ಕೊನೆಗೂ ಬೋನಿಗೆ ಬಿದ್ದ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಜನತೆ|theleopard
ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ಯಾತಿನಕೊಪ್ಪ ರಸ್ತೆಯ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದೊಂದು ತಿಂಗಳಿನಿಂದ ಓಡಾಡುತ್ತಿದ್ದ ಚಿರತೆಯೊಂದು, ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಕೊನೆಗೂ ಬಿದ್ದಿದೆ. ಕ್ಯಾತಿನಕೊಪ್ಪ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದು ಗ್ರಾಮಸ್ಥರಲ್ಲಿ ಭಯ ಉಂಟು ಮಾಡಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಇತ್ತೀಚೆಗೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮಕೈಗೊಂಡಿತ್ತು. ಸೋಮವಾರ ಮುಂಜಾನೆ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ…