ರಿಪ್ಪನ್ಪೇಟೆ : ಪ್ರಾರ್ಥನಾ ಮಂದಿರದ ಬಳಿ ಮದ್ಯದಂಗಡಿ ಪ್ರಾರಂಭಕ್ಕೆ ಯತ್ನ – ಸರ್ವಪಕ್ಷಗಳಿಂದ ಬೃಹತ್ ಪ್ರತಿಭಟನೆ|protest
ರಿಪ್ಪನ್ಪೇಟೆ : ಇಲ್ಲಿನ ಹೊಸನಗರ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿನ ಜುಮ್ಮಾ ಮಸೀದಿ ಮುಂಭಾಗದ ರಾಯಲ್ ಕಂಫರ್ಟ್ ಕಟ್ಟಡದಲ್ಲಿ ಮದ್ಯದಂಗಡಿ ಆರಂಭಿಸುವ ಹುನ್ನಾರ ನಡೆಯುತ್ತಿದ್ದು ಇದನ್ನು ವಿರೋಧಿಸಿ ಇಂದು ರಿಪ್ಪನ್ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಮತ್ತು ಸರ್ವ ಪಕ್ಷಗಳಿಂದ ಪ್ರತಿಭಟನೆ ನಡೆಸಿದರು. ಕಳೆದ ಒಂದು ವಾರದ ಹಿಂದೆ ಶಿವಮೊಗ್ಗ ಅಬಕಾರಿ ಜಿಲ್ಲಾಧಿಕಾರಿಗಳಿಗೂ ಮತ್ತು ಜಿಲ್ಲಾಧಿಕಾರಿಗಳ ಕಛೇರಿಗೆ ಪಟ್ಟಣದಿಂದ ಸರ್ವಪಕ್ಷಗಳ ನಿಯೋಗ ತೆರಳಿ ಯಾವುದೇ ಕಾರಣಕ್ಕೂ ಪ್ರಾರ್ಥನಾ ಮಂದಿರದ ಸನಿಹದಲ್ಲಿ ಸಿಎಲ್-7 ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ…


