Headlines

ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ

ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…

Read More

ಬಟ್ಟೆಮಲ್ಲಪ್ಪ ಸರ್ಕಲ್ ಗೆ ಬಂಗಾರಪ್ಪ ಸರ್ಕಲ್ ಎಂದು ನಾಮಕರಣ – ರಿಪ್ಪನ್‌ಪೇಟೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಆಟೊಗಳಿಗೆ ಉಚಿತ ಟಾಪ್ ವಿತರಣೆ|AAP

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಸರ್ಕಲ್ ಗೆ ನೂತನವಾಗಿ ಬಂಗಾರಪ್ಪ ಸರ್ಕಲ್ ಎಂದು ಅಧಿಕೃತವಾಗಿ ನಾಮಕರಣ ಮಾಡಲಾಯಿತು. ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಘಟಕದ ವತಿಯಿಂದ ನೂತನ ಬಂಗಾರಪ್ಪ ಸರ್ಕಲ್ ಉದ್ಘಾಟಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣೇಶ್ ಸೂಗೋಡು ಈ ದೇಶ ಕಂಡ ಅತ್ಯುತ್ತಮ ಮುಖ್ಯಮಂತ್ರಿ ಹಾಗೂ ಬಡವರ ಪಾಲಿನ ಆಶಾಕಿರಣವಾಗಿದ್ದ ದಿ|| ಬಂಗಾರಪ್ಪ ರವರ ಹೆಸರನ್ನು ಬಟ್ಟೆಮಲ್ಲಪ್ಪ ಸರ್ಕಲ್ ಗೆ ನಾಮಕರಣ ಮಾಡುವ ಮೂಲಕ…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News ಶಿವಮೊಗ್ಗ : ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ. ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು…

Read More

ಅ.13 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ – Job news

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕೈ ತಪ್ಪಬಹುದಾ ಸಚಿವ ಸ್ಥಾನ ??????:

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ. ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ…

Read More

ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಶಾಸಕ ಆರಗ ಜ್ಞಾನೇಂದ್ರ ಸಂತಸ|araga

ಅರಸಾಳಿನಲ್ಲಿ ರೈಲು ನಿಲುಗಡೆ ಶಾಸಕ ಆರಗ ಜ್ಞಾನೇಂದ್ರ ಸಂತಸ, ಬಹು ವರ್ಷಗಳ ಬೇಡಿಕೆಯಾಗಿದ್ದ ಅರಸಾಳು ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಇಂದಿನಿಂದ ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಬಹಳ ವರ್ಷಗಳಿಂದ ಈ ನಿಲುಗಡೆಗೆ ಪತ್ರ ಮುಖೇನ ಒತ್ತಾಯಿಸಿದ್ದನ್ನು ನೆನಪಿಸಿಕೊಂಡಿರುವ ಶಾಸಕರು, ತೀರ್ಥಹಳ್ಳಿ ಮತ್ತು ಹುಂಚ ಹೋಬಳಿಯ ಸಾರ್ವಜನಿಕರಿಗೆ ರೈಲು ಸೇವೆ ಹತ್ತಿರವಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದ್ದಾರೆ. ಅರಸಾಳು ಮತ್ತು ಕುಂಸಿ…

Read More

ಮೃತದೇಹ ಸಾಗಿಸುತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಮೃತದೇಹವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಆಗುಂಬೆ ಸಮೀಪದಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತರೀಕೆರೆ ನಿವಾಸಿಯೊಬ್ಬರ ಮೃತದೇಹವನ್ನು ಕರೆತರುತಿದ್ದಾಗ ಆಗುಂಬೆ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮೃತ ವ್ಯಕ್ತಿಯ ಮಗನಿಗೆ ಪೆಟ್ಟಾಗಿದ್ದು ತೀರ್ಥಹಳ್ಳಿಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

Ripponpete | ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ  ಬೇಳೂರು ರಿಪ್ಪನ್‌ಪೇಟೆ :  ನೂರಾರು ಸಮಸ್ಯೆಗಳೊಂದಿಗೆ ಪರಿಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕುತೂಹಲದಿಂದ  ಪರಿಹಾರ ಸಿಗಬಹುದೆಂದು ಭರವಸೆಯೊಂದಿಗೆ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರಿಗೆ ತಮ್ಮ ಸಮಸ್ಯೆಗಳಿಗೆತಕ್ಷಣ ಪರಿಹಾರ ಸಿಕ್ಕರೆ ಮತ್ತು ಕೆಲವರಿಗೆ ಆರ್ಥಿಕ ನೆರವು, ಸಮಸ್ಯೆಗಳಿಗೆ ಪರಿಹಾರದ  ಭರವಸೆಗಳನ್ನು ಪಡೆದುಕೊಂಡವರು ಸಂತಸದಿಂದ ಕೃತಜ್ಞತೆ ಸಲ್ಲಿಸಿದ ದೃಶ್ಯ  ಜನ ಮೆಚ್ಚುಗೆ ಗಳಿಸಿದಂತಿತ್ತು. ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ‌ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಹೊಸನಗರ ತಾಲೂಕಿನ…

Read More

ಸಿದ್ದರಾಮಯ್ಯನವರು ತನ್ನ ರಾಜಕೀಯ ತೀಟೆಗೋಸ್ಕರ ಬಜೆಟ್ ಅನ್ನು ದುರುಪಯೋಗ ಮಾಡಿಕೊಂಡಿದ್ದಾರೆ – ಆರಗ ಜ್ಞಾನೇಂದ್ರ|Araga

ಸಿದ್ದರಾಮಯ್ಯನವರು ತನ್ನ ರಾಜಕೀಯ ತೀಟೆಗೋಸ್ಕರ ಬಜೆಟ್ ಅನ್ನು ದುರುಪಯೋಗ ಮಾಡಿಕೊಂಡಿದ್ದಾರೆ – ಆರಗ ಜ್ಞಾನೇಂದ್ರ  ರಿಪ್ಪನ್ ಪೇಟೆ – ಜು.7 ರಂದು ಸಿದ್ದರಾಮಯ್ಯನವರು ರಾಜ್ಯ ಬಜೆಟ್ ಮಂಡಿಸಿದರು. ಅದು ಬಜೆಟ್ ಪುಸ್ತಕ ಎನ್ನುವುದಕ್ಕಿಂತ ಕೇಂದ್ರ ಹಾಗೂ ರಾಜ್ಯದ ಹಳೆಯ ಬಿಜೆಪಿ ಸರ್ಕಾರವನ್ನು ಟೀಕೆ ಮಾಡುವ ಪುಸ್ತಕ.14 ನೇ ಬಾರಿ ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದ್ರು. ಆದರೆ ತನ್ನ ರಾಜಕೀಯ ತೀಟೆಗೋಸ್ಕರ ಬಜೆಟ್ ಅನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇದು ಕೂಡ ಇತಿಹಾಸದಲ್ಲಿ ಸೇರಿರುವ ಘಟನೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು….

Read More

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಒ ಅಮಾನತ್ತು|PDO

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಓ ರವರನ್ನು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿ ಗ್ರಾಮದಲ್ಲಿ ನಡೆದಿದೆ. ಚೋರಡಿ ಗ್ರಾಮ ಪಂಚಾಯತಿ  ಪಿಡಿಒ ಗೋಪಾಲಾಚಾರಿ ಎಂಬುವರನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಪ್ರಕಾಶ್ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ. ದೂರದೃಷ್ಠಿ ಯೋಜನೆ ಮತ್ತು ಗ್ರಂಥಾಲಯಗಳ ಡಿಜಿಟಲೀಕರಣಗೊಳಿಸಲು ನಿರ್ಲಕ್ಷ ವಹಿಸಿದ್ದರ ಹಿನ್ನಲೆಯಲ್ಲಿ ಅವರನ್ನ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ದೂರದೃಷ್ಠಿ ಯೋಜನೆಯನ್ನ ಮತ್ತು ಗ್ರಂಥಾಲಯಗಳಲ್ಲಿ ಡಿಜಿಟಲೀಕರಣಗೊಳಿಸುವಂತೆ ಸೂಚಿಸಿ ಅನೇಕ ತಿಂಗಳಾದರೂ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇತ್ತೀಚೆಗೆ ಸಿಇಒ ಪ್ರಕಾಶ್ ಗ್ರಾಮ…

Read More