ಕಳಪೆ ಕಾಮಗಾರಿಗೆ ಆರಗ ಜ್ಞಾನೇಂದ್ರ ಉಗ್ರಾವತಾರ – ಬೆಚ್ಚಿ ಬಿದ್ದ ಅಧಿಕಾರಿಗಳು|ಪರ್ಸೆಂಟೇಜ್ ತಿಂದು ನಮಗೆ ಕೆಟ್ಟ ಹೆಸರು ತರ್ತೀರಾ!!|araga
ತೀರ್ಥಹಳ್ಳಿ : ಶಾಸಕರು, ಸಚಿವರು ಸರ್ಕಾರದ ಮಟ್ಟದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಹಣ ಮಂಜುರಾತಿ ಮಾಡಿಸಿಕೊಂಡು ಬರುತ್ತಾರೆ. ಆದರೆ, ಆ ಅನುದಾನದಲ್ಲಿ ಸಮರ್ಪಕವಾಗಿ ಕೆಲಸ ಮಾಡದಿದ್ದರೇ ಯಾರಿಗಾದರೂ ಸಿಟ್ಟು ಬಂದೆ ಬರುತ್ತದೆ.ತೀರ್ಥಹಳ್ಳಿ ಆರಗ ಜ್ಞಾನೇಂದ್ರರವರು ಸಹ ಇದೇ ಕಾರಣಕ್ಕೆ ಸಿಟ್ಟುಮಾಡಿಕೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ಬಾಳೆ ಕೂಡ್ಲು, ಗುಡ್ಡೆಪಾಲ್ ರಸ್ತೆ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು,ಅಲ್ಲದೆ ಇದೇ ವಿಚಾರವನ್ನು ಸಚಿವ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದರು. ಹೀಗಾಗಿ ಗುಣಮಟ್ಟವನ್ನ ಖುದ್ದು ವೀಕ್ಷಿಸುವ ಸಲುವಾಗಿ ಸಚಿವರು ಸ್ಥಳಕ್ಕೆ ದೌಡಾಯಿಸಿದ್ಧಾರೆ. …