Headlines

ಶಿಕಾರಿಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ – ಶಿವಮೊಗ್ಗಕ್ಕೂ ವ್ಯಾಪಿಸಿದ ಮೀಸಲಾತಿ ಹೋರಾಟ|Protest

ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಆಫೀಸ್ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಬಳಿ ನಡೆದ ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯದ ಪ್ರತಿಭಟನೆ ಇದೀಗ ಜಿಲ್ಲಾ ಕೇಂದ್ರಕ್ಕೂ ವ್ಯಾಪಿಸಿದೆ.   ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿಯಲ್ಲಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.  ರಸ್ತೆ ಮೇಲೆ ತೆಂಗಿನ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಿವಮೊಗ್ಗ –…

Read More

ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ – ಘಟನೆಯಿಂದ ನೋವಾಗಿದೆ ,ಯಾರನ್ನು ಬಂಧಿಸಬೇಡಿ : ಯಡಿಯೂರಪ್ಪ|Bsy

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ತಮ್ಮ ಮನೆ ಮೇಲೆ ನಡೆದ ಕಲ್ಲೂ ತೂರಾಟದ ಘಟನೆಯ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಯಾರನ್ನು ಬಂಧಿಸಬೇಡಿ! ಬಂಜಾರ ಸಮುದಾಯದ ಕಾರ್ಯಕರ್ತರು ನಮ್ಮ ಮನೆಗೆ ಹಲ್ಲೆ ಮಾಡಿ, ಕಲ್ಲು ತೂರಾಟ ಮಾಡಿದಂತಹ ಘಟನೆಗಳು ನಡೆದಿವೆ. ಈ ಸಂಬಂಧ ಎಸ್​ಪಿ ಮತ್ತು ಡಿಸಿಯವರ ಬಳಿಯಲ್ಲಿ ಮಾತನಾಡಿ, ಬಂಜಾರ ಸಮುದಾಯದವರು ನಮ್ಮ ಜೊತೆ ಇದ್ದಾರೆ. ತಾಂಡಗಳ ಅಭಿವೃದ್ಧಿ ಮಾಡಿದ್ದೇನೆ, ತಪ್ಪು ಗೃಹಿಕೆಯಿಂದ ಈ ಘಟನೆ ಯಾಗಿದೆ. ಯಾರ ವಿರುದ್ಧವೂ ಕ್ರಮ…

Read More

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ – ಡಾ. ರತ್ನಾಕರ ಸಿ ಕುನುಗೋಡು|Ripponpet news

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ- ಡಾ. ರತ್ನಾಕರ ಸಿ ಕುನುಗೋಡು.  ರಿಪ್ಪನ್ ಪೇಟೆ :  ಎಲ್ಲ ಭೇದಗಳನ್ನು ಅಳಿಸಿ ಸಮತೆಯ ಕಣ್ಣಲ್ಲಿ ಒಡೆದ ಮನಸ್ಸುಗಳನ್ನು ಕಟ್ಟುವ ಸಮರ್ಥ ಮಾಧ್ಯಮ ರಂಗಭೂಮಿ. ರಂಗಭೂಮಿಯ ಮುಖಾಂತರ ಆರೋಗ್ಯಕರ ಮನಸ್ಸುಳ್ಳ ಯುವಜನತೆಯನ್ನು ರೂಪಿಸುವ ತುರ್ತು ಇದೆ ಎಂದು ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರತ್ನಾಕರ ಸಿ ಕುನುಗೋಡು ಹೇಳಿದರು. ದಿ. ರೇಣುಕಪ್ಪಗೌಡ ಪ್ರತಿಷ್ಠಾನ, ಮಲೆನಾಡು ಕಲಾತಂಡ ಮಸರೂರು ಹಾಗ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ …

Read More

ಬೇಳೂರು ಗೋಪಾಲಕೃಷ್ಣ ರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು – ಕಾಗೋಡು ತಿಮ್ಮಪ್ಪ|Sagara

ಶಿವಮೊಗ್ಗ ಜಿಲ್ಲೆಯ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಏಳು ಜನ ಆಕಾಂಕ್ಷಿಗಳು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು ಅದರಲ್ಲಿ ಹಿರಿಯ ಮುತ್ಸದಿ ಕಾಗೋಡು ತಿಮ್ಮಪ್ಪ ಹಾಗೂ ಅವರ ಮಗಳು ಡಾ.ರಾಜನಂದಿನಿ ಪ್ರಬಲ ಆಕಾಂಕ್ಷಿಯಾಗಿದ್ದರು. ಕೊನೆಯಲ್ಲಿ ಹೈಕಮಾಂಡ್ ಪಕ್ಷದ ಆಂತರಿಕ ಸಮೀಕ್ಷೆಗೆ ಮನ್ನಣೆ ನೀಡಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರನ್ನು ಹೈಕಮಾಂಡ್ ಅಂತಿಮಗೊಳಿಸಿದ್ದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿಸಿತ್ತು. ಆದರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಬಣಗಳಿವೆ…

Read More

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ|144 ಸೆಕ್ಷನ್ ಜಾರಿ

ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಿದರು.ಈ ವೇಳೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು‌. ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು….

