ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರ ಸಾವು : ಕುಟುಂಬಸ್ಥರಿಂದ ಪ್ರತಿಭಟನೆ|Mescom
ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರನೊಬ್ಬ ಮೃತ ಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ನಡೆದಿದೆ. ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶಗೊಂಡ ಆತನ ಕುಟುಂಬಸ್ಥರು ಮತ್ತು ಎಣ್ಣೆಕೊಪ್ಪ ಗ್ರಾಮಸ್ಥರು ಮೆಸ್ಕಾಂ ಇಲಾಖೆಯ ಉಪ ವಿಭಾಗ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ತಾಲೂಕಿನ ಆನವಟ್ಟಿಯಲ್ಲಿ ಸೋಮವಾರ ನಡೆಯಿತು. ಘಟನೆ ಹಿನ್ನೆಲೆ: ಎಣ್ಣೆಕೊಪ್ಪ ಗ್ರಾಮದ ರವಿ ದುರ್ಗಪ್ಪ ಎಂಬ 24 ವರ್ಷದ ಯುವಕ ವಿದ್ಯುತ್ ಗುತ್ತಿಗೆದಾರರ ಬಳಿ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದನು. ಕುಬಟೂರು ಗ್ರಾಮದಲ್ಲಿ ಡಿ.17 ರಂದು…