ಶಿಕಾರಿಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ – ಶಿವಮೊಗ್ಗಕ್ಕೂ ವ್ಯಾಪಿಸಿದ ಮೀಸಲಾತಿ ಹೋರಾಟ|Protest
ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಆಫೀಸ್ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಿವಾಸದ ಬಳಿ ನಡೆದ ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯದ ಪ್ರತಿಭಟನೆ ಇದೀಗ ಜಿಲ್ಲಾ ಕೇಂದ್ರಕ್ಕೂ ವ್ಯಾಪಿಸಿದೆ. ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿಯಲ್ಲಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಮೇಲೆ ತೆಂಗಿನ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಿವಮೊಗ್ಗ –…