ಜೋಗದ ಕೆಪಿಸಿ ಪ್ರೌಢಶಾಲೆಗೆ ಶೇ.100 ಫಲಿತಾಂಶ – ರೋಸ್ನಾ ರಿಂಷಾ 96% ಅಂಕಗಳೊಂದಿಗೆ ಪ್ರಥಮ ಸ್ಥಾನ Rosna Rinsha secures 96% marks and tops KPC High School, Jog, as the school achieves 100% SSLC result for the first time in its history. ಜೋಗ: ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜೋಗದ ಕೆಪಿಸಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಎಲ್ಲಾ…

Read More

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 352ನೇ ಆರಾಧನ ಮಹೋತ್ಸವ

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 352ನೇ ಆರಾಧನ ಮಹೋತ್ಸವ  ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 352ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.

Read More

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ Two bikes collided near Jamballi turn in Hosanagara taluk, leaving two persons seriously injured. The injured were given first aid at Ripponpet PHC and shifted to Shivamogga for further treatment. ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಸಮೀಪದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್‌ಗಳ…

Read More

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ!

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ! ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆ ಮಗುವೊಂದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಚಂದಾಪುರ_ಆನೇಕಲ್ ಮುಖ್ಯ ರಸ್ತೆಯ ಇಗ್ಗಲೂರಿನಲ್ಲಿ ನಡೆದಿದೆ. ಅರ್ಚನಾ ಎಂಬುವವರು ಹೆರಿಗೆಗಾಗಿ ತಮ್ಮ ತವರಿಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್…

Read More

ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಬೇಳೂರು ಸವಾಲ್|sagara

ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಕೊಡುಗೆಯೇನು, ನಾನು ಮತ್ತು ಕಾಗೋಡು ನೀಡಿದ ಕೊಡುಗೆ ಏನು ಎನ್ನುವುದನ್ನು ಚರ್ಚೆ ಮಾಡಲು ಗಾಂಧಿ ಮೈದಾನಕ್ಕೆ ಬನ್ನಿ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಸವಾಲು ಎಸೆದಿದ್ದಾರೆ. ಇಲ್ಲಿನ ಮಹಿಳಾ ಸಮಾಜದ ಆವರಣದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಗರಕ್ಕೆ ಕುಡಿಯುವ ನೀರು ತರಲು 70 ಕೋಟಿ ರೂ. ಬಂದದ್ದು ನನ್ನ ಕಾಗೋಡು ಅವಧಿಯಲ್ಲಿ, ತಹಶೀಲ್ದಾರ್ ಕಚೇರಿ ನಿರ್ಮಾಣಕ್ಕೆ…

Read More

ಭೀಕರ ಅಪಘಾತ : ಚಾಲಕನ ಕಾಲು ಮುರಿತ

ಶಿವಮೊಗ್ಗ : ಬೇಡರ ಹೊಸಳ್ಳಿಯ ಕೆರೆಯ ಬಳಿ ಓಮ್ನಿ ಮತ್ತು ಐ 20 ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಅಪಘಾತದಲ್ಲಿ ಓಮ್ನಿ ಚಾಲಕನ ಕಾಲು ಮುರಿದಿದೆ. ಜೊತೆಯಲ್ಲಿದ್ದ ಮಹಿಳೆಗೂ ಗಾಯಗಳಾಗಿವೆ. ಬೇಡರ ಹೊಸಳ್ಳಿ ಕೆರೆಯ ಏರಿಯ ಮೇಲೆ ಶಿವಮೊಗ್ಗ ಕಡೆಯಿಂದ ಹೊನ್ನಾಳಿ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಹೊನ್ನಾಳಿ ಕಡೆಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಐ20 ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಓಮ್ನಿ ಕಾರು ನುಜ್ಜುಗುಜ್ಜಾಗಿದೆ. ಓಮ್ನಿ ಕಾರಿನ ಚಾಲಕ ಮತ್ತು ಮಹಿಳೆಗೆ ತೀವ್ರವಾದ ರಕ್ತಗಾಯಗಳಾಗಿದೆ….

Read More