Read More

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death

ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….

Read More

ರಿಪ್ಪನ್‌ಪೇಟೆ – 4.86 ಕೋಟಿ ರೂ ವೆಚ್ಚದ ಬಾಲಕರ ವಸತಿ ನಿಲಯ ಲೋಕಾರ್ಪಣೆಗೊಳಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ದೇಶದಲ್ಲಿ ವಿದ್ಯಾರ್ಜನೆಗೆ ಪ್ರಸ್ತುತ ಸಂಧರ್ಭದಲ್ಲಿ ವಿಫುಲವಾದ ಅವಕಾಶವಿದ್ದು ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಾಗಿದೆ,ನಮ್ಮ ದೇಶ ನಾಗಲೋಟದಲ್ಲಿ ಅಭಿವೃದ್ದಿಯತ್ತ ಸಾಗುತ್ತಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಪಟ್ಟಣದಲ್ಲಿ 4 ಕೋಟಿ 86 ಲಕ್ಷ ರೂ ವೆಚ್ಚದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ತಮ್ಮ ಅಧಿಕಾರಾವಧಿಯಲ್ಲಿ ಸಾಗರ ಹೊಸನಗರ ಕ್ಷೇತ್ರದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳು…

Read More

ಶಿವಮೊಗ್ಗ – ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ಬ್ಯಾಂಕ್ ಮ್ಯಾನೇಜರ್ ಸಾವು|Railway

ಶಿವಮೊಗ್ಗ: ಬೆಂಗಳೂರಿನಿಂದ ಹೆಂಡತಿ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ರೈಲ್ವೆ ಬೋಗಿಯಲ್ಲಿ ಶೌಚಾಲಯದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಅಶೋಕ್ ಚೌಧರಿ ಅವರು ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಸ್ಸೋಂ ಮೂಲದವರಾಗಿದ್ದ ಅಶೋಕ್ ಚೌಧರಿ ಅವರು ಅಸ್ಸೋಂ ನಿಂದ ಬೆಂಗಳೂರಿಗೆ ಬಂದಿದ್ದ ತಮ್ಮ ಹೆಂಡತಿ ಹಾಗೂ ಮಕ್ಕಳನ್ನು ಕರೆ ತರಲು ನಿನ್ನೆ ಬೆಳಗ್ಗೆ ಶಿವಮೊಗ್ಗ-ಯಶವಂತಪುರದ ಇಂಟರಸಿಟಿ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ‌. ರೈಲಿನಲ್ಲಿಯೇ ಶೌಚಾಲಯಕ್ಕೆ…

Read More

ಹೊಂಬುಜ : ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿ|hombuja

ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ  ಶ್ರದ್ಧಾಂಜಲಿಯ ನುಡಿನಮನಗಳು ಆಧುನಿಕ ಬೆಳಗೊಳದ ಶಿಲ್ಪಿ, ಅತಿಶಯ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 54 ವರ್ಷ ಜನಸಮುದಾಯ ಹಾಗೂ ಶ್ರೀಮಠವನ್ನು ಮುನ್ನಡೆಸಿದ ಪ್ರಾತಃ ಸ್ಮರಣೀಯರು ಹಾಗೂ ಮಾರ್ಗದರ್ಶಕರೂ ಆಗಿದ್ದ ಅವರ ನೇತೃತ್ವವನ್ನು ಕಳೆದುಕೊಂಡ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.  ಪೂಜ್ಯರು ತಮ್ಮ ಬಾಲ್ಯ ಜೀವನದ ವಿದ್ಯಾಭ್ಯಾಸವನ್ನು ಶ್ರೀಕ್ಷೇತ್ರ ಹೊಂಬುಜದ ಶ್ರೀಮಠದ ಗುರುಕುಲದಲ್ಲಿ ಮಾಡಿದ್ದರು ಎಂಬುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ….

Read More

ಸೇನಾ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಪ್ರಧಾನಿ‌ ಮೋದಿ|modi

ಜನಸಂಕಲ್ಪ ಮಹಾಸಂಗಮ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ನವದೆಹಲಿಗೆ ಪ್ರಯಾಣ ಬೆಳೆಸಿದರು. ಪ್ರಧಾನಿ ನರೇಂದ್ರ ಮೋದಿ, ಅವರ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ಮೂರು ಸೇನಾ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಸದ ಬಿ.ವೈ. ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಶಾಸಕರಾದ ಹಲತಾಳು ಹಾಲಪ್ಪ, ಎಂಎಲ್’ಸಿಗಳಾದ ಡಿ.ಎಸ್. ಅರುಣ್,…

Read More