ಅಪ್ರಾಪ್ತೆಯ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಶಿವಮೊಗ್ಗ : ಶಾಲೆಗೆ ಹೊರಟ್ಟಿದ್ದ ವಿದ್ಯಾರ್ಥಿ ಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿರುವ‌ ಘಟನೆ‌ ವರದಿಯಾಗಿದೆ. ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರು ಗ್ರಾಮದಲ್ಲಿನ ಹಳ್ಳಿಮನೆ  ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ 15 ವರ್ಷದ ಮಗಳನ್ನು ಅದೇ ಹೋಟೆಲ್ ನಲ್ಲಿ ಸಪ್ಲೈರ್ ಆಗಿ ಕೆಲಸ ಮಾಡುತ್ತಿದ್ದ ನಿದಿಗೆ ಗ್ರಾಮದ ಉಮೇಶ್, ( 28), ಬಾಲಕಿಯನ್ನು  ಪರಿಚಯಮಾಡಿಕೊಂಡು ತುಂಬಾ ಸಲುಗೆಯಿಂದ ಮಾತನಾಡುತ್ತಿದ್ದನು. ನಿನ್ನೆ ಬಾಲಕಿ ಶಾಲೆಗೆ ಹೋಗಲು ಹೊರಟಿದ್ದಾಗ ಬಾರಂದೂರಿನಿಂದ ತರೀಕೆರೆಗೆ ಹೋಗುವ ಬಸ್…

Read More

ರಾಜ್ಯಾದ್ಯಂತ ಭರ್ಜರಿ ಪ್ರದರ್ಶನಗೊಳ್ಳುತ್ತಿರುವ ಮಲೆನಾಡಿನ ಯುವ ನಿರ್ದೇಶಕ ಉಮೇಶ್ ನಿರ್ದೇಶನದ ‘ಟಗರು ಪಲ್ಯ’ ಚಿತ್ರ|sandalwood

ಮಲೆನಾಡಿನ ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶಿಸಿರುವ ಟಗರು ಪಲ್ಯ ಚಲನಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತಿದ್ದೆ. ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದ ಉಮೇಶ್ ಕೆ ಕೃಪಾ ರವರ ತಂದೆ ರೈಲ್ವೆ ನೌಕರರಾದ ಕೃಷ್ಣಪ್ಪ ಹಾಗೂ ತಾಯಿ‌ ಕಾಳಮ್ಮ 45 ವರ್ಷಗಳ ಹಿಂದೆ ರೈಲ್ವೆ ಇಲಾಖೆಯಿಂದ ಕೆಲಸಕ್ಕೆ ಬಂದ ಅವರು ಕುಂಸಿ ಗ್ರಾಮದಲ್ಲಿ ನೆಲೆಸಿದ್ದಾರೆ. ಕೃಷ್ಣಪ್ಪ ಹಾಗೂ ಕಾಳಮ್ಮ ದಂಪತಿಗಳಿಗೆ ಯುವ ನಿರ್ದೇಶಕ ಉಮೇಶ್ ,ರೈಲ್ವೆ ಇಲಾಖೆಯ ಉದ್ಯೋಗಿ ರಂಗಸ್ವಾಮಿ ,ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಪ್ರಕಾಶ್…

Read More

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read More

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘದ ಆಗ್ರಹ ರಿಪ್ಪನ್‌ಪೇಟೆ: ಗ್ರಾಮದಲ್ಲಿನ ಹಿಂದೂ ರುದ್ರಭೂಮಿಯ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಲಾದ ‘ಸಿಲಿಕಾನ್ ಚೇಂಬರ್’ ಹಾಗೂ ದಹನ ಯಂತ್ರವನ್ನು ಇಂದು ಗ್ರಾಮಾಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮುರುಳಿಧರ್ ಶೆಟ್ಟಿ, ಮಾನವ…

Read More

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬನ ಮೊಬೈಲ್ ಹಾಗೂ ಹಣ ಮತ್ತು ಆಭರಣ ಕಿತ್ತುಕೊಂಡು ಹೋಗಿರುವ ಕೇಸ್​ವೊಂದು ದಾಖಲಾಗಿತ್ತು. ಬ್ಯಾಂಕ್ ಲೋನ್ ನೀಡುವವರು ಎಂದು ಹೇಳಿಕೊಂಡು ಒಳಕ್ಕೆ ನುಗ್ಗಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದರು. ಸದ್ಯ ಪ್ರಕರಣವನ್ನು ಹೊಳೆಹೊನ್ನೂರು ಪೊಲೀಸರು ಭೇದಿಸಿದ್ದಾರೆ.  ದಿನಾಂಕ: 11-12-2023 ರಂದು ಹೊಳೆಹೊನ್ನೊರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಬೀ ಬೀರನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ…

Read More

Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ…

Read More

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ!

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ! ಕೊಲೆಯಾಗಿದ್ದಾಳೆ ಎಂದುಕೊಳ್ಳಲಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ಪತ್ತೆ ಮೈಸೂರು – ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪತಿಯು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೇ, ಆಕೆ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಪ್ರಕರಣದಲ್ಲಿ ಎರಡು ವರ್ಷ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದ ಪತಿಯು ಈಚೆಗಷ್ಟೇ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು. ನಾಲ್ಕು ವರ್ಷದ ಹಿಂದೆ ಕೊಲೆಯಾಗಿದ್ದಾರೆ ಎಂದು ಸುದ್ದಿಯಾಗಿದ್ದ ಮಹಿಳೆ ಮಲ್ಲಿಗೆ, ಪ್ರಿಯಕರ ಗಣೇಶ್‌ನೊಂದಿಗೆ ಪತ್ತೆಯಾಗಿದ್ದು, ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು…

Read More

ಆಗುಂಬೆ ಘಾಟಿಯಲ್ಲಿ ಮತ್ತೇ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಮರಗಳು: ಸಂಚಾರ ಸಂಪೂರ್ಣ ಅಸ್ತವ್ಯಸ್ತ

ಆಗುಂಬೆ : ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಮತ್ತೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಸಂಚಾರ ಅಸ್ತವ್ಯಸ್ತವಾಗಿದೆ. ಇತ್ತೀಚೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು ಹಾಗೂ ನೆನ್ನೆಯಿಂದ ಲಘ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮರ ಬಿದ್ದು ಗಂಟೆಗಳಾದರೂ ಇನ್ನೂ ತೆರವು ಕಾರ್ಯಾಚರಣೆ ಪ್ರಾರಂಭವಾಗಿಲ್ಲ,ಸುಮಾರು 4 ರಿಂದ 5 ಕಿಮೀ ರಸ್ತೆಯಲ್ಲಿ ಲಘು ವಾಹನಗಳಿದ್ದು ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ. ರೋಗಿಗಳನ್ನು…

Read More

ಹೆತ್ತ ತಾಯಿಯ ಮನೆಯಲ್ಲಿಯೇ ಕಳ್ಳತನ ಮಾಡಿದ ಮಗ – ಬಂಧನ|Theft

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗೋಪಾಳದ ಶ್ರೀರಾಮನಗರದ ಗಿರೀಶ್ ಅಲಿಯಾಸ್ ಸುಣ್ಣ ಬಂಧಿತ ಮನೆ ಕಳ್ಳ. ಆರೋಪಿಯು ತನ್ನ ತಾಯಿ ಮನೆಯಲ್ಲಿಲ್ಲದ ವೇಳೆ ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಗಿರೀಶ್​ ತಾಯಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗಿರೀಶ್​​ ಕದ್ದಿರುವ ಅನುಮಾನದಿಂದ ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ. ಈತ ಹಮಾಲಿ ಕೆಲಸ ಮಾಡುತ್ತಿದ್ದು,…

Read More

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ ಆನಂದಪುರ: ಇಲ್ಲಿಗೆ  ಸಮೀಪವಿರುವ ಮದ್ಲೆಸರ ನಾವಟಿ ಗ್ರಾಮದಲ್ಲಿ   ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ಘಟನೆಯಲ್ಲಿ ಮನೆಯು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ಲೆಸರ ನಾವಟಿ ಗ್ರಾಮದ ನಿವಾಸಿ ಜಯಮ್ಮ ಅವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ಮೇಲ್ಚಾವಣಿ ಸೇರಿದಂತೆ ಒಳಗೆ ಇದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿವೆ. ಸ್ಥಳೀಯ ಶಾಸಕರಾದ…

Read